ಅಥಣಿ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಮಾಜಿ ಸಚಿವ ಲಕ್ಷ್ಮಣ ಸವದಿ ಇವತ್ತೇ ತಿರ್ಮಾನ ಮಾಡುತ್ತಾರಾ? ಅನ್ನೋ ಪ್ರಶ್ನೆ ಮೂಡಿದೆ. ಬಿಜೆಪಿ ಬಿಟ್ಟು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರಾ? ಅನ್ನೂ ಕುತೂಹಲ ಸಹ ಮೂಡಿದೆ.
Belagavi : ದೀರ್ಘ ದಂಡ ನಮಸ್ಕಾರ ಹಾಕುತ್ತಿರುವ ಯುವತಿಯ ತಲೆಮೇಲೆ ಕಾರಿನ ಚಕ್ರ ಹರಿದು ಯುವತಿಯು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಣ ಸವದಿಗೆ ಅಥಣಿಯಿಂದ ಟಿಕೆಟ್ ಕೊಡುವ ವಿಚಾರ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ನಮ್ಮದು ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಪಕ್ಷ. ಹೀಗಾಗಿ ಟಿಕೆಟ್ಗೆ ಪೈಪೋಟಿ ಇರುತ್ತೆ. ಏನೇ ಇದ್ರೂ ಕೇಂದ್ರ ನಾಯಕರು ಬಗೆಹರಿಸ್ತಾರೆ ಎಂದಿದ್ದಾರೆ..
ನಮ್ಮ ತಂದೆ ಅವರು ಈ ಬಾರಿ ಸಾರ್ವತ್ರಿಕ ಚುನಾವಣೆ ಸ್ವರ್ಧೆ ಮಾಡುತ್ತಾರೆ ಅಥಣಿ ಮತ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಅವರು ಸ್ಪೋಟಕ ಹೇಳಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಅಥಣಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಕುಮಠಳ್ಳಿ ಬೆಂಬಲಿಗರು ಆಯ್ಕೆಯಾಗಿದ್ದು ಲಕ್ಷಣ ಸವದಿ ಬಣದ ಅಸಮಾಧಾನಕ್ಕೆ ಕಾರಣವಾಗಿದೆ..
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಪಿ.ಕೆ. ನಾಗನೂರಲ್ಲಿ ಸರ್ಕಾರ, ಅಧಿಕಾಗಳ ನಿರ್ಲಕ್ಷ್ಯಕ್ಕೆ ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಸೂರಿಲ್ಲದೆ ನೆರೆ ಸಂತ್ರಸ್ತರು ಕಂಗಾಲಾಗಿದ್ದಾರೆ.
ಆರೋಗ್ಯ ಸಚಿವರೇ ನಿಮ್ಮ ಇಲಾಖೆಯ ಅವ್ಯವಸ್ಥೆ ಸ್ಟೋರಿ ನೀವು ನೋಡಲೇಬೇಕು. ಪ್ರತಿದಿನವು ಭಯದಲ್ಲೇ ಆಸ್ಪತ್ರೆಯಲ್ಲಿ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಂಗಡಿ ಸರ್ಕಾರಿ ಆಸ್ಪತ್ರೆಯ ದುಸ್ಥಿತಿಯಿದು. ಆಸ್ಪತ್ರೆ ವೈದ್ಯರು ಸಿಬ್ಬಂದಿ, ರೋಗಿಗಳಿಗೆ ಭಯದಲ್ಲೇ ಚಿಕಿತ್ಸೆ ನೀಡುತ್ತಾರೆ.
ಅಥಣಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಯಲ್ಲಮ್ಮವಾಡಿ ಕೆರೆ ತುಂಬಿ ದೇವಸ್ಥಾನ ಮುಂಭಾಗದ ಹಳ್ಳದಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ದೇವಸ್ಥಾನ ಸುತ್ತಲೂ ನೀರು ಆವರಿಸಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದಿನನಿತ್ಯ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಾರೆ. ಸದ್ಯ ದೇವಸ್ಥಾನ ಜಲ ದಿಗ್ಬಂಧನಗೊಂಡ ಹಿನ್ನೆಲೆ ಭಕ್ತರು ಹಳ್ಳ ದಾಟಿಕೊಂಡು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ.
ಬೆಳಗಾವಿ ವಿಭಜನೆ ಕೂಗು ಮತ್ತೆ ಕೇಳಿ ಬಂದಿದೆ.. ಚಿಕ್ಕೋಡಿ-ಅಥಣಿ ನೂತನ ಜಿಲ್ಲಾ ರಚನೆಗೆ ಆಗ್ರಹ ಹೆಚ್ಚಿದೆ. ಜಿಲ್ಲಾ ಕೇಂದ್ರಕ್ಕೆ ಹೋಗುವುದು ಅಂದ್ರೆ ಜನ ಸಾಮಾನ್ಯರಿಗೆ ತೀವ್ರ ಸಂಕಷ್ಟ. ಹೀಗಾಗಿ ಚಿಕ್ಕೋಡಿ ಜೊತೆಗೆ ಅಥಣಿ ಜಿಲ್ಲಾ ರಚನೆಗೆ ಆಗ್ರಹ ವ್ಯಕ್ತವಾಗಿದೆ.
ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಚಿಕ್ಕೋಡಿ ಉಪವಿಭಾಗದ ಅಥಣಿಯಲ್ಲಿ 1 ವರ್ಷದಲ್ಲಿ 2 ಬಾರಿ ರಸ್ತೆ ನಿರ್ಮಾಣ ಮಾಡಲಾಗಿದೆ.. ಆದ್ರೆ ಎರಡು ಬಾರಿಯೂ ಕಳಪೆ ಕಾಮಗಾರಿ ನಡೆದಿದೆ. ರಸ್ತೆ ನಿರ್ಮಾಣದಲ್ಲಿ ಭಾರೀ ಗೋಲ್ಮಾಲ್ ಆರೋಪ ಕೇಳಿ ಬಂದಿದೆ.
ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಚಿಕ್ಕೋಡಿ ಉಪವಿಭಾಗದ ಅಥಣಿಯಲ್ಲಿ 1 ವರ್ಷದಲ್ಲಿ 2 ಬಾರಿ ರಸ್ತೆ ನಿರ್ಮಾಣ ಮಾಡಲಾಗಿದೆ.. ಆದ್ರೆ ಎರಡು ಬಾರಿಯೂ ಕಳಪೆ ಕಾಮಗಾರಿ ನಡೆದಿದೆ. ರಸ್ತೆ ನಿರ್ಮಾಣದಲ್ಲಿ ಭಾರೀ ಗೋಲ್ಮಾಲ್ ಆರೋಪ ಕೇಳಿ ಬಂದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿನ ಕೃಷ್ಣಾ ಬಡಾವಣೆಯಲ್ಲಿ ಚಿರತೆಯ ಮರಿಯನ್ನು ಹೋಲುವಂತ ಪ್ರಾಣಿಯೊಂದು ಸೆರೆ ಸಿಕ್ಕಿದೆ. ಸ್ಥಳೀಯರು ಚಿರತೆ ಮರಿ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಂತೆ ಸ್ಥಳಕ್ಕೆ ಅಥಣಿ ವಲಯ ಅರಣ್ಯಾಧಿಕಾರಿಗಳು ಬಂದು ಪರಿಶೀಲಿಸಿದಾಗ ಇದೊಂದು ಪುನುಗು ಬೆಕ್ಕು(ಸಿವೆಟ್ ಕ್ಯಾಟ್) ತಿಳಿಸುತ್ತಿದ್ದಂತೆ ಸ್ಥಳಿಯರು ನಿಟ್ಟುಸಿರು ಬಿಟ್ಟಿದ್ದಾರೆ.
ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ, ಅಥಣಿ ತಹಶಿಲ್ದಾರ ದುಂಡಪ್ಪ ಕೋಮಾರ್ ಅವರ ವಿರುದ್ಧ ಚುನಾವಣಾ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2022 ರ ಪರಿಷತ್ ಚುನಾವಣೆ ಪೂರ್ವದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೆತ್ರಕ್ಕೆ ಶಿಕ್ಷಕರು ಹಾಗೂ ಪದವೀಧರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಲು ಸಲ್ಲಿಸಿದ್ದ ಅರ್ಜಿಗಳನ್ನು ನೀಡಿದ್ದರು ಆ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸದೆ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅವರನ್ನು ತಕ್ಷಣವೇ ಜಾರಿಯಾಗುವಂತೆ ಚುನಾವಣಾ ಅಧಿಕಾರಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಅಥಣಿ ತಹಶೀಲ್ದಾರ್ ಹುದ್ದೆಗೆ ಗೋಠೆಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಈ ಜಾತ್ರೆ ಪ್ರತೀ ವರ್ಷ ನಡೆಯುತ್ತೆ. ಪ್ರತೀ ವರ್ಷ ಬುದ್ದ ಪೌರ್ಣಿಮೆಯಂದು ಗ್ರಾಮದಲ್ಲಿ ಜಾತ್ರೆ ಆಚರಿಸಲಾಗುತ್ತದೆ. ಮಹಾತಪಸ್ವಿ ತ್ರಿಕಾಲ ಜ್ಞಾನಿಗಳಾದ ಅಪ್ಪಯ್ಯ ಹಾಗೂ ಚಂದ್ರಯ್ಯ ಸ್ವಾಮೀಜಿಗಳ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಜರುಗುತ್ತದೆ. ಮೂರು ದಿನಗಳ ಕಾಲ ನಡೆಯುವ ಅದ್ದೂರಿ ಜಾತ್ರೆಗೆ ರಾಜ್ಯವಲ್ಲದೆ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.