ಇಸ್ರೇಲ್ನಲ್ಲಿ ಇರಾನ್ನೊಂದಿಗಿನ ಘರ್ಷಣೆಯಿಂದಾಗಿ ಉಂಟಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಬೆಂಗಳೂರಿನ ಬಿಪ್ಯಾಕ್ (ಬೆಂಗಳೂರು ಪೊಲಿಟಿಕಲ್ ಆಕ್ಷನ್ ಕಮಿಟಿ) ತಂಡದ 18 ಸದಸ್ಯರು ತಮ್ಮ ಅಧ್ಯಯನ ಪ್ರವಾಸವನ್ನು ಮೊಟಕುಗೊಳಿಸಿ ಜೂನ್ 19, 2025 ರಂದು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಬೆಂಗಳೂರಿನ ಮಹದೇವಪುರದಲ್ಲಿ ಜೂನ್ 19, 2025 ರಂದು ಸಂಭವಿಸಿದ ಘಟನೆಯಲ್ಲಿ, ಅತಿವೇಗದಲ್ಲಿ ಬಂದ ಸ್ಕೂಲ್ ವ್ಯಾನ್ ಒಂದು ಸಿಗ್ನಲ್ ಬಳಿ ನಿಯಂತ್ರಣ ತಪ್ಪಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ, ಆದರೆ ಬೆಂಗಳೂರು ಸೇರಿದಂತೆ ಇತರ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ಗಳನ್ನು ಜಾರಿಗೊಳಿಸಲಾಗಿದೆ
"ಕೌಂತೇಯ" ಎಂಬುದು ನಿರ್ದೇಶಕ ಬಿ.ಕೆ. ಚಂದ್ರಹಾಸ ರವರ ಕ್ರೈಂ ಥ್ರಿಲ್ಲರ್ ಚಿತ್ರವಾಗಿದ್ದು, ಮರ್ಡರ್ ಮಿಸ್ಟ್ರಿ ಸುತ್ತ ಸುತ್ತುವ ಕಥೆಯನ್ನು ಹೊಂದಿದೆ. ಅಚ್ಯುತ ಕುಮಾರ್ ನಿವೃತ್ತ ಸಬ್ ಇನ್ಸ್ಪೆಕ್ಟರ್ ಪಾತ್ರದಲ್ಲಿದ್ದು, ರೋಚಕ ಪ್ರಕರಣವನ್ನು ಚಿತ್ರಿಸುತ್ತಾರೆ, ಶರಣ್ಯ ಶೆಟ್ಟಿ ಕ್ರೈಂ ರಿಪೋರ್ಟರ್ ಹಾಗೂ ಅವರ ಮಗಳಾಗಿ ನಟಿಸಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಶೂಟಿಂಗ್ ಆಗಿರುವ ಈ ಚಿತ್ರದಲ್ಲಿ ಹಾಡುಗಳಿಲ್ಲದೆ ಹಿನ್ನೆಲೆ ಸಂಗೀತವೇ ಮುಖ್ಯ ಪಾತ್ರ ವಹಿಸಿದೆ.
ಬರೋಬ್ಬರಿ 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ಆರ್ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ದಾರುಣ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಬೆಳ್ಳಂದೂರು ಪ್ರದೇಶದಲ್ಲಿ ಜೂನ್ 01, 2025 ರಂದು ಸಂಜೆ 4 ಗಂಟೆ ಸುಮಾರಿಗೆ ರಸ್ತೆ ಜಗಳದ ವೇಳೆ ಯುವತಿಯೊಬ್ಬಳು ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ
ಕನ್ನಡ ಭಾಷೆಯ ಇತಿಹಾಸದ ಬಗ್ಗೆ ಯಾರೇ ತಪ್ಪಾಗಿ ಮಾತನಾಡಿದರೂ ಖಂಡಿಸಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಆಗ್ರಹಿಸಿದ್ದಾರೆ. ನಟ ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ನಟ ಶಿವರಾಜಕುಮಾರ್ (ಶಿವಣ್ಣ) ಖಂಡಿಸಬೇಕು ಎಂದು ತಂಗಡಗಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಒತ್ತಾಯಿಸಿದ್ದಾರೆ. “ನಾಡು, ಜಲ, ಭಾಷೆಯ ಬಗ್ಗೆ ಯಾರೇ ತಪ್ಪಾಗಿ ಮಾತನಾಡಿದರೂ ಸುಮ್ಮನಿರದೆ ಖಂಡಿಸಬೇಕು. ಕನ್ನಡದ ಗೌರವವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಅವರು ಹೇಳಿದ್ದಾರೆ.
ಕನ್ನಡ ಅಂತೀರಾ... ಸ್ಟಾರ್ ನಟರಿಗೆ ಮಾತ್ರ ಬೆಂಬಲಿಸೋದು. ಹೊಸಬರನ್ನೂ ಕೂಡ ಬೆಳೆಸಬೇಕು. ಕಮಲ್ ಹಾಸನ್ ಅವರಿಗೆ ಇದೆಲ್ಲ ಗೊತ್ತಾಗುತ್ತದೆ. ಅವರೇ ಅದನ್ನು ಸರಿ ಮಾಡಿಕೊಳ್ಳುತ್ತಾರೆ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ.
Kamal Hassan Shocking Comment: ಗ್ಲೋಬಲ್ ಸ್ಟಾರ್ ಕಮಲ್ ಹಾಸನ್ ಬೆಂಗಳೂರಿನಲ್ಲಿ ಥಗ್ ಲೈಫ್ ಪ್ರಮೋಷನ್ನಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.. ಇದಕ್ಕೆ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಧಾನಿಯಲ್ಲಿ ಪರ ಭಾಷಿಗರ ಹಾವಳಿ ಹೆಚ್ಚಾಗುತ್ತಿದೆ. ಮೂಲ ಕನ್ನಡಿಗರ ಮೇಲೆ ಭಾಷೆಯ ವಿಷಯದಲ್ಲಿ ದಬ್ಬಾಳಿಕೆ ನಡೆಯುತ್ತಿದೆ. ಅಲ್ಲದೆ, ಬೇರೆ ರಾಜ್ಯಗಳಿಂದ ಉದ್ಯೋಗ ಅರಸಿ ಬಂದು, ಕನ್ನಡ ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆ. ಇದೀಗ ಕನ್ನಡ ಕಲಿಯುತ್ತೇವೆ ಎನ್ನುವ ಬದಲು ಉದ್ಯಮಿಯೊಬ್ಬರು ತಮ್ಮ ಕಚೇರಿ ಸ್ಥಳಾಂತರಿಸಲು ಮುಂದಾಗಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲೂ ಭಾರಿ ಮಳೆಯ ಅವಾಂತರದಿಂದ ರಸ್ತೆಗಳಲ್ಲಿ ನೀರು ನಿಂತು, ಸಂಚಾರಕ್ಕೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಿತಿಗತಿಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಜನರ ಮನವಿಗಳನ್ನು ಸ್ವೀಕರಿಸಿ, ಸೂಕ್ತ ಕ್ರಮಕ್ಕೆ ಭರವಸೆ ನೀಡಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲೂ ಭಾರಿ ಮಳೆಯ ಅವಾಂತರದಿಂದ ರಸ್ತೆಗಳಲ್ಲಿ ನೀರು ನಿಂತು, ಸಂಚಾರಕ್ಕೆ ತೊಂದರೆಯಾಗಿದೆ. ಈ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರದಲ್ಲಿ ಪರಿಶೀಲನೆ ನಡೆಸಿ, ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಿಂದಾಗಿ ಕೋರಮಂಗಲ, ಬಿಎಂಟಿಸಿ (BMTC), ಮತ್ತು ಟಿಟಿಎಂಸಿ (TTMC) ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕೋರಮಂಗಲದಂತಹ ಪ್ರಮುಖ ಪ್ರದೇಶಗಳಲ್ಲಿ ರಸ್ತೆಗಳು ನೀರು ತುಂಬಿಕೊಂಡಿದ್ದು, ಸಂಚಾರ ದಟ್ಟಣೆ ಮತ್ತು ಸಾರಿಗೆ ಸಮಸ್ಯೆಗಳು ಉಂಟಾಗಿವೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.