Asaduddin Owaisi: ಪೌರತ್ವ ತಿದ್ದುಪಡಿ ಕಾಯ್ದೆ ಅಂದರೆ ಸಿಎಎಗೆ ಸಂಬಂಧಿಸಿದಂತೆ ದೇಶದಲ್ಲಿ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಸಿಎಎ ವಿಚಾರದಲ್ಲಿ ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ಕೇಂದ್ರ ಸರ್ಕಾರದ ಮೇಲೆ ಕೆಂಡಕಾರಿದ್ದಾರೆ.
Woman Reservation Bill: ಸಂಸತ್ತಿನ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿದೆ. ಇದರ ಪರವಾಗಿ 454 ಮತಗಳು ಚಲಾವಣೆಗೊಂಡರೆ, ವಿರುದ್ಧ ಕೇವಲ 2 ಮತಗಳು ಚಲಾವಣೆಯಾದವು. ಈ ಇಬ್ಬರು ವ್ಯಕ್ತಿಗಳು ಯಾರು ಎಂಬುದು ಈಗ ಮುಖ್ಯವಾದ ಪ್ರಶ್ನೆಯಾಗಿದೆ.
Owaisi On PM Modi: ಈ ಕುರಿತು ಮಾತನಾಡಿರುವ ಒವೈಸಿ, ಯುಎಇ, ಸೌದಿ ಅರೇಬಿಯಾ ಹಾಗೂ ಈಜಿಪ್ಟ್ ನಂತಹ ರಾಷ್ಟ್ರಗಳು ಪ್ರಧಾನಿ ಮೋದಿಯನ್ನು ಗೌರವಿಸಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳುತ್ತಾರೆ. ಆದರೆ, ಸೌದಿ ಅರೇಬಿಯಾದ ರಾಷ್ಟ್ರಪತಿಗಳ ಜೊತೆಗೆ ಭಾರತ ಅಥವಾ ಅಮರಾವತಿಯ ಮುಸ್ಲಿಮರ ಯಾವುದೇ ಸಂಬಂಧವಿಲ್ಲ. ಯುಎಇ ರಾಷ್ಟ್ರಪತಿಗಳ ಜೊತೆಗೂ ಕೂಡ ಅವರು ಯಾವುದೇ ಸಂಬಂಧ ಹೊಂದಿಲ್ಲ ಎಂದು ನಾನು ಅವರಿಗೆ ಹೇಳಬಯಸುತ್ತೇನೆ ಎಂದು ಒವೈಸಿ ಹೇಳಿದ್ದಾರೆ.
ಮುಸ್ಲಿಂ ಅಸ್ಮಿತೆಗೆ ಬಿಜೆಪಿ ವಿರುದ್ಧವಾಗಿದೆ. ಮುಂದೊಂದು ದಿನ ಹಿಜಾಬ್ ಧರಿಸಿದ ಮಹಿಳೆ ಈ ದೇಶದ ಪ್ರಧಾನಿಯನ್ನಾಗಿ ನೋಡಲು ನಾನು ಬಯಸುತ್ತೇನೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಹೈದರಾಬಾದ್ನಲ್ಲಿ ನಡೆದ ಸಭೆಯ ವೀಡಿಯೊವನ್ನು ಟ್ವೀಟ್ ಮಾಡಿರುವ ಅವರು, "ಮುಸ್ಲಿಮರ ಜನಸಂಖ್ಯೆಯು ಹೆಚ್ಚಾಗುತ್ತಿಲ್ಲ, ಬದಲಿಗೆ ಅದು ಕ್ಷೀಣಿಸುತ್ತಿದೆ. ಮುಸ್ಲಿಮರಲ್ಲಿ ಮಕ್ಕಳ ನಡುವಿನ ಅಂತರವೂ ಹೆಚ್ಚುತ್ತಿದೆ. ಕಾಂಡೋಮ್ ಹೆಚ್ಚು ಯಾರು ಬಳಸುತ್ತಿದ್ದಾರೆ? ಅದು ನಾವು” ಎಂದು ಹೇಳಿದರು.
