Champions Trophy 2025: ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿ ಯ ನಿರ್ಧಾರದಿಂದ ಆಘಾತಕ್ಕೊಳಗಾಗಿದೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ 2025 ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿಆಯೋಜಿಸಲು ಐಸಿಸಿ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. 8 ದೇಶಗಳು ಭಾಗವಹಿಸುವ ಈ ಪಂದ್ಯಾವಳಿಯನ್ನು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಆಯೋಜಿಸಲು ಪಿಸಿಬಿ ನಿರ್ಧರಿಸಿದೆ.
Suryakumar Yadav and Hardik Pandya: ಭಾರತ ಹಾಗೂ ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಭಾರತ ಟಿ20 ತಂಡದ ನಾಯಕನಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಹಾಗೂ ಹೊಸ ಕೋಚ್ ಆಗಿ ಗೌತಮ್ ಗಂಭೀರ್ ಅವರ ಮೊದಲ ಸರಣಿ ಇದಾಗಿರುವುದರಿದ ಇದು ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.
Khalid Mahmood : ಭಾರತ ತಂಡವು 2024ರ ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ? ಎನ್ನುವ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಬಗ್ಗೆ ಬಿಸಿಸಿಐ ಕೂಡ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಮುಂದಿನ ವರ್ಷದ ಆರಂಭದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಹೇಳಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮಾಜಿ ಅಧ್ಯಕ್ಷ ಖಾಲಿದ್ ಮಹಮೂದ್ ಇದರ ಕುರಿತು ಪ್ರತಿಕ್ರಿಯಿಸಿದ್ದಾರೆ.
Riyan Parag: ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿ ಎರಡು ದಿನಗಳು ಕಳೆದಿವೆ, ಆದರೆ ಇನ್ನೂ ಹಲವು ವಿಷಯಗಳು ನಿಗೂಢವಾಗಿಯೇ ಉಳಿದಿವೆ. ಅದರಲ್ಲೂ ಏಕದಿನ ತಂಡದ ಆಯ್ಕೆಯಲ್ಲಿ ಇಬ್ಬರು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ರಿಯಾನ್ ಪರಾಗ್ ಮತ್ತು ಹರ್ಷಿತ್ ರಾಣಾ ಮೊದಲ ಬಾರಿಗೆ ಭಾರತದ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.
T20 Team India Captain: ಟಿ20 ವಿಶ್ವಕಪ್ 2026 ಅನ್ನು ಗಮನದಲ್ಲಿಟ್ಟುಕೊಂಡು ಟೀಂ ಇಂಡಿಯಾ ಹೊಸ ನಾಯಕನನ್ನು ಸಿದ್ಧಪಡಿಸುತ್ತಿದೆ. ನೂತನ ಕೋಚ್ ಗೌತಮ್ ಗಂಭೀರ್ ಮತ್ತು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆದಾರರು ತೀವ್ರ ಚರ್ಚೆ ನಡೆಸಿ ಹಾರ್ದಿಕ್ ಪಾಂಡ್ಯ ಅವರನ್ನು ಭವಿಷ್ಯದ ನಾಯಕತ್ವ ಯೋಜನೆಯಿಂದ ಹೊರಗಿಟ್ಟಿದ್ದಾರೆ. ಇತ್ತೀಚೆಗಷ್ಟೇ ಭಾರತ ಟಿ20 ವಿಶ್ವಕಪ್ ಗೆದ್ದಿದ್ದು ಗೊತ್ತೇ ಇದೆ. ಅಂತಿಮ ಪಂದ್ಯದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20ಗೆ ವಿದಾಯ ಹೇಳಿದ್ದಾರೆ.
IND vs SL: ಈ ತಿಂಗಳ ಅಂತ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಆತಿಥೇಯ ಶ್ರೀಲಂಕಾ ತಂಡದ ವಿರುದ್ಧ ಟೀಂ ಇಂಡಿಯಾ 3 ODI ಮತ್ತು 3 T20 ಸರಣಿಗಳನ್ನು ಆಡಲಿದ್ದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಈಗಾಗಲೇ ಈ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
BCCI vs PCB: ಚಾಂಪಿಯನ್ಸ್ ಟ್ರೋಫಿ 2025 ಕ್ಕೆ ಪಾಕಿಸ್ತಾನದಲ್ಲಿ ವೇದಿಕೆ ಸಜ್ಜಾಗುದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟ್ರೋಫಿಗಾಗಿ ಸಕಲೆ ಸಿದ್ದತೆಗಳನ್ನು ನಡೆಸುತ್ತಿದೆ. ಆದರೆ, ಭಾರತ ತಂಡದ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ಪರೋಕ್ಷವಾಗಿ ಒತ್ತಡ ಹೇರುತ್ತಿದೆ. ಇದೇ ಕಾರಣಕ್ಕೆ ಇದೀಗ, ಬಿಸಿಸಿಐ ನಿರ್ಧಾರದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಿಡಿಕಾರಿದೆ.
ಲಂಡನ್ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಕ್ರಿಕೆಟಿಗ ಮತ್ತು ಕೋಚ್ ಅಂಶುಮಾನ್ ಗಾಯಕ್ವಾಡ್ ಅವರ ಚಿಕಿತ್ಸೆಗಾಗಿ 1 ಕೋಟಿ ರೂಪಾಯಿ ಬಿಡುಗಡೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ.
Anshuman Gaekwad: ಭಾರತಕ್ಕೆ ಮೊದಲ ವಿಶ್ವಕಪ್ ಗೆದ್ದ ನಾಯಕ ಕಪಿಲ್ ದೇವ್ ಕೂಡ ಅಂಶುಮಾನ್’ಗೆ ಸಹಾಯ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಮಾಜಿ ಕ್ರಿಕೆಟಿಗರ ಮನವಿಯನ್ನು ಆಲಿಸಿ ಅಂಶುಮಾನ್ ಚಿಕಿತ್ಸೆಗೆ ಹಣ ನೀಡಲು ನಿರ್ಧರಿಸಿದೆ.
Gautam Gambhir demands to BCCI: ಕ್ರಿಕ್ ಬಜ್’ನಲ್ಲಿನ ವರದಿಯ ಪ್ರಕಾರ, ಗೌತಮ್ ಗಂಭೀರ್ ನೆದರ್ಲ್ಯಾಂಡ್ಸ್ ಮಾಜಿ ಕ್ರಿಕೆಟಿಗ ರಿಯಾನ್ ಟೆನ್ ಡ್ಯೂಷೆ ಅವರನ್ನು ತಂಡದ ಸಹಾಯಕ ಸಿಬ್ಬಂದಿಯಾಗಿ ಸೇರಿಸಿಕೊಳ್ಳುವಂತೆ ಬೇಡಿಕೆ ಇಟ್ಟಿದ್ದಾರೆ. ಆದರೆ, ಅವರ ಬೇಡಿಕೆಗೆ ಬಿಸಿಸಿಐ ಒಪ್ಪಿಗೆ ನೀಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
India-Pakistan Match: ಚಾಂಪಿಯನ್ಸ್ ಟ್ರೋಫಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಪಾಕಿಸ್ತಾನ ತಂಡ ಲಾಹೋರ್ನಲ್ಲಿ ಹಣಿ ನಡೆಸಿತ್ತು. ಆದರೆ, ಇದೀಗ ಈ ಪಂದ್ಯ ಲಾಹೋರ್ನಲ್ಲಿ ನಡೆಯುವುದಿಲ್ಲ ಎನ್ನು ಸುದ್ದಿ ಕೇಳಿಬಂದಿದೆ. ಐಸಿಸಿ ಚಾಂಫಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ, ಬದಲಿಗೆ ಪಾಕಿಸ್ತಾನ ತಂಡ ಬಾರತಕ್ಕೆ ಪ್ರಯಾಣ ಬೆಳಸಲಿದೆ ಎಂದು ಮೂಲಗಳು ತಿಳಿಸಿವೆ.
Zaheer Khan: ಭಾರತ ಕ್ರಿಕೆಟ್ ತಂಡದ ಕೋಚಿಂಗ್ನಲ್ಲಿ ವಿಶ್ವಕಪ್ ವಿಜೇತ ಹಾಗೂ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರ ಯುಗ ಆರಂಭವಾಗಿದೆ. ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಬಿಸಿಸಿಐ ನೇಮಕ ಮಾಡಿದೆ. ಈ ವಿಷಯವನ್ನು ಮಂಗಳವಾರ ಅಧಿಕೃತವಾಗಿ ಬಹಿರಂಗಪಡಿಸಲಾಗಿದೆ. ರಾಹುಲ್ ದ್ರಾವಿಡ್ ಉತ್ತರಾಧಿಕಾರಿಯಾಗಿ ಗಂಭೀರ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಟಿ20 ವಿಶ್ವಕಪ್-2024ರಲ್ಲಿ ಚಾಂಪಿಯನ್ ಆಗಿ ಭಾರತ ತಂಡ ಹೊರಹೊಮ್ಮಿದೆ. ರೋಹಿತ್ ಸೇನೆ ಅದ್ಭುತ ಹೋರಾಟ ನಡೆಸಿ 13 ವರ್ಷಗಳ ಸುದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಆದರೆ, ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಭಾರೀ ಬೆಂಬಲ ನೀಡಿದ್ದು ಗೊತ್ತೇ ಇದೆ. ವಿಜಯೋತ್ಸವದ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ 125 ಕೋಟಿ ರೂ.ಗಳ ಚೆಕ್ ಅನ್ನು ಆಟಗಾರರಿಗೆ ಹಸ್ತಾಂತರಿಸಲಾಯಿತು.
ರಾಹುಲ್ ದ್ರಾವಿಡ್ ಮಾರ್ಗದರ್ಶನದ ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಗೆದ್ದು ಇತಿಹಾಸ ಬರೆದಿದೆ. ಇದೀಗ ಈ ಲೆಗಸಿಯನ್ನು ಮುಂದುವರಿಸಿ ಮತ್ತಷ್ಟು ಟ್ರೋಫಿ ಕೈವಶ ಮಾಡಲು ಟೀಂ ಇಂಡಿಯಾ ನೂತನ ಕೋಚ್ ಜವಾಬ್ದಾರಿ ಯಾರು ವಹಿಸಿಕೊಳ್ಳಲಿದ್ದಾರೆ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ.
Gautam Gambhirs Remuneration: ಟಿ20 ವಿಶ್ವಕಪ್ 2024 ಚಾಂಪಿಯನ್ಶಿಪ್ ಗೆದ್ದ ನಂತರ ರಾಹುಲ್ ದ್ರಾವಿಡ್ ಅವರ ಕೋಚ್ ಅಧಿಅಕರಾವದಿ ಮುಗಿದಿದ್ದು. ಈ ಸ್ಥಾನಕ್ಕೆ ರಾಹುಲ್ ಗುಡ್ ಬೈ ಹೇಳಿದ್ದು ಗೊತ್ತೇ ಇದೆ. ಇದೀಗ ಈ ಸ್ಥಾನಕ್ಕೆ ಗೌತಮ್ ಗಂಭಿರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಈ ವಿಷಯವನ್ನು ಬಿಸಿಸಿಐ ಅದಿಕೃತವಾಗಿ ಘೋಷಣೆ ಮಾಡಿದೆ.
Ishan Kishan: ಭಾರತ ತಂಡದ ಯುವ ಸ್ಟಾರ್ ಆಟಗಾರ ಇಶಾನ್ ಕಿಶನ್ ಜಿಂಬಾಬ್ವೆ ಟಿ20 ಸರಣಿಗೂ ಆಯ್ಕೆಯಾಗಿಲ್ಲ. ರಿಷಬ್ ಪಂತ್ ಗಾಯಗೊಂಡಾಗ ಇಶಾನ್ ಕಿಶನ್ ಭಾರತದ ಪ್ರಾಥಮಿಕ ವಿಕೆಟ್ ಕೀಪರ್ ಆಗಿದ್ದರು. ಟಿ20 ಹಾಗೂ ಏಕದಿನ ಪಂದ್ಯಗಳಲ್ಲಿ ಉತ್ತಮವಾಗಿ ಆಡಿದ ಇಶಾನ್ ಕಿಶನ್ ಟೆಸ್ಟ್ ತಂಡಕ್ಕೂ ಪರಿಚಯವಾಗಿದ್ದರು.
Goutham Gambir: ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಗೌತಮ್ ಗಂಭೀರ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲು ರೆಡಿಯಾಗಿದ್ದಾರೆ. ಈಗಾಗಲೇ ಗಂಭೀರ್ ಮತ್ತು ಡಬ್ಲ್ಯೂವಿ ರಾಮನ್ ಇಬ್ಬರೂ ಈಗಾಗಲೇ ಈ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದು, ಈ ಸ್ಥಾನಕ್ಕೆ ಗೌತಮ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.