ಈ ಗೆಲುವಿನೊಂದಿಗೆ ಕೆಕೆಆರ್ ತನ್ನ ಪ್ಲೇಆಫ್ ಕನಸನ್ನು ಉಳಿಸಿಕೊಂಡಿದ್ದು, ಆದರೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ದೆಹಲಿ ಕ್ಯಾಪಿಟಲ್ಸ್ 4ನೇ ಸ್ಥಾನದಲ್ಲಿದ್ದರೂ, ಈ ಸೋಲು ತಂಡದ ಮುಂದಿನ ಪಯಣವನ್ನು ಕಠಿಣಗೊಳಿಸಿದೆ.
Axar Patel: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಓವರ್ ದರಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ತಪ್ಪಿತಸ್ಥರೆಂದು ಬಿಸಿಸಿಐ ಘೋಷಿಸಿದ್ದು, ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಿದೆ.
Axar Patel: ಐಪಿಎಲ್ 2025ಕ್ಕೂ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ಸೂಪರ್ ಸ್ಟಾರ್ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರನ್ನು ನೇಮಿಸಲಾಗಿದೆ. ಕಳೆದ ಋತುವಿನಲ್ಲಿ ಅವರು ಒಂದು ಪಂದ್ಯದಲ್ಲಿ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ವಹಿಸಿದ್ದರು.
Delhi Capitals captain Axar Patel: ಕಳೆದ ವರ್ಷ ರಿಷಭ್ ಪಂತ್ ನಿಧಾನಗತಿಯ ಓವರ್ ರೇಟ್ಗಾಗಿ ನಿಷೇಧಕ್ಕೆ ಒಳಗಾದಾಗ, ಅಕ್ಷರ್ ಪಟೇಲ್ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕತ್ವ ವಹಿಸಿದ್ದರು. ಅಕ್ಷರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ಪರ 6 ಐಪಿಎಲ್ ಋತುಗಳಲ್ಲಿ 82 ಪಂದ್ಯಗಳನ್ನು ಆಡಿದ್ದಾರೆ.
Rohit Sharma: ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿನ ಬಳಿಕ ರೋಹಿತ್ ಶರ್ಮ ನಿವೃತ್ತರಾಗಲಿದ್ದಾರೆ ಅಂತಾ ಹೇಳಲಾಗಿತ್ತು. ಗೌತಮ್ ಗಂಭೀರ್ ಕೋಚ್ ಆಗುವುದಕ್ಕೂ ಮುನ್ನ ಟಿ-20 ಮಾದರಿಗೆ ನಿವೃತ್ತಿ ಘೋಷಿಸಿದ್ದ ಹಿಟ್ಮ್ಯಾನ್ ರೋಹಿತ್ ಶರ್ಮಾ ನಂತರ ಏಕದಿನ ಹಾಗೂ ಟೆಸ್ಟ್ ಮಾದರಿಗೂ ನಿವೃತ್ತಿ ಘೋಷಿಸಲಿದ್ದಾರೆ ಅಂತಾ ಸುದ್ದಿಯಾಗಿತ್ತು.
Champions Trophy: ಬಹುತೇಕರು ಭಾರತ ತಂಡವೇ ಚಾಂಪಿಯನ್ ಟ್ರೋಫಿ ಗೆಲ್ಲಲಿ ಎಂದು ಆಶಿಸಿದ್ದಾರೆ. ಆದರೆ ಭಾರತವು ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಅನಪೇಕ್ಷಿತ ದಾಖಲೆಯನ್ನ ಹೊಂದಿದೆ. ಇಂದಿನ ಪಂದ್ಯ ಗೆದ್ದರೆ ಹೊಸದೊಂದು ಇತಿಹಾಸವನ್ನೇ ಸೃಷ್ಟಿಸಲಿದೆ. ಒಂದು ವೇಳೆ ಇಂದಿನ ಫೈನಲ್ ಫೈಟ್ನಲ್ಲಿ ರೋಹಿತ್ ಪಡೆ ಗೆದ್ದರೆ 37 ವರ್ಷಗಳ ಹಳೆಯ ಶಾಪದಿಂದ ವಿವೋಚನೆ ದೊರೆಯಲಿದೆ.