Mamata Defending PM Modi: ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಒಗ್ಗೂಡುವಿಕೆಯ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರ್.ಎಸ್.ಎಸ್ ಅನ್ನು ಬಣ್ಣಿಸಿ ನಂತರ ಪ್ರಧಾನಿ ಮೋದಿ ಸಮರ್ಥಿಸಿದ್ದು, ನಿತೀಶ್ ಹಾಗೂ ಕಾಂಗ್ರೆಸ್ ಗೆ ನೀಡುತ್ತಿರುವ ಸಂಕೇತವಾಗಿದೆಯೇ ಎಂಬ ಗುಸುಗುಸು ಇದೀಗ ರಾಜಕೀಯ ವಲಯದಲ್ಲಿ ಕೇಳಿಬರಲಾರಂಭಿಸಿದೆ.
Asaduddin Owaisi Statement: ವೋಟ್ ಬ್ಯಾಂಕ್ ರಾಜಕಾರಣದ ಹಿನ್ನೆಲೆ ತೆಲಂಗಾಣದಲ್ಲಿ ಟಿಆರ್ಎಸ್ ಅಧಿಕೃತವಾಗಿ 'ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸುತ್ತಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಕ್ಕೆ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ.
ಹೈದರಾಬಾದ್ನಲ್ಲಿ ಸೋಮವಾರ ಸಂಜೆಯಿಂದ ಮುಸ್ಲಿಮರ ಪ್ರತಿಭಟನೆ ಮುಂದುವರಿದಿದೆ. ಹೈದರಾಬಾದ್ ಪೊಲೀಸರು ಟಿ ರಾಜಾ ಸಿಂಗ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದರೂ ಸಹ ಅವರನ್ನು ಬಂಧಿಸಬೇಕು ಎಂದು ಮುಸ್ಲಿಮರು ಒತ್ತಾಯಿಸಿದ್ದಾರೆ.
Petrol Diesel Price: 'ಪೆಟ್ರೋಲ್ ಬೆಲೆ ಏರಿಕೆಗೆ ತಾಜ್ ಮಹಲ್ ಕಾರಣ' ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಚಿತ್ರ ಹೇಳಿಕೆ ನೀಡಿದ್ದಾರೆ. ಒವೈಸಿ ಪೆಟ್ರೋಲ್ ವಿಚಾರದಲ್ಲಿ ಈ ವಿಚಿತ್ರ ಹೇಳಿಕೆಯನ್ನು ಏಕೆ ನೀಡಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
Hijab Row: ಹಿಜಾಬ್ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್ (Karnataka High Court) ತೀರ್ಪು ನೀಡಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದೆ. ಅದರ ನಂತರ AIMIM ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಒಪ್ಪಲು ನಿರಾಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ತಾವು ಒಪ್ಪುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.
UP Election Result 2022: ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ಅವರು ಬಿಜೆಪಿ, ಎಸ್ಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಗುರಿಯಾಗಿಟ್ಟುಕೊಂಡು ಚುನಾವಣೆಯಲ್ಲಿ (UP Assembly Elections 2022) ಭಾರಿ ಪ್ರಚಾರದ ಮೂಲಕ ಸ್ಪರ್ಧಿಸಿದ್ದರು. ಆದರೆ, ಗುರುವಾರ ಹೊರಬಿದ್ದ ಫಲಿತಾಂಶ ಬೇರೆ ಕಥೆಯನ್ನೇ ಹೇಳುತ್ತಿವೆ.
ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನಕ್ಕೆ ಮುನ್ನ ಕೊನೆಯ ದಿನ ಪ್ರಚಾರ ನಡೆಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಮಾಜವಾದಿ ಪಕ್ಷ (ಎಸ್ಪಿ) ಮತದಾರರಿಗೆ ತಲಾಕ್, ತಲಾಖ್, ತಲಾಖ್ ಎಂದು ಹೇಳುವಂತೆ ಮನವಿ ಮಾಡಿದರು.
