ಮುಂದಿನ ಲೋಕಸಭೆ ಅಥವಾ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ರಾಹುಲ್ ಗಾಂಧಿ ಅವರು ಈ ಯಾತ್ರೆಯನ್ನು ಹಮ್ಮಿಕೊಂಡಿಲ್ಲ.ಸ್ವತಂತ್ರ್ಯ ಭಾರತದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಪಾದಯಾತ್ರೆ.
ನನ್ನ ಕುಟುಂಬಕ್ಕೂ ಬಳ್ಳಾರಿ ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ ಎಂದು ಹೇಳಲು ಬಯಸುತ್ತೇನೆ. ನನ್ನ ತಾಯಿ ಸೋನಿಯಾ ಗಾಂಧಿ ಅವರು ಇಲ್ಲಿಂದ ಸ್ಪರ್ಧಿಸಿ ಇಲ್ಲಿನ ಜನರ ಬೆಂಬಲದೊಂದಿಗೆ, ನನ್ನ ಅಜ್ಜಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಗೆದ್ದು ಬಂದಿದ್ದರು.
ಜೋಡೋ ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದರಾಮಯ್ಯ ಹೆಜ್ಜೆ ಹಾಕಿದ್ದಾರೆ.. ಚಿತ್ರದುರ್ಗ ಜಿಲ್ಲೆಯ ಮೊಳಕಾಲೂರು ತಾಲೂಕಿನ ಕಣಕುಪ್ಪೆ ಗ್ರಾಮದಲ್ಲಿ ಸಿದ್ದರಾಮಯ್ಯ ವ್ಯಾಸ್ತವ್ಯ ಹೂಡಿದ್ದರು. ಇದಕ್ಕೂ ಮುನ್ನ ಸಿದ್ದರಾಮಯ್ಯಗೆ ಗೊರವರ ನೃತ್ಯದ ಮೂಲಕ ಸ್ಥಳೀಯರು ಸ್ವಾಗತ ಕೋರಿದರು. ನೃತ್ಯಕ್ಕೆ ಮನಸೋತ ಸಿದ್ದರಾಮಯ್ಯ ತಾವೂ ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು.
ದಿವಂಗತ ಡಾ. ರಾಜ್ಕುಮಾರ್ ಮತ್ತು ಅವರ ಪುತ್ರ, ದಿವಂಗತ ಡಾ. ಪುನೀತ್ ರಾಜ್ಕುಮಾರ್ ಅವರ ನೇತ್ರದಾನದಂತಹ ನಿಸ್ವಾರ್ಥ ಕಾರ್ಯವು ಸಹಸ್ರಾರು ಕನ್ನಡಿಗರು ಮತ್ತು ಭಾರತೀಯರಿಗೆ ಸ್ಫೂರ್ತಿ ನೀಡಿದ್ದು, ಅಂಗಾಂಗ ದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಕೋಟೆ ನಾಡು ಚಿತ್ರದುರ್ಗದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇತ್ತ ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಪಾದಯಾತ್ರೆಗೆ ಮೊಡ ಕವಿದ ವಾತಾವರಣದಲ್ಲೂ ಮುಂದುವರಿದಿದೆ. ಮಂಗಳವಾರ (ಅಕ್ಟೋಬರ್ 11) ಹರ್ತಿಕೋಟೆ ಇಂದ ಹೊರಟ ಪಾದಯಾತ್ರೆ ಚಳ್ಳಕೆರೆ ತಲುಪಿತು. ಈ ಮಧ್ಯೆ, ಭಾರತ್ ಜೋಡೋ ಯಾತ್ರೆಯಲ್ಲಿ ಪುಟ್ಟ ಬಾಲಕನೊಂದಿಗೆ ರಾಹುಲ್ ಗಾಂಧಿ ಒಡನಾಟ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿಗೆ ಎಂಟ್ರಿಯಾದ ಭಾರತ್ ಜೋಡೋ ಪಾದಯಾತ್ರೆ ವೇಳೆ ಸಿಕ್ಕ ಬಾಲಕನೊಬ್ಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಸಲ್ ಮುಟ್ಟಿ ಅವರ ಶಕ್ತಿ ಚೆಕ್ ಮಾಡಿದನು. ಪುಟ್ಟ ಬಾಲಕನೊಂದಿಗೆ ಮಗುವಾಗಿಯೇ ವರ್ತಿಸಿದ ರಾಹುಲ್ ಗಾಂಧಿ ಕೊನೆಗೆ ರಸ್ತೆಯಲ್ಲಿಯೇ ಆ ಬಾಲಕನೊಂದಿಗೆ ಡಿಪ್ಸ್ ಹೊಡೆದಿದ್ದಾರೆ.
ಭಾರತೀಯ ಜನತಾ ಪಕ್ಷ ಮತ್ತೊಮ್ಮೆ 2023 ರ ಚುನಾವಣೆಯಲ್ಲಿ ವಿಜಯಶಾಲಿಯಾಗುವ ವಿಶ್ವಾಸವಿದೆ, ಎಲ್ಲೆಡೆ ಬಹಳಷ್ಟು ಉತ್ಸಾಹವಿದೆ. ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸವನ್ನು ಗಳಿಸಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭಾರತ್ ಜೋಡೋ ಐಕ್ಯತಾ ಯಾತ್ರೆ ಕೋಟೆಗಳನಾಡು ಚಿತ್ರದುರ್ಗ ಜಿಲ್ಲೆಗೆ ಎಂಟ್ರಿ ಕೊಟ್ಟಿದೆ. ಸಿದ್ದರಾಮಯ್ಯ ಗೈರು ಎದ್ದು ಕಾಣುತ್ತಿತ್ತು. ಇದರ ನಡುವೆ ಮಳೆರಾಯ ಪಾದಯಾತ್ರೆಗೆ ಅಡ್ಡಿ ಪಡಿಸಿದ್ದಾನೆ. ವಿವಿಧ ಜಿಲ್ಲೆಯಿಂದ ಬಂದ ಕಾರ್ಯಕರ್ತರು ಮಳೆಯಲ್ಲಿ ನೆನೆದೇ ಪಾದಯಾತ್ರೆ ಮಾಡಿದ್ದಾರೆ. ಇನ್ನೂ 3 ದಿನಗಳ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕಿನಲ್ಲಿ ಸಂಚರಿಸಲಿದೆ.
ಹೀಗಾಗಿ ನವೆಂಬರ್ ಮೊದಲ ವಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ, ಸುರ್ಜೇವಾಲ ನೇತೃತ್ವದಲ್ಲಿ ರಾಜ್ಯ ಪ್ರವಾಸ ಮಾಡಲು ನಿರ್ಧರಿಸಲಾಗಿದೆ. ಈ ರಥಯಾತ್ರೆಯ ಮೂಲಕ ಮತ್ತೆ ಮತದಾರರ ವಿಶ್ವಾಸಗಳಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಸರತ್ತು ಶುರುಮಾಡಿದೆ.
ಇಂದು ಚಿತ್ರದುರ್ಗ ಜಿಲ್ಲೆಗೆ ಭಾರತ್ ಜೋಡೋ ಯಾತ್ರೆ ಎಂಟ್ರಿ ನೀಡಲಿದೆ. ಸಂಜೆ 4 ಗಂಟೆಗೆ ಹಿರಿಯೂರಿಗೆ ಭಾರತ್ ಜೋಡೋ ಯಾತ್ರೆ ಆಗಮಿಸಲಿದ್ದು, ರಾಹುಲ್ ಯಾತ್ರೆಗೆ ಪ್ರಗತಿಪರ ಸಂಘಟನೆಗಳು ಸಾಥ್ ನೀಡಲಿವೆ.
ತುಮಕೂರಿನಲ್ಲಿ ಮುಂದುವರಿದ ಭಾರತ್ ಜೋಡೋ ಯಾತ್ರೆ. ಕೆಬಿ ಕ್ರಾಸ್ನಿಂದ ಬರಕನಾಳು ಗೇಟ್ವರೆಗೆ ಪಾದಯಾತ್ರೆ ನಡೆಯುತ್ತಿದೆ. ಕಾಡೇನಹಳ್ಳಿಯಲ್ಲಿ ರೈತರ ಜೊತೆ ಸಂವಾದ ಕೂಡ ನಡೆಯಲಿದೆ. ರಾಹುಲ್ ಜೊತೆ ಡಿಕೆಶಿ, ಸಿದ್ದರಾಮಯ್ಯ, ಡಾ. ಜಿ.ಪರಮೇಶ್ವರ್ ಮತ್ತಿತರರು ಹೆಜ್ಜೆ ಹಾಕಿದ್ದಾರೆ.
ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಅವರೊಂದಿಗಿನ ಸ್ಪರ್ಧೆಯು ದೇಶ ಮತ್ತು ಪಕ್ಷದ ಒಳಿತಿಗಾಗಿ ತಮ್ಮ ದೃಷ್ಟಿಕೋನಗಳನ್ನು ಮುಂದಿಡುವ ಗುರಿಯನ್ನು ಹೊಂದಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.