IND vs BAN: ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ನಾಯಕ ರೋಹಿತ್ ಶರ್ಮಾ ಕೋಪಗೊಂಡು ನೆಲಕ್ಕೆ ಗುದ್ದಿ ನಂತರ ಎದ್ದು ನಿಂತು ಕ್ಷಮೆಯಾಚಿಸಿದ್ದಾರೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಸಲಿಗೆ ಏನಾಯ್ತು.. ಬನ್ನಿ ನೋಡೋಣ..
IND vs NZ: ಪ್ರತಿಕೂಲ ಪರಿಸ್ಥಿತಿಗಳ ಹೊರತಾಗಿಯೂ, ಬಾಂಗ್ಲಾದೇಶ ತಂಡದಿಂದ ಅಬ್ಬರಿಸಿ ಗೆದ್ದಿದ್ದ ಭಾರತ ತಂಡ, ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಸೋತಿದೆ. ಕಿವೀಸ್ ತಂಡ ಎಂಟು ವಿಕೆಟ್ಗಳಿಂದ ಸರಣಿ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Virat kohli and Dinesh karthik: ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು. ಆದರೆ ಆಡಿದ ಮೂರು ಪಂದ್ಯಗಳಲ್ಲಿ ಕೊಂಗ್ ಕೊಹ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ಸೋತು, ಎಲ್ ಬಿಡಬ್ಲ್ಯೂಗೆ ವಿಕೆಟ್ ಒಪ್ಪಿಸಿ ಫೀಲ್ಡ್ನಿಂದ ಹೊರ ನಡೆದರು.
Sri Lanka vs India: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಮೂರು ಏಕದಿನ ಸರಣಿಯ ಅಂತಿಮ ಪಂದ್ಯ ಬುಧವಾರ ಕೊಲಂಬೊದಲ್ಲಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯ ಟೈ ಆಗಿದ್ದರೆ, ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 32 ರನ್ಗಳಿಂದ ಭಾರತವನ್ನು ಸೋಲಿಸಿ 1-0 ಮುನ್ನಡೆ ಸಾಧಿಸಿದೆ. ಅಂತಿಮ ಏಕದಿನ ಪಂದ್ಯವನ್ನು ಗೆದ್ದರೆ ಶ್ರೀಲಂಕಾ ಸರಣಿಯನ್ನು ವಶಪಡಿಸಿಕೊಳ್ಳಲಿದೆ.
IND vs SL: ಶ್ರೀಲಂಕಾ ಪ್ರವಾಸದ ವೇಳೆ ಟೀಂ ಇಂಡಿಯಾ ಸತತವಾಗಿ ಅನಿರೀಕ್ಷಿತ ಫಲಿತಾಂಶಗಳನ್ನು ಎದುರಿಸಿದೆ. ಬಾಲಕರನ್ನೊಳಗೊಂಡ ತಂಡದೊಂದಿಗೆ ಮೂರು ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ, ಹಿರಿಯ ಆಟಗಾರರ ಲಭ್ಯತೆಯ ನಡುವೆಯೂ ಏಕದಿನ ಸರಣಿಯಲ್ಲಿ ಎಡವುತ್ತಿದೆ.
Salman Butt Warns Shubman Gill: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಟೀಂ ಇಂಡಿಯಾದ ಯಂಗ್ ಓಪನರ್ ಮತ್ತು ಉಪನಾಯಕ ಶುಭಮನ್ ಗಿಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಸ್ಥಿರ ಪ್ರದರ್ಶನ ನೀಡದಿದ್ದರೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ 35 ಎಸೆತಗಳಲ್ಲಿ ಕೇವಲ 16 ರನ್ ಗಳಿಸಿ ಫೀಲ್ಡ್ನಿಂದ ಹೊರ ನಡೆದಿದ್ದರು.
