BJP MLA Madal Virupakshappa Son's Bribe Case: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ 40 ಲಕ್ಷ ರೂ. ಲಂಚ ಪಡೆಯುವಾಗಿ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
BJP VS Congress: "ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ಮೋದಿಯವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ ಎಂದು ಅಮಿತ್ ಶಾ ವಿರುದ್ಧ ಎಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ ಮಾತನಾಡಿದ, ಮತ್ತೆ ಡಬಲ್ ಇಂಜನ್ ಸರ್ಕಾರ ಅಧಿಕಾರಕ್ಕೆ ತರಲು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬೆಂಗಳೂರಲ್ಲಿ ಮನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಕರುನಾಡಿನಲ್ಲಿ ಕಮಲ ಅರಳಿಸಲು ಚಾಣಕ್ಯನ ಟಾಸ್ಕ್. ಅಮಿತ್ ಶಾ ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರು. ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್, ಬಿ.ಎಲ್. ಸಂತೋಷ್, ಗೃಹ ಸಚಿವ ಆರಗ ಭೇಟಿ. ದೆಹಲಿಗೆ ತೆರಳುವ ಮುನ್ನ ನಾಯಕರ ಜೊತೆ ಶಾ ಮಹತ್ವದ ಚರ್ಚೆ. ರಾಜ್ಯ ಚುನಾವಣೆ ಗೆಲ್ಲುವ ಸಂಬಂಧ ಮಹತ್ವದ ಮಾತುಕತೆ. ಚುನಾವಣೆ ತಂತ್ರಗಳ ಬಗ್ಗೆ ಅಮಿತ್ ಶಾರಿಂದ ಸಲಹೆ ಸೂಚನೆ.
ಬೆಂಗಳೂರಲ್ಲಿ ಬಿಜೆಪಿ ನಾಯಕರ ಮಹತ್ವ ಸಭೆ. ಅಮಿತ್ ಶಾ ಅವರ ಅನುಪಸ್ಥಿತಿಯಲ್ಲಿ ನಡೆದ ಬಿಜೆಪಿ ಸಭೆ. ಧರ್ಮೇಂದ್ರ ಪ್ರಧಾನ್, ಮನ್ಸೂಖ್ ಮಾಂಡವೀಯಾ ನೇತೃತ್ವದಲ್ಲಿ ನಡೆದ ಸಭೆ. ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿಗಳು ಭಾಗಿ.
ನಿನ್ನೆ(23, ಗುರುವಾರ) ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಷ ಅಮಿತ್ ಷಾ ಅವರ ಅನುಪಸ್ಥಿತಿಯಲ್ಲಿ ಧರ್ಮೇಂದ್ರ ಪ್ರಧಾನ್ ಮತ್ತು ಮುನ್ಸೂಖ್ ಮಾಂಡವೀಯ ನೇತೃತ್ವದಲ್ಲಿ ಬಿಜೆಪಿ ನಾಯಕರ ಮಹತ್ವ ಸಭೆ ಜರುಗಿತು.
ಇಂದು ಬಿಜೆಪಿ ಚುನಾವಣಾ ಚಾಣಕ್ಯ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಮತ್ತೆ ರಾಜ್ಯದಲ್ಲಿ ಕಮಲ ಅರಳಿಸಲು ನಯಾ ತಂತ್ರ ಹೂಡಿದ್ದಾರೆ. ಅಲ್ಲದೇ ಇಂದು ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿದ್ದು, ವಿವಿಧ ಕ್ಷೇತ್ರಗಳ ಪ್ರಮುಖರ ಜೊತೆ ಸಂವಾದ ನಡೆಸಿದ್ದಾರೆ.
ನಾಳೆ ರಾಜ್ಯಕ್ಕೆ ಗೃಹಸಚಿವ ಅಮಿತ್ ಶಾ ಆಗಮನ ಹಿನ್ನೆಲೆ. ನಾಳೆಯಿಂದ ವಾಹನ ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಜಾಮ್ ಬಿಸಿ. 23ರ ಮಧ್ಯಾಹ್ನದಿಂದ 24 ರವರೆಗೆ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ. ಸುಗಮ ಸಂಚಾರಕ್ಕೆ ಟ್ರಾಫಿಕ್ ಪೊಲೀಸರಿಂದ ಮುಂಜಾಗೃತ ಕ್ರಮ. ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯ ಮಾರ್ಗ ಬಳಸಲು ಮನವಿ.ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯಾ ಮಾರ್ಗ ಬಳಸಲು ಸೂಚನೆ
Amit Shah: ಕಳೆದ 70 ವರ್ಷಗಳಲ್ಲಿ ಕಾಶ್ಮೀರಕ್ಕೆ 12 ಸಾವಿರ ಕೋಟಿ ರೂ. ಹೂಡಿಕೆ ಮಾಡಲಾಗಿತ್ತು. ಆದರೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಕೇವಲ 3 ವರ್ಷಗಳಲ್ಲಿ 12 ಸಾವಿರ ಕೋಟಿ ರೂ. ಹಣವನ್ನು ಅಭಿವೃದ್ಧಿಗಾಗಿ ವಿನಿಯೋಗಿಸಲಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಜಿಂದಾಲ್ ಕಂಪನಿ ಯಲ್ಲಿರುವ ಹಯಾತ್ ಹೋಟೆಲ್ ನಲ್ಲಿ ಕೋರ ಕಮೀಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೋರ ಕಮೀಟಿ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಸಚಿವರು ಭಾಗಿಯಾಗಲಿದ್ದಾರೆ. ಸಂಡೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯ ವಿಧಾನ ಸಭೆಯ ಚುನಾವಣೆ ಹಿನ್ನಲೆ ಅಮಿತ್ ಶಾ ಕೋರ ಕಮೀಟಿ ಸಭೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಯಾರೇ ಬಂದರೂ ಸಹ ಕರ್ನಾಟಕದ ಜನತೆ ತೀರ್ಮಾನ ಮಾಡಿದ್ದಾರೆ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ಗೆ ಮತ್ತೆ ಆಶೀರ್ವಾದ ಮಾಡಬೇಕು ಅಂತಾ ರಾಜ್ಯದ ಜನತೆ ತೀರ್ಮಾನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.