ಎನ್ಎಚ್ಎಂನ ನಿರ್ದೇಶಕ ಡಾ.ನವೀನ್ ಭಟ್ ಮಾತನಾಡಿ, ರಾಜ್ಯದಲ್ಲಿ 50 ಕ್ಲಿನಿಕ್ಗಳು ಕಾರ್ಯಾಚರಣೆ ಮಾಡಲು ಸಿದ್ಧವಾಗಿವೆ. 128 ಕ್ಲಿನಿಕ್ಗಳ ಪೈಕಿ 70 ಕ್ಲಿನಿಕ್ ಗಳನ್ನು ಮಾರ್ಚ್ ಅಂತ್ಯದೊಳಗೆ ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ಮಾಡಲು ಆಗದ ಕೆಲಸ ಮಾಡಿ ಸೈ ಅನಿಸಿಕೊಂಡಿದ್ದಾರೆ ನಟಿ ಕಾರುಣ್ಯರಾಮ್.ಯೆಸ್ ರಾತ್ರೋ ರಾತ್ರಿ ರಸ್ತೆ ಗುಂಡಿಗಳ ಮುಚ್ಚಿದ ಕಾರುಣ್ಯ ರಾಮ್ ಗೆ ಎಲ್ಲಾರು ಬಿಗ್ ಸಲ್ಯೂಟ್ ಹೊಡೆಯುತ್ತಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 3673 ಪೌರಕಾರ್ಮಿಕರ ನೇರ ನೇಮಕಾತಿ ವಿಚಾರದಲ್ಲಿ ಅವ್ಯವಹಾರ ಆಗ್ತಿದೆ ಎಂಬ ಆರೋಪ ಸ್ವತಃ ಪೌರ ಕಾರ್ಮಿಕರೇ ಆರೋಪ ಮಾಡಿದ್ದಾರೆ. ಒಂದೇ ಕುಟುಂಬದಲ್ಲಿ ಎಂಟತ್ತು ಜನರಿಗೆ ಪೌರಕಾರ್ಮಿಕ ಹುದ್ದೆಯನ್ನ ನೀಡಿದ್ದು, ಇದ್ದರಲ್ಲಿ ಲಕ್ಷಾಂತರ ರೂ ಭ್ರಷ್ಟಾಚಾರ ವೆಸಗಲಾಗಿದೆ ಎಂದು ದೂರಲಾಗಿದೆ. ಹೀಗಾಗಿ ಪೌರಕಾರ್ಮಿಕರ ಆಯ್ಕೆ ಪ್ರಕ್ರಿಯೆಯನ್ನ ಸೂಕ್ತಬದ್ಧವಾಗಿ ನಡೆಸಲಿ ಎಂದು ಪೌರಕಾರ್ಮಿಕರು ಪ್ರತಿಭಟನೆ ಮೂಲಕ ಆಗ್ರಹಿಸಿದ್ದಾರೆ.
ಈ ಕೆಳಕಂಡ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ವರ್ಷ ಹೊರತುಪಡಿಸಿ, ಕಳೆದ ಮೂರು ವರ್ಷಗಳಲ್ಲಿ 119.23 ಕೋಟಿ ರೂಪಾಯಿ ಮಾತ್ರ ಖರ್ಚಾಗಿದೆ. ಈವರೆಗೆ 35 ಸಾವಿರಕ್ಕೂ ಅಧಿಕ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ. ಈ ವರ್ಷದೊಳಗೆ 36 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.