IND vs SL: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಅಬ್ಬರ ಮುಂದುವರೆದಿದೆ. ಭಾರತ ಸತತ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಎದುರಾಳಿ ತಂಡದ ಬೆವರಿಳಿಸಿದೆ. ಭಾನುವಾರ ನಡೆದ ಮೂರು ಟಿ20 ಸರಣಿಯ ಎರಡನೇ ಟಿ20 ಪಂದ್ದಯಲ್ಲಿ ಟೀಂ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದ ಅಡಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
Riyan Parag: ಟೀಂ ಇಂಡಿಯಾದ ಯುವ ಆಲ್ರೌಂಡರ್ ರಿಯಾನ್ ಪರಾಗ್ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮೂರು ಟಿ20 ಸರಣಿಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟಿ20ಯಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ರಯಾನ್ ಪರಾಗ್ ಬೌಲಿಂಗ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ್ದರು. ರಿಯಾನ್ ಪರಾಗ್ 8 ಎಸೆತಗಳನ್ನು ಎಸೆದು ಮೂರು ವಿಕೆಟ್ ಪಡೆದರು.
IND vs SL: ಶ್ರೀಲಂಕಾ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ 24 ಗಂಟೆಗಳೊಳಗೆ ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಭಾನುವಾರ ಸಂಜೆ 7 ಗಂಟೆಗೆ ಪಲ್ಲೆಕೆಲೆ ಮೈದಾನದಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬ್ಯೂ ಬಾಯ್ಸ್ ಪಡೆ ಎದುರಿಸಲಿದೆ. ಇದೇ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು.
IND vs SL: ಶ್ರೀಲಂಕಾ ವಿರುದ್ಧ ಭಾರತ ತಂಡ ಮೊದಲ ಟಿ20 ಪಂದ್ಯವನ್ನು ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆಹಾಕಿತು. ಉತ್ತಮ ಆಟವಾಡಿದ ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿ ಸೇರಿದಂತೆ 58 ರನ್ ಕಲೆಹಾಕಿ ತಂಡದಕ್ಕೆ ಭಾರಿ ಮೊತ್ತ ತಂದುಕೊಡುವಲ್ಲಿ ಮುಖ್ಯ ಪಾತ್ರ ವಹಿಸಿದರು.
IND vs SL: ಶ್ರೀಲಂಕಾ ಪ್ರವಾಸವನ್ನು ಟೀಂ ಇಂಡಿಯಾ ಗೆಲುವಿನೊಂದಿಗೆ ಆರಂಭಿಸಿದೆ. ಹೊಸ ಕೋಚ್ ಗೌತಮ್ ಗಂಭೀರ್ ಅವರು ಈ ಸರಣಿಯ ಮೂಲಕ ತಮ್ಮ ಕೋಚ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಹೊಸ ನಾಯಕ ಸೂರ್ಯಕುಮಾರ್ ಯಾದವ್ ಅವರ ಯುಗವು ಉತ್ತಮ ಯಶಸ್ಸಿನೊಂದಿಗೆ ಪ್ರಾರಂಭವಾಗಿದೆ. ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಮೂರು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಗಳ ಭರ್ಜರಿ ಜಯ ಸಾಧಿಸಿದೆ.
Axar Patel: ಟಿ20 ವಿಶ್ವಕಪ್ 2024ರ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ನಲ್ಲಿ ತಪ್ಪು ಸಮಯದಲ್ಲಿ ಔಟಾಗುವ ಮೂಲಕ ದೊಡ್ಡ ತಪ್ಪು ಮಾಡಿದೆ ಎಂದು ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಅಕ್ಷರ್ ಪಟೇಲ್ ಹೇಳಿದ್ದಾರೆ. ಈ ಪಂದ್ಯವನ್ನು ಭಾರತ ಗೆದ್ದು 11 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು ಗೊತ್ತೇ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.