BCCI Annual Contract List: ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಮಯಾಂಕ್ ಅಗರ್ವಾಲ್ ದೀರ್ಘಕಾಲದವರೆಗೆ ಟೀಮ್ ಇಂಡಿಯಾದ ಭಾಗವಾಗಿರಲು ಸಾಧ್ಯವಾಗಲಿಲ್ಲ. ಈಗ ಅವರನ್ನು ವಾರ್ಷಿಕ ಒಪ್ಪಂದದಿಂದಲೂ ಕೈಬಿಡಲಾಗಿದೆ. ಕಳೆದ ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ಮಯಾಂಕ್ ಕಳಪೆ ಪ್ರದರ್ಶನ ನೀಡಿದ್ದರು.
Indian Cricket Team Schedule: ಭಾರತ ತಂಡವು ಈಗ ತನ್ನ ಫ್ಯೂಚರ್ ಟೂರ್ ಪ್ರೋಗ್ರಾಂ (ಎಫ್ಟಿಪಿ) ಅಡಿಯಲ್ಲಿ ಜುಲೈ-ಆಗಸ್ಟ್ನಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಮಾಡಬೇಕಾಗಿದೆ. ಈ ಪ್ರವಾಸದಲ್ಲಿ ಹೆಚ್ಚುವರಿ ಪಂದ್ಯಗಳನ್ನು ಆಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಪ್ಪಿಗೆ ನೀಡಿದೆ.
India vs Australia ODI Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಿತು. ಮೊದಲ ODI ನಲ್ಲಿ, ರೋಹಿತ್ ಶರ್ಮಾ ವೈಯಕ್ತಿಕ ಕಾರಣಗಳಿಂದ ತಂಡದಿಂದ ಹೊರನಡೆದಾಗ ಇಶಾನ್ ಕಿಶನ್ ಆರಂಭಿಕರಾಗಿ ಆಯ್ಕೆಯಾದರು.
IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ನಂತರ ಮಾರ್ಚ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆದರೆ ಬಿಸಿಸಿಐ ಆ ಆಟಗಾರನನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಆಟಗಾರನ ಗೋಲ್ಡನ್ ವೃತ್ತಿಜೀವನವು ಕೊನೆಗೊಳ್ಳಬಹುದು ಎಂದು ತೋರುತ್ತದೆ.
IND vs AUS 3rd Test : ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 9 ವಿಕೆಟ್ಗಳಿಂದ ಭಾರತ ತಂಡವನ್ನು ಸೋಲಿಸಿತು. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಈ ಪಂದ್ಯವು 3 ದಿನಗಳಲ್ಲಿ ಕೊನೆಗೊಂಡಿತು.
IND vs AUS : ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ. ದೆಹಲಿ ಟೆಸ್ಟ್ ಗೆದ್ದ ನಂತರ ಟೀಂ ಇಂಡಿಯಾಗೆ ಸುಮಾರು ಒಂದು ವಾರದ ವಿರಾಮ ಸಿಕ್ಕಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 17ರಿಂದ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಏಕದಿನ ಸರಣಿಯಲ್ಲಿ ದಿಢೀರ್ ಅಂತಾ ಒಬ್ಬ ಆಟಗಾರನನ್ನು ಕಡೆಗಣಿಸಲಾಗಿದೆ. ಟೀಂ ಇಂಡಿಯಾದ ಈ ಆಟಗಾರನ ವೃತ್ತಿಜೀವನ ಇದೀಗ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ. ಯಾರು ಈ ಆಟಗಾರ ಅಂತೀರಾ?
India vs Australia : ಕೆಎಲ್ ರಾಹುಲ್ ಕಾರಣ, ಟೀಂ ಇಂಡಿಯಾದ ಪ್ರತಿಭಾವಂತ ಕ್ರಿಕೆಟಿಗನ ವೃತ್ತಿಜೀವನವು ವಿನಾಶದ ಅಂಚಿನಲ್ಲಿದೆ. ಪ್ರತಿಭಾವಂತ ಈ ಆಟಗಾರನನ್ನು ಇಂದೋರ್ ಮತ್ತು ಅಹಮದಾಬಾದ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಿಗೆ ಈ ಆಟಗಾರನನ್ನು ಆಯ್ಕೆ ಮಾಡಿಲ್ಲ.
India vs Australia : ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿದೆ. ಆರಂಭಿಕ ಎರಡೂ ಪಂದ್ಯಗಳಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಅವರೇ ಟೀಂ ಇಂಡಿಯಾ ಗೆಲುವಿನ ಹೀರೋ ಆಗಿದ್ದರು. ಈ ನಡುವೆ ಟೀಂ ಇಂಡಿಯಾ ಆಟಗಾರನೊಬ್ಬನ ಬಗ್ಗೆ ಬಿಗ್ ಹೇಳಿಕೆ ನೀಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಲಿದೆ.
Team India : ಬಿಸಿಸಿಐನ ಆಯ್ಕೆ ಸಮಿತಿಯು ಕೆಎಲ್ ರಾಹುಲ್ ಅವರ ಟೆಸ್ಟ್ ಉಪನಾಯಕತ್ವ ಸ್ಥಾನದಿಂದ ತೆಗೆದುಹಾಕಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್ಗೆ ಆಯ್ಕೆಗಾರರು ಭಾರತೀಯ ಟೆಸ್ಟ್ ತಂಡವನ್ನು ಪ್ರಕಟಿಸಿದ್ದು, ಇದರಲ್ಲಿ ಕೆಎಲ್ ರಾಹುಲ್ ಅವರನ್ನು ಉಪನಾಯಕತ್ವದಿಂದ ತೆಗೆದುಹಾಕಲಾಗಿದೆ.
Chennai Super Kings Next Captain: ಮುಂಬರುವ ಐಪಿಎಲ್-2023 ಸೀಸನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಫೆಬ್ರವರಿ 17 ರ ಸಂಜೆ ಇಂಡಿಯನ್ ಪ್ರೀಮಿಯರ್ ಲೀಗ್ನ 16 ನೇ ಸೀಸನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
Chetan Sharma Resign From BCCI Chief Selector: ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚೇತನ್ ಶರ್ಮಾ ತಮ್ಮ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ನೀಡಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ.
Indian Cricket Team Chief Selector: ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಜೀ ನ್ಯೂಸ್ನ ಕುಟುಕು ಕಾರ್ಯಾಚರಣೆ 'ಗೇಮ್ ಓವರ್' ನಲ್ಲಿ ಹಲವಾರು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. T20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಕಳಪೆ ಪ್ರದರ್ಶನದ ನಂತರ, ಅವರನ್ನು ಮುಖ್ಯ ಆಯ್ಕೆಗಾರ ಹುದ್ದೆಯಿಂದ ತೆಗೆದುಹಾಕಲಾಯಿತು, ಆದರೆ 2 ತಿಂಗಳ ನಂತರ ಮತ್ತೆ ಅವರಿಗೆ ಅಧಿಕಾರ ನೀಡಲಾಯಿತು.
Who is Chethan Sharma: ಜನವರಿ 3, 1966 ರಂದು ಜನಿಸಿದ ಚೇತನ್ ಶರ್ಮಾ, 1983 ರಲ್ಲಿ 17 ನೇ ವಯಸ್ಸಿನಲ್ಲಿ ಪಂಜಾಬ್ಗಾಗಿ ಪ್ರಥಮ ದರ್ಜೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಅದರ ಮುಂದಿನ ವರ್ಷ ODI ಅಂತರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದರು. ಟೀಂ ಇಂಡಿಯಾ ಪರವಾಗಿ ಏಕದಿನ ಹಾಗೂ ಟೆಸ್ಟ್ ಪಂದ್ಯಗಳನ್ನು ಆಡಿರುವ ಚೇತನ್ ಶರ್ಮಾ ವೇಗದ ಬೌಲರ್ ಆಗಿ ಹೆಸರು ಮಾಡಿದ್ದಾರೆ.
ZEE NEWS Exclusive Sting Operation: ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಅವರು ಜೀ ನ್ಯೂಸ್ನ ಹಿಡನ್ ಕ್ಯಾಮೆರಾದಲ್ಲಿ ಅನೇಕ ದೊಡ್ಡ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿದ ಅವರು, ”ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರು, ಪ್ರಸ್ತುತ ಯುಗದಲ್ಲಿ ವಿಶ್ವದ ದೊಡ್ಡ ಆಟಗಾರನಿಗೆ ಗುರಿಯಾಗಿದ್ದೇಕೆ ಎಂದು ತಿಳಿಯಲು ನೀವು ಬಯಸುತ್ತೀರಾ? ಅಷ್ಟಕ್ಕೂ ಬಿಸಿಸಿಐ ದಾದಾನಿಗೆ ವಿರಾಟ್ ಇಡೀ ವಿಶ್ವದ ಮುಂದೆ ಸವಾಲು ಹಾಕಿದ್ದೇಕೆ ಗೊತ್ತಾ? ಎಂದು ಹೇಳಿದ್ದಾರೆ.
Zee News Sting Operation: ಒಂದರಿಂದ ಹನ್ನೊಂದನೇಯವರೆಗಿನ ಭಾರತೀಯ ಕ್ರಿಕೆಟ್ ತಂಡದ ಪ್ರತಿ ಸ್ಥಾನಕ್ಕೂ ಹಲವು ಸ್ಪರ್ಧಿಗಳಿರುತ್ತಾರೆ. ಯಾರಿಗಾದರೂ ಅವಕಾಶಗಳು ಬಂದರೆ, ಅವಕಾಶಕ್ಕಾಗಿ ಕಾಯುತ್ತಿರುವ ಅನೇಕರ ವೃತ್ತಿಜೀವನವು ಕೊನೆಗೊಳ್ಳುತ್ತದೆ. ಇಂತಹ ಪ್ರಬಲ ಪೈಪೋಟಿಯ ನಡುವೆಯೂ ಆಟಗಾರನೊಬ್ಬ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೆ ಸಣ್ಣಪುಟ್ಟ ಗಾಯಗಳಿಂದಾಗಿ ತಂಡದಿಂದ ಹೊರಗುಳಿಯಲು ಬಯಸುವುದಿಲ್ಲ.
Zee News Exclusive Sting Operation: ಬಿಸಿಸಿಐನ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಬಿಸಿಸಿಐ ಮತ್ತು ಟೀಂ ಇಂಡಿಯಾ ಆಟಗಾರರ ಕರ್ಮಕಾಂಡದ ಬಗ್ಗೆ ಮಾತನಾಡಿದ್ದಾರೆ. ಈ ಎಲ್ಲಾ ಮಾಹಿತಿಗಳು Zee News Exclusive ಆಗಿ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ತಿಳಿದುಬಂದಿದೆ. ಈ ಸೀಕ್ರೆಟ್ ಕ್ಯಾಮಾರದಲ್ಲಿ ನಕಲಿ ಫಿಟ್ನೆಸ್ ಗಾಗಿ ಇಂಜೆಕ್ಷನ್ ತೆಗೆದುಕೊಳ್ಳುವ ಟೀಂ ಇಂಡಿಯಾದ ಆಟಗಾರರ ಬಗ್ಗೆಯೂ ಮಾತನಾಡಿರುವುದು ಸೆರೆಯಾಗಿದೆ.
Zee News Sting Operation: ಟೀಂ ಇಂಡಿಯಾದಲ್ಲಿ ಯಾವ ರೀತಿ ಫಿಟ್ನೆಸ್ ಗಾಗಿ ನಕಲಿ ಇಂಜೆಕ್ಷನ್ ಗಳನ್ನು ತೆಗೆದುಕೊಳ್ಳುತ್ತಾರೆಂಬ ವಿಚಾರವನ್ನು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಸೌರವ್ ಗಂಗೂಲಿ ಮತ್ತು ವಿರಾಟ್ ಕೊಹ್ಲಿ ನಡುವಿನ ವಿವಾದಕ್ಕೆ ನಿಜವಾದ ಕಾರಣ ಏನು ಎಂಬುದನ್ನು ಸಹ ಇಂದು ಚೇತನ್ ಶರ್ಮಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.