ನಗರದ ಯೋಜನೆಯನ್ನು ಮಹಾನಗರ ಯೋಜನಾ ಸಮಿತಿಯು ರೂಪಿಸಬೇಕು ಹಾಗೂ ಮೊಬಿಲಿಟಿ ಯೋಜನೆಗಳನ್ನು ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ಪ್ರಾಧಿಕಾರವು ಗುರುತಿಸಿ, ಯೋಜನೆ ರೂಪಿಸಬೇಕು. ಬಿಬಿಎಂಪಿ ಬಳಿ ಇಂತಹ ಮೂಲಸೌಕರ್ಯ ಯೋಜನೆಗಳನ್ನು ಸಿದ್ಧಪಡಿಸಲು ಬೇಕಾದ ಜ್ಞಾನವಾಗಲಿ ಅಥವಾ ಸಾಮರ್ಥ್ಯವಾಗಲಿ ಇಲ್ಲ ಎಂಬುದು ಈ ಹಿಂದಿನ ಯೋಜನೆಗಳಿಂದ ಸಾಬೀತಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಸಾರ್ವಜನಿಕ ಪ್ರಕಟಣೆಯಲ್ಲಿ ಯಲಹಂಕ ಏರ್ ಫೋರ್ಸ್ ಸ್ಟೇಷನ್ನ 10 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರಿ ಭಕ್ಷ್ಯಗಳನ್ನು ಬಡಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಏರೋ ಇಂಡಿಯಾ ಶೋ ಫೆಬ್ರವರಿ 13 ರಿಂದ 17 ರವರೆಗೆ ನಡೆಯಲಿದೆ.
ಯಲಹಂಕ ವಲಯ ದಾಸರಹಳ್ಳಿ ಮುಖ್ಯ ರಸ್ತೆ(ಅಮೃತ ನಗರ ರಸ್ತೆ) 2.5 ಕಿ.ಮೀ ಇದ್ದು, ಈ ರಸ್ತೆಯನ್ನು ಅಮೃತ ನಗರೋತ್ಥಾನ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರವಾಗಿ ಕೆಲಸ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೀವು ಪೌರಕಾರ್ಮಿಕ ಕೆಲಸಕ್ಕಾಗಿ ಕಾಯ್ತಿದ್ದೀರಾ..!? ಹಾಗಿದ್ರೇ ನೀವು ಮದುವೆ ಆಗೋ ವಿಚಾರದಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು. ಇಲ್ಲ ಅಂದ್ರೇ ನೀವು ಕೆಲಸ ಮಾಡಲು ಆನರ್ಹರಾಗ್ತೀರಿ ಹುಷಾರ.. ಬಿಬಿಎಂಪಿ ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದಾರೆ. ಅದ್ರಲ್ಲಿ ಏನಿದೆ ವಿಷೇಶ ಅಂದ್ರೆ..? ಆ ಬಗ್ಗೆ ವರದಿ ಇದೆ ಮುಂದೆ ಓದಿ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೆಲವು ಮತಗಟ್ಟೆಗಳಿಗೆ ಭೇಟಿ ನೀಡಿ ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯದ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಇಂದು ಮಾಗಡಿ ರಸ್ತೆಯಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ರಸ್ತೆ ಡಾಂಬರೀಕರಣ, ಚರಂಡಿ ನೀರು ನಿರ್ವಹಣೆ, ಪಾದಾಚಾರಿ ಮಾರ್ಗ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಚೀನಾದಲ್ಲಿ ಕೊರೊನ ರೂಪಾಂತರಿ ಬಿಎಫ್-07 ಬಳಿಕ ಎಕ್ಸ್ಬಿಬಿ 1.5 ಹೊಸ ರೂಪಾಂತರಿ ತಳಿ ಪತ್ತೆಯಾಗಿದೆ. ಈ ಹೊಸ ತಳಿ ಎಕ್ಸ್ಬಿಬಿ 1.5 ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಹತ್ವದ ಮಾಹಿತಿ ತಿಳಿಸಿದ್ದಾರೆ.
BBMP Ward-delimitation: ಕೇವಲ BBMP ಸಿಬ್ಬಂದಿ ವೇತನಕ್ಕೆ ವಾರ್ಷಿಕವಾಗಿ ನೂರಾರು ಕೋಟಿ ರೂ. ಬೇಕಾಗಿದೆ. ಸಿಬ್ಬಂದಿ ವೇತನ ಬಿಟ್ಟು ಕಚೇರಿ ಮತ್ತು ಇತರೆ ವೆಚ್ಚ ಸೇರಿ ತಿಂಗಳಿಗೆ 10 ರಿಂದ 15 ಕೋಟಿ ರೂ. ಬೇಕಾಗುತ್ತದೆ ಎನ್ನಲಾಗುತ್ತಿದೆ.
BBMP : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಮೇಲೆ ಮನೆ, ಕಾಂಪೌಂಡ್ ನಿರ್ಮಿಸಿದ್ದ ಭೂ ಗಳ್ಳರಿಗೆ ಪಾಲಿಕೆ ಅಧಿಕಾರಿಗಳು ಇಂದು ಬಿಸಿ ಮುಟ್ಟಿಸಿದ್ದಾರೆ. ರಾಜಕಾಲುವೆ ಮೇಲಿದ್ದ ಕಟ್ಟಡವನ್ನ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ಭಾರತ ಚುಣಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಇಂದು ಮನೆ-ಮನೆಗೆ ಭೇಟಿ ನಿಡುವ ಮೂಲಕ ಮತದಾರರ ಪಟ್ಟಿ ಪರಿಶೀಲನೆಯನ್ನ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿ ಚುನಾವಣೆ ಅಧಿಕಾರಿಗಳು ಮಾಡಿದ್ದಾರೆ.
ಬೆಂಗಳೂರು : ಕಳೆದೆರಡು ವರ್ಷಗಳಿಂದ ಬಿಬಿಎಂಪಿ ಚುನಾವಣೆಗೆ ಅಡ್ಡಗಾಲು ಹಾಕುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಉಪವಾಸ ಕುಳಿತ ಪಕ್ಷದ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸದ್ಯ ರಾಜಕೀಯ ವಲಯದಲ್ಲಿ ರೌಡಿ ವಾರ್ ಶುರುವಾಗಿದೆ. ಬಿಜೆಪಿ ಕಾಂಗ್ರೆಸ್ ನಲ್ಲಿ ಅವನು ರೌಡಿ ಇವನೂ ರೌಡಿ ಎಂಬ ಟಾಕ್ ವಾರ್ ನಡುವೆ ಬಿಜೆಪಿ ಮಹಾ ಎಡವಟ್ಟು ಮಾಡಿಕೊಂಡಿದೆ. ಕಾಂಗ್ರೆಸ್ ಜಯನಗರ ಕಾರ್ಯಕರ್ತ ಮತ್ತು ಬಿಬಿಎಂಪಿ ಟಿಕೆಟ್ ಆಕಾಂಕ್ಷಿಯಾಗಿರುವ ಚೇತನ್ ಫೋಟೋ ಹಾಕಿ ರೌಡಿ ಎಂಬಂತೆ ಬಿಂಬಿಸಿದೆ.
ಚಿಲುಮೆ ವೋಟರ್ ಐಡಿ ಅವ್ಯವಹಾರ ಪ್ರಕರಣ ದಿನಕ್ಕೊಂದು ಭಿನ್ನ ವಿಭಿನ್ನ ತಿರುವು ಪಡೆಯುತ್ತಿದೆ.ಒಂದೆಡೆ ಪ್ರಕರಣದ ಆರೋಪಿಗಳು ಹಂತಹಂತವಾಗಿ ಪೊಲೀಸರ ಖೆಡ್ಡಾಗೆ ಬೀಳ್ತಿದ್ರೆ, ಇನ್ನೊಂದೆಡೆ, ಆರೋಪಿ ಸ್ಥಾನದಲ್ಲಿರೋ ಐಎಎಸ್ ಅಧಿಕಾರಿಗಳು ಸೇವೆಯಿಂದ ಅಮಾನತ್ತಾಗಿದ್ದಾರೆ. ಆರ್ಓ ಹಾಗು ಎಆರ್ಓಗಳು ಕೂಡ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ರಿಂದ ನಗರದ ಉಳಿದ ಆರ್ಓ ಹಾಗು ಎಆರ್ಓಗಳು ಅತಂತ್ರರಾಗಿದ್ದು, ಈ ಕುರಿತಂತೆ ತಮ್ಮದೇನು ತಪ್ಪಿಲ್ಲ ಎಂಬಂತೆ ಅಸಹಾಯಕತೆ ಕುರಿತು ಇವತ್ತು ಪತ್ರಿಕಾಗೋಷ್ಟಿ ನಡೆಸಿದ್ದಾರೆ.