ರ್ಯಾಲಿ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜನರು ನೀಡಿದ ಬೆಂಬಲಕ್ಕೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ(AAP) ಮತ ಚಲಾಯಿಸುವಂತೆ ಒತ್ತಾಯಿಸಿದರು.
ಮುಂದಿನ ತಿಂಗಳು ನಡೆಯಲಿರುವ ದೆಹಲಿ ಚುನಾವಣೆಗೆ ಮುನ್ನ ಬಿಜೆಪಿ ಅಭೂತ ಪೂರ್ವ 5,000 ಸಣ್ಣ ರ್ಯಾಲಿಗಳನ್ನು ಯೋಜಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆ ಮೂಲಕ ದೆಹಲಿಯಲ್ಲಿ ಆಡಳಿತಾರೂಡ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಸೋಲಿಸಲು ಬಿಜೆಪಿ ರಣತಂತ್ರವನ್ನು ರೂಪಿಸಿಸುತ್ತಿದೆ ಎನ್ನಲಾಗಿದೆ.
ಮುಂಬರುವ ಚುನಾವಣೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಜನರು ಆಮ್ ಆದ್ಮಿ ಪಕ್ಷಕ್ಕೆ(AAP) ಮತ ನೀಡುತ್ತಾರೆ ಎಂದು ತಾವು ನಂಬಿರುವುದಾಗಿ ಹೇಳಿದರು.
ದೆಹಲಿಯ ನಾಲ್ವರು ಸಾಮೂಹಿಕ ಅತ್ಯಾಚಾರ ಆರೋಪಿಗಳ ಮರಣದಂಡನೆ ವಿಳಂಬಕ್ಕೆ ಕೇಂದ್ರ ಸಚಿವ ಸ್ಮೃತಿ ಇರಾನಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ದೂಷಿಸಿದ ನಂತರ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂತಹ ಸೂಕ್ಷ್ಮ ವಿಷಯದ ಬಗ್ಗೆ ರಾಜಕೀಯವನ್ನು ಮಾಡಬಾರದು ಎಂದು ಪ್ರತಿಕ್ರಿಯಿಸಿದರು.
ಫೆಬ್ರವರಿ 8 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಇಂದು ತನ್ನ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿತು.
ದೆಹಲಿ ಸರ್ಕಾರಿ ಶಾಲೆಗೆ ನಂ.1 ಸ್ಥಾನ ಪಡೆದಿದ್ದು,ಇನ್ನೂ ಎರಡು ಶಾಲೆಗಳು ಅಗ್ರ 10 ರಲ್ಲಿ ಸ್ಥಾನ ಪಡೆದಿವೆ.ಈ ಶ್ರೇಯಾಂಕಗಳನ್ನು ಕಳೆದ ವಾರ 'ಇಂಡಿಯನ್ ಸ್ಕೂಲ್ ರ್ಯಾಂಕಿಂಗ್ 2019' ನಲ್ಲಿ ಎಜುಕೇಶನ್ ವರ್ಲ್ಡ್ ಎಂಬ ಶಿಕ್ಷಣ ಪೋರ್ಟಲ್ ಬಿಡುಗಡೆ ಮಾಡಿದೆ.
ಕಳೆದ ಐದು ವರ್ಷಗಳಲ್ಲಿ ಆಮ್ ಆದ್ಮಿ ಪಕ್ಷ (AAP) ಮಾಡಿದ ಕಾರ್ಯಗಳ ಮೇಲೆ ದೆಹಲಿಯಲ್ಲಿ ಮುಂಬರುವ ಚುನಾವಣೆ ನಡೆಯಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ (ಜನವರಿ 6) ಹೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೊಸ ಪೌರತ್ವ ಕಾನೂನು ಮತ್ತು ಪ್ರತಿಭಟನೆಗಳ ಹೊರತಾಗಿಯೂ ಕೇಂದ್ರ ಸರ್ಕಾರ ಅದನ್ನು ಜಾರಿಗೊಳಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಮುಂಬರುವ ದಿನಗಳಲ್ಲಿ ದೆಹಲಿ ವಿಧಾನಸಭಾ ಚುನಾವಣೆಗೆ ಹೋಗುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇಂತಹ ಹಿಂಸಾಚಾರ ನಡೆಸಲಾಗುತ್ತಿದೆ. ಅಂತಹ ಜನರ ಆಶಯಗಳು ಯಶಸ್ವಿಯಾಗಲು ಬಿಡಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಪ್ರಶಾಂತ್ ಕಿಶೋರ್ ಬಿಹಾರದ ನಿತೀಶ್ ಕುಮಾರ್ ಅವರ ಜನತಾದಳದ (ಯುನೈಟೆಡ್) ಉಪಾಧ್ಯಕ್ಷರಾಗಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ನಂತರ ಅವರು 2015 ರಲ್ಲಿ ಜೆಡಿಯುಗೆ ಸೇರಿದರು.
ದೆಹಲಿ ಸರ್ಕಾರ ಡಿಸೆಂಬರ್ 16 ರಿಂದ ಜನರಿಗೆ ಉಚಿತ ವೈಫೈ ಸೇವೆಯನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪ್ರಕಟಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ಮುಖ್ಯಸ್ಥರು ದೆಹಲಿ ನಿವಾಸಿಗಳಿಗೆ ಡಿಸೆಂಬರ್ 16 ರಿಂದ ಉಚಿತ ವೈಫೈ ನೀಡಲಾಗುವುದು ಎಂದು ಹೇಳಿದರು.
ಹಿರಿಯ ನಾಗರಿಕರಿಗಾಗಿ ಉಚಿತ ಯಾತ್ರಾ ಯೋಜನೆಯಲ್ಲಿ ಕರ್ತಾರ್ಪುರ್ ಸಾಹಿಬ್ ಗುರುದ್ವಾರವನ್ನು ಸೇರಿಸಲು ದೆಹಲಿ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ದೆಹಲಿ ಕ್ಯಾಬಿನೆಟ್ ಸಭೆಯಲ್ಲಿ ಇದಕ್ಕೆ ತಾತ್ವಿಕವಾಗಿ ಅನುಮೋದನೆ ನೀಡಿತು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದ್ದು, "ಜನರು ಉಸಿರಾಡಲು ತೊಂದರೆ ಎದುರಿಸುತ್ತಿದ್ದಾರೆ. ಮಾಲಿನ್ಯದಿಂದ ಮಕ್ಕಳಿಗೆ ತೊಂದರೆಯಾಗದಂತೆ ನಿಗಾ ವಹಿಸಲು ಖಾಸಗಿ ಮತ್ತು ಸರ್ಕಾರಿ ಶಾಲೆಯ ಪ್ರತಿ ವಿದ್ಯಾರ್ಥಿಗೂ ಎರಡು 'ಮಾಸ್ಕ್'ಗಳನ್ನು ವಿತರಿಸುತ್ತಿದ್ದೇವೆ" ಎಂದು ಶಾಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸುವಾಗ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.
ದೆಹಲಿ ಸರ್ಕಾರವು ಒಟ್ಟು 45 ಕಿ.ಮೀ ವಿಸ್ತಾರದ ಕನಿಷ್ಠ ಒಂಬತ್ತು ರಸ್ತೆಗಳನ್ನು ಮರುವಿನ್ಯಾಸಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಪ್ರಕಟಿಸಿದ್ದಾರೆ. ರಸ್ತೆಗಳನ್ನು ಅಂತರರಾಷ್ಟ್ರೀಯ ಮಾನದಂಡಗಳೊಂದಿಗೆ ಮರುವಿನ್ಯಾಸಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.