ಹಿಜಾಬ್ ಧರಿಸಿದ ಹುಡುಗಿ ಮುಂದೊಂದು ದಿನ ದೇಶದ ಪ್ರಧಾನಿಯಾಗುತ್ತಾಳೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಮುಸ್ಲಿಂ ಮಹಿಳೆಯರ ತಲೆ ಸ್ಕಾರ್ಫ್ ವಿವಾದದ ನಡುವೆಯೇ ಹೇಳಿದ್ದಾರೆ.
ಉತ್ತರಪ್ರದೇಶದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಅವರು, ‘ನಿಮ್ಮ ದೇಶದಲ್ಲಿಯೇ ನಿಮಗೆ ಅನೇಕ ಸಮಸ್ಯೆಗಳಿವೆ. ಆ ಸಮಸ್ಯೆಗಳ ಬಗ್ಗೆ ಮೊದಲು ಗಮನಹರಿಸಿ ಅಂತಾ ಓವೈಸಿ ಪಾಕಿಸ್ತಾನಕ್ಕೆ ಸಲಹೆ ನೀಡಿದ್ದಾರೆ.
Firing On AIMIM Chief: ಅಸಾದುದ್ದೀನ್ ಓವೈಸಿ (Asaduddin Owaisi) ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರರ ಬಗ್ಗೆ ಹಲವು ಮಾಹಿತಿಗಳು ಬಹಿರಂಗಗೊಂಡಿವೆ. ದಾಳಿಕೋರರು ಒವೈಸಿಯ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲು ಯೋಜಿಸಿದ್ದರು.
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಶನಿವಾರದಂದು ಉತ್ತರ ಪ್ರದೇಶದಲ್ಲಿ ಬಾಬು ಸಿಂಗ್ ಕುಶ್ವಾಹಾ ಮತ್ತು ಭಾರತ್ ಮುಕ್ತಿ ಮೋರ್ಚಾದೊಂದಿಗೆ ತಮ್ಮ ಮೈತ್ರಿಯನ್ನು ಘೋಷಿಸಿದ್ದಾರೆ.
Owaisi On Rahul Remarks: ಭಾನುವಾರ ರಾಜಸ್ಥಾನದ (Rajasthan) ರಾಜಧಾನಿ ಜೈಪುರದಲ್ಲಿ (Jaipur) ಕಾಂಗ್ರೆಸ್ನ ‘ಹಣದುಬ್ಬರ ತೊಲಗಿಸಿ ರ್ಯಾಲಿ’ಯಲ್ಲಿ ರಾಹುಲ್ ಗಾಂಧಿ ಹಣದುಬ್ಬರಕ್ಕಿಂತ (Inflation) ಹಿಂದೂ (Hindu) ಮತ್ತು ಹಿಂದುತ್ವದ (Hindutva) ಬಗ್ಗೆ ಹೆಚ್ಚು ಮಾತನಾಡಿದ್ದಾರೆ ಮತ್ತು ಅವುಗಳ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದ ಅವರು, ಹಿಂದುತ್ವವಾದಿಗಳನ್ನು ಅಧಿಕಾರದಿಂದ ತೆಗೆದುಹಾಕಿ ಹಿಂದೂಗಳನ್ನು ಮರಳಿ ಕರೆತರುವಂತೆ ವೇದಿಕೆಯಲ್ಲಿ ಮನವಿ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಹಿಂತೆಗೆದುಕೊಳ್ಳುವಂತೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ ಮತ್ತು ಅದನ್ನು ರದ್ದುಗೊಳಿಸದಿದ್ದರೆ ಪ್ರತಿಭಟನಾಕಾರರು "ಉತ್ತರ ಪ್ರದೇಶದಲ್ಲಿ ಬೀದಿಗಿಳಿದು ಮತ್ತೊಂದು ಶಾಹೀನ್ ಬಾಗ್ ಮಾಡುತ್ತಾರೆ" ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.