ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ ಹಲವು ನಿಯಮಗಳಿವೆ. ಕಳೆದ ಬಾರಿಯ ನಿಯಮಗಳನ್ನೇ ಈ ಬಾರಿಯೂ ಮುಂದುವರೆಸುವ ಬಗ್ಗೆ ಚರ್ಚೆ ಮಾಡ್ತೀವಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಅಕ್ರಮ ಹಣಕಾಸು ಆರೋಪ ಪ್ರಕರಣ ಸಂಬಂಧ ಬಿಬಿಎಂಪಿ ಮಾಜಿ ಸದಸ್ಯೆ ಸಿ.ಜಿ.ಗೌರಮ್ಮ ದಂಪತಿಗೆ ಸೇರಿದ 3.35 ಕೋಟಿ ರೂ. ಮೌಲ್ಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಸಾರ್ವಜನಿಕರಿಗಾಗುವ ತೊಂದರೆ ತಪ್ಪಿಸಲು ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳ ತೆರವಿಗೆ ಮುಂದಾಗಿದೆ. ಬಿಬಿಎಂಪಿ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ವ್ಯಾಪಾರಸ್ಥರು ಇದು ಕಾನೂನುಬಾಹಿರ ಕೆಲಸ ಎಂದು ಅಧಿಕಾರಿಗಳ ವಿರುದ್ದ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸುಮಾರು 810 ಕೆ.ಜಿ.ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿದೆ.
ರಾಜ್ಯ ರಾಜಧಾನಿಯಲ್ಲಿ ಮಂಕಿ ಪಾಕ್ಸ್ ಪ್ರಕರಣ ವರದಿಯಾಗಿಲ್ಲ. ಆದರೂ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ದಿನೆ ದಿನೆ ತಾರಕಕ್ಕೆ ಏರುತ್ತಿದೆ. ದಿನಕ್ಕೊಂದು ಹೇಳಿಕೆ, ದಿನಕ್ಕೊಂದು ಬೆಳವಣಿಗೆ ಆಗ್ತಿರೋ ಈ ಗಂಭೀರವಾದ ವಿಚಾರಕ್ಕೆ ಅಂತ್ಯ ಯಾವಾಗ ಅನ್ನೋದು ಸಾರ್ವಜನಿಕರಿಂದ ಪ್ರಶ್ನೆ ಎದ್ದಿತ್ತು. ಅದೆಲ್ಲದಕ್ಕೂ ಫುಲ್ ಸ್ಟಾಪ್ ಎಂಬಂತೆ ಪಾಲಿಕೆ ಅಧಿಕಾರಿಗಳು ಈದ್ಗಾ ವಿವಾದಕ್ಕೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 243 ವಾರ್ಡ್ಗಳ ಅಂತಿಮ ಡಿಲಿಮಿಟೇಶನ್ ವರದಿಯನ್ನು ರಾಜ್ಯ ಸರ್ಕಾರ ಗುರುವಾರ ಅಧಿಸೂಚಿಸಿದ್ದು, ಪರಿಷತ್ ಚುನಾವಣೆಯನ್ನು ಎರಡು ವರ್ಷಗಳ ಕಾಲ ವಿಳಂಬಗೊಳಿಸಿದ್ದ ಕಸರತ್ತು ಪೂರ್ಣಗೊಳಿಸಿದೆ.
ಇನ್ನು ಮುಂದೆ ಬೀದಿ ಬದಿ ವ್ಯಾಪಾರಿಗಳಿಂದಲೂ ಸ್ವಿಗ್ಗಿ, ಜೊಮ್ಯಾಟೋ ಮೂಲಕ ಆರ್ಡರ್ ಪಡೆಯಬಹುದು. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಹೊಸ ಯೋಜನೆ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ.
ಇನ್ನು ಮುಂದೆ ಬೀದಿ ಬದಿ ವ್ಯಾಪಾರಿಗಳಿಂದಲೂ ಸ್ವಿಗ್ಗಿ, ಜೊಮ್ಯಾಟೋ ಮೂಲಕ ಆರ್ಡರ್ ಪಡೆಯಬಹುದು. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಹೊಸ ಯೋಜನೆ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ.
ಈದ್ಗಾ ಮೈದಾನದ ಭೂ ವಿವಾದದ ಬೆನ್ನಲ್ಲೆ ಪಾಲಿಕೆ ವತಿಯಿಂದ ಮುಸ್ಲೀಂ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಿದೆ. ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಾರ್ಥನೆಗೆ ಯಾವುದೇ ಅಡ್ಡಿಯಿಲ್ಲ. ಏಕೆಂದರೆ ಸುಪ್ರೀಂ ಕೋರ್ಟ್ ನಲ್ಲಿ ನಮಾಜ್ ಗೆ ಅನುಮತಿ ಇದೆ. ಹೀಗಾಗಿ ಮುಸ್ಲಿಂ ಜನಾಂಗದ ಹಬ್ಬದ ಪ್ರಾರ್ಥನೆಗೆ ಅಡ್ಡಿಯಿಲ್ಲ. ಪ್ರತಿ ವರ್ಷದಂತೆ ಈ ಬಾರಿಯೂ ಪ್ರಾರ್ಥನೆಗೆ ಅವಕಾಶ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜುಲೈ 1, 2017ರಲ್ಲಿ ಕೇಂದ್ರ ಸರ್ಕಾರ ಒನ್ನೇಷನ್ ಒನ್ ಟ್ಯಾಕ್ಸ್ ನಿಯಮ ಜಾರಿ ಮಾಡಿತ್ತು. ನೇರವಾಗಿ ಕೇಂದ್ರವೇ ತೆರಿಗೆ ಸಂಗ್ರಹಿಸಿ ರಾಜ್ಯದ ಪಾಲು ನೀಡುವ ನಿಯಮವಿದು. ಆದರೆ ಅಂಥಾ ಯೋಜನೆಗೂ ಬಿಬಿಎಂಪಿ ಟಕ್ಕರ್ ಕೊಟ್ಟು ಸಾವಿರಾರು ಕೋಟಿ ಉಂಡೇನಾಮೆ ಹಾಕಿರುವ ಆರೋಪ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ತಲೆದೋರೋ ಸಾಧ್ಯತೆ ಇದೆ. ಕಾರ್ಮಿಕರನ್ನು ಖಾಯಂಗೊಳಿಸಲು ಒತ್ತಾಯಿಸಿ ಗುತ್ತಿಗೆ ಪೌರಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು ಸೇರಿ ಬೃಹತ್ ಹೋರಾಟ ಮಾಡ್ತಿದ್ದಾರೆ. ಹೀಗಾಗಿ ಬೆಂಗಳೂರು ಮತ್ತೆ ಗಬ್ಬೆದ್ದು ನಾರೋ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.