ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ವಿಶೇಷವಾದ ಸಾಧನೆಯನ್ನು ಮಾಡಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಅವರಿಬ್ಬರದ್ದು ೧೧ ವರ್ಷಗಳ ದಾಂಪತ್ಯ ಮೊದ ಮೊದಲು ಹೆಂಡತಿಯನ್ನ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದ ಗಂಡ ಏಕಾಏಕಿ ಕುಡಿತದ ದಾಸನಾಗಿಬಿಟ್ಟಿದ್ದ ಇದರಿಂದ ನಿತ್ಯ ಆ ಸಂಸಾರದಲ್ಲಿ ಕಲಹ ಶುರುವಿತ್ತು ಗಂಡ ಹೆಂಡತಿಯ ಜಗಳ ಉಂಡು ಮಲಗೋತನಕ ಎನ್ನುವ ಮಾತನ್ನೂ ಮೀರಿ ಆ ಕುಟುಂಬದಲ್ಲಿ ಘೋರ ಘಟನೆಯೊಂದು ನಡೆದು ಹೋಗಿದೆ.ಚೆನ್ನಾಗಿದ್ದ ಸಂಸಾರದಲ್ಲಿ ಬಿರುಗಾಳಿ ಎದ್ದಿದ್ದೆ ಅಷ್ಟಕ್ಕೂ ಆಗಿದ್ದೇನು ಅಂತೀರಾ? ಈ ಸ್ಟೋರಿ ನೋಡಿ.
ಈಗಾಗಲೇ ನಟ ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ರಾಜ್ಯದೆಲ್ಲೆಡೆ ಪ್ರಚಾರ ಮಾಡುತ್ತಿದ್ದಾರೆ,ಈಗ ಇದರ ಮುಂದುವರೆದ ಭಾಗವಾಗಿ ನಾಳೆಯಿಂದ ಕುಂದಾನಗರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.
Karnataka Assembly Election 2023: ಚಾಮರಾಜನಗರ BSP ಅಭ್ಯರ್ಥಿ ಹ.ರಾ.ಮಹೇಶ್ ಆನೆ ಮಾದರಿ ಪ್ರಚಾರ ರಥವನ್ನು ನಿರ್ಮಾಣ ಮಾಡಿಸಿಕೊಂಡಿದ್ದು, ಆನೆ ಮೇಲೆ ಕುಳಿತು ಭರ್ಜರಿ ಪ್ರಚಾರ ನಡೆಸಿ ಗಮನ ಸೆಳೆಯುತ್ತಿದ್ದಾರೆ.
Karnataka Assembly election 2023: ಚಿಕ್ಕೋಡಿಯಲ್ಲಿ ದಾಖಲೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 2.31 ಲಕ್ಷ ಮೌಲ್ಯದ 10 ಟನ್ ಪಡಿತರ ಅಕ್ಕಿಯನ್ನು ಎಫ್ಎಸ್ಟಿ ಹಾಗೂ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಝಣ ಝಣ ಕಾಂಚಾಣ. ದಾಖಲೆ ಇಲ್ಲದ ಖಾಸಗಿ ಬಸ್ನಲ್ಲಿ 2 ಕೋಟಿ ಸೀಜ್. ಬೆಳ್ಳಂಬೆಳಗ್ಗೆಯೇ ಚುನಾವಣಾ ಅಧಿಕಾರಿಗಳ ಮೆಗಾ ರೇಡ್. ಹಿರೇಬಾಗೇವಾಡಿ ಟೋಲ್ ಗೇಟ್ನಲ್ಲಿ 2 ಕೋಟಿ ನಗದು ವಶ. ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ನಲ್ಲಿ ಸಾಗಿಸಲಾಗುತ್ತಿದ್ದ ಹಣ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ನಲ್ಲಿ ಸಿಕ್ಕ ನಗದು.
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 70 ಲಕ್ಷ ಹಣ ಲಾಕ್ ಆಗಿದೆ.. ಬೆಳಗಾವಿಯ ಕಾಗವಾಡ ಚೆಕ್ಪೋಸ್ಟ್ ನಲ್ಲಿ ಕಾರಿನಲ್ಲಿ 70 ಲಕ್ಷ ಹಣ ತುಂಬಿಕೊಂಡು ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ..
ಅಥಣಿ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಮಾಜಿ ಸಚಿವ ಲಕ್ಷ್ಮಣ ಸವದಿ ಇವತ್ತೇ ತಿರ್ಮಾನ ಮಾಡುತ್ತಾರಾ? ಅನ್ನೋ ಪ್ರಶ್ನೆ ಮೂಡಿದೆ. ಬಿಜೆಪಿ ಬಿಟ್ಟು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರಾ? ಅನ್ನೂ ಕುತೂಹಲ ಸಹ ಮೂಡಿದೆ.
Belagavi : ದೀರ್ಘ ದಂಡ ನಮಸ್ಕಾರ ಹಾಕುತ್ತಿರುವ ಯುವತಿಯ ತಲೆಮೇಲೆ ಕಾರಿನ ಚಕ್ರ ಹರಿದು ಯುವತಿಯು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ.
ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಸದರಿ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ.
ಕುಂದಾನಗರಿ ಬೆಳಗಾವಿಗೆ ಇಂದು ರಾಹುಲ್ ಗಾಂಧಿ ಎಂಟ್ರಿ ನೀಡಲಿದ್ದಾರೆ.. ಇಂದು ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.. ಮೋದಿ ಪವರ್ ಶೋಗೆ ಟಕ್ಕರ್ ಕೊಡಲು ರಾಹುಲ್ ರಣತಂತ್ರ ರೂಪಿಸಿದ್ದಾರೆ.
ರಾಹುಲ್ ಗಾಂಧಿಯವರು 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ಪೊಲೀಸರು ಸಾಕ್ಷಿ ಕೇಳಿಕೊಂಡು ಅವರ ಮನೆ ಮುಂದೆ ಹೋಗಿದ್ದಾರೆ. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡಿದರೂ ತನಿಖೆ ನಡೆಸುತ್ತಿಲ್ಲ! ಎಂದು ಖರ್ಗೆ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.