Government banks strike: ಎಐಬಿಒಸಿ ಅಧ್ಯಕ್ಷ ಸುನಿಲ್ ಕುಮಾರ್ ಅವರು, ಮುಖ್ಯ ಕಾರ್ಮಿಕ ಆಯುಕ್ತರ ಮುಂದೆ ಸೋಮವಾರ ನಡೆದ ಸಭೆಯಿಂದ ಯಾವುದೇ ಪ್ರಯೋಜನವಾಗಿಲ್ಲ. ಅದಕ್ಕಾಗಿಯೇ ನೌಕರ ಸಂಸ್ಥೆಗಳು ಸ್ಟ್ರೈಕ್ ನೋಟಿಸ್ ಅನ್ನು ಹಿಂತೆಗೆದುಕೊಂಡಿಲ್ಲ ಎಂದು ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟಿಸಲು 10 ಕೇಂದ್ರ ಕಾರ್ಮಿಕ ಸಂಘಗಳು, ಎಡ ಪಕ್ಷಗಳ ಬೆಂಬಲದೊಂದಿಗೆ ಜನವರಿ 8 ರಂದು ದಿನವಿಡೀ ಮುಷ್ಕರ ನಡೆಸಲಿವೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಮತ್ತು ಉದ್ಯೋಗ ಭದ್ರತೆ, ಉದ್ಯೋಗ ಸೃಷ್ಟಿ, ಕಾರ್ಮಿಕರ ಮೇಲೆ ಪ್ರತಿಕೂಲ ತಿದ್ದುಪಡಿ ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ 10 ಕೇಂದ್ರ ಕಾರ್ಮಿಕ ಸಂಘಗಳು ಜನವರಿ 8 ರಂದು ರಾಷ್ಟ್ರೀಯ ಸಾಮಾನ್ಯ ಮುಷ್ಕರ ಕರೆ ನೀಡಿವೆ.
ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ, ಭಾರತೀಯ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಜತೆಗೆ ಬ್ಯಾಂಕಿಂಗ್ ಕ್ಷೇತ್ರದ ಕೆಲವು ಉದ್ಯೋಗಗಳನ್ನು ಹೊರ ಗುತ್ತಿಗೆ ನೀಡುವುದಕ್ಕೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಎಲ್ಲಾ ಬ್ಯಾಂಕುಗಳ ಗುರುತನ್ನು ಕಾಪಾಡುವುದು ಸೇರಿದಂತೆ 10 ಬ್ಯಾಂಕುಗಳ ಉದ್ದೇಶಿತ ವಿಲೀನದಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಎಲ್ಲರನ್ನೂ ಒಳಗೊಂಡ ಸಮಿತಿಯೊಂದನ್ನು ರಚಿಸುವಲ್ಲಿ ಹಣಕಾಸು ಸಚಿವಾಲಯ ಸಕಾರಾತ್ಮಕವಾಗಿದೆ ಎನ್ನಲಾಗಿದೆ.
ನೀವು ಬ್ಯಾಂಕ್ಗೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸವ ಮಾಡಬೇಕಿದ್ದರೆ, ಅದನ್ನು ಎರಡು ದಿನಗಳಲ್ಲಿ ಅಂದರೆ 24 ಮತ್ತು 25 ಸೆಪ್ಟೆಂಬರ್ (ಮಂಗಳವಾರ ಮತ್ತು ಬುಧವಾರ) ನಿಭಾಯಿಸಬೇಕು. ಇದರ ನಂತರ, ಸೆಪ್ಟೆಂಬರ್ 26 ರಿಂದ ನಾಲ್ಕು ದಿನಗಳವರೆಗೆ ದೇಶಾದ್ಯಂತದ ಬ್ಯಾಂಕುಗಳು ಕಾರ್ಯ ನಿರ್ವಹಿಸುವುದಿಲ್ಲ.
ಜನವರಿ 8, 9ರಂದು ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ಭಾರತ ಬಂದ್ ಗೆ ಕರೆ ನೀಡಿವೆ.ಈ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ದೇಶಾದ್ಯಂತ ಜನ ಜೀವನ ಅಸ್ತವ್ಯಸ್ಥಗೊಳ್ಳಲಿದೆ ಎನ್ನಲಾಗಿದೆ.10 ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಬಂದ್ ಗೆ ಕರೆ ನೀಡಿವೆ. ಅದರಲ್ಲಿ ಇಂಟಕ್, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಎಲ್ಪಿಎಫ್, ಸೇವಾ ಪ್ರಮುಖ ಸಂಘಟನೆಗಳು ಇದರಲ್ಲಿ ಭಾಗವಹಿಸಲಿವೆ.
ಸಾರ್ವಜನಿಕ ವಲಯದ ಬ್ಯಾಂಕ್ ಉದ್ಯೋಗಿಗಳು ಮತ್ತು ಅಧಿಕಾರಿಗಳು ಮೇ 30 ರಿಂದ ಎರಡು ದಿನಗಳ ಮುಷ್ಕರ ನಡೆಸಲು ಘೋಷಿಸಿದ್ದಾರೆ. ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ) ಯ ಸಂಬಳದಲ್ಲಿ ಶೇ. 2 ರಷ್ಟು ಮಾತ್ರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.