ಭಾರತ್ ಜೋಡೋ ಯಾತ್ರೆಗೆ ಮೂವರು ಎಸ್ಪಿ, ಎಂಟು ಜನ ಡಿವೈಎಸ್ಪಿ, 25 ಇನ್ಸಫೆಕ್ಟರ್, 50 ಜನ ಸಬ್ ಇನ್ಸ್ ಪೆಕ್ಟರ್, ಒಂದು ಸಾವಿರಕ್ಕೂ ಅಧಿಕ ಮಂದಿ ಪೇದೆ, ಕೆಎಸ್ಆರ್ಪಿ, ಹತ್ತಕ್ಕೂ ಅಧಿಕ ಡಿಆರ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಊಟಿ ವೃತ್ತದಲ್ಲಿ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಬೃಹತ್ ಕಮಾನು ನಿರ್ಮಿಸುತ್ತಿದ್ದು ಎಲ್ಲರ ಹುಬ್ಬೇರಿಸುತ್ತಿದೆ. ರಾಗಾ ಹೆಜ್ಜೆ ಹಾಕುವ ಮಾರ್ಗದುದ್ದಕ್ಕೂ ರಾಹುಲ್ ಗಾಂಧಿ ಮತ್ತು ರಾಜ್ಯ ನಾಯಕರುಗಳ ಬೃಹತ್ ಕಟೌಟ್ ಗಳನ್ನು ನಿಲ್ಲಿಸಿದ್ದು ಇಡೀ ರಾಷ್ಟ್ರೀಯ ಹೆದ್ದಾರಿ ಕಾಂಗ್ರೆಸ್ ಮಯವಾಗಿದೆ.
ನಂಜನಗೂಡು ರಸ್ತೆ ಮತ್ತು ಬದನವಾಳು ಖಾದಿ ಕೇಂದ್ರಕ್ಕೆ ಕೈಪಡೆ ನಾಯಕರುಗಳು ಭೇಟಿಯಿತ್ತು ಭಾರತ್ ಜೋಡೋ ಯಾತ್ರೆಗಾಗಿ ಸಜ್ಜುಗೊಳ್ಳುತ್ತಿದ್ದಾರೆ. ಈ ನಡುವೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ವಾಲಿಬಾಲ್ ಆಡುತ್ತಿದ್ದ ಚಿಣ್ಣರತ್ತ ತೆರಳಿದ ಡಿಕೆಶಿ ವಾಲಿಬಾಲ್ ಆಡಿ ಖುಷಿಗೊಂಡಿದ್ದಾರೆ.
ಭಾನುವಾರ ಕೇರಳದ ಹರಿಪಾಡ್ನಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಪುನರಾರಂಭಗೊಂಡಿದ್ದು, ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್, ಕೋಡಿಕುನ್ನಿಲ್ ಸುರೇಶ್, ಕೆ ಮುರಳೀಧರನ್, ಕೆಸಿ ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.
Project Cheetah: ನಮೀಬಿಯಾದಿಂದ ಬಂದ ಚಿರತೆಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶನ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಪ್ರಧಾನಿಯವರು ಅನಗತ್ಯ ನಾಟಕವಾಡಿದ್ದಾರೆ ಎಂದಿದ್ದಾರೆ.
ನಾನು ಅವರ ತನಿಖೆಗೆ ಎಲ್ಲ ಸಹಕಾರ ನೀಡುತ್ತೇನೆ. ನನ್ನ ಜತೆ ವ್ಯಾಪಾರ, ವ್ಯವಹಾರ ಮಾಡಿದವರಿಗೆ ಕಿರುಕುಳ ನೀಡಲಾಗುತ್ತಿದ್ದು, ನಮ್ಮ ಕಾರ್ಯಕರ್ತರು ವಿಚಲಿತರಾಗಿದ್ದಾರೆ. ನಾನು ಕಾನೂನು ಬಾಹೀರವಾಗಿ ಯಾವುದೇ ಅಪರಾಧ ಮಾಡಿಲ್ಲ. ಕಾನೂನು ಇದೆ ನೋಡೋಣ ಏನಾಗುತ್ತದೆ, ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಕೈಗೊಂಡಿರುವ ಭಾರತ್ ಜೋಡೊ ಯಾತ್ರೆಗೆ ತರಕಾರಿ ವ್ಯಾಪಾರಿಯೊಬ್ಬ ದೇಣಿಗೆ ನೀಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವ್ಯಾಪಾರಸ್ಥನಿಗೆ ಬೆದರಿಕೆ ಹಾಕಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ- ಭಾರತ್ ಜೋಡೋ ಯಾತ್ರೆಯ ಫೂರ್ವಭಾವಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್
ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್ ರದ್ದು ಮಾಡುತ್ತೇವೆ ಎಂದು ಸೋನಿಯಾ, ರಾಹುಲ್ ಗಾಂಧಿ ಅವರಿಂದ ಹೇಳಿಕೆ ಕೊಡಿಸುವ ಧಮ್ ಇದೆಯೇ? ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ಸಿಗರಿಗೆ ಸವಾಲ್ ಹಾಕಿದೆ.
ರಾಜಧಾನಿ ಬೆಂಗಳೂರು ಗಾಂಜಾ ನಗರಿಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣ. ಸಿದ್ದರಾಮಯ್ಯ ಸರ್ಕಾರ ಅಕ್ರಮಗಳ ವಿರುದ್ಧ ಯಾವುದೇ ಕಾರ್ಯಾಚರಣೆ ನಡೆಸದೇ ಇದ್ದಿದ್ದರಿಂದಲೇ ಬೆಂಗಳೂರಿನ ಆರೋಗ್ಯ ಅಸ್ತವ್ಯಸ್ತವಾಗಿತ್ತು ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದೆ.
ಬೆಲೆ ಏರಿಕೆ ಬಗ್ಗೆ ಬೊಂಬಡಾ ಬಾರಿಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 14,257 ರೂ.ಗಳ ಶರ್ಟ್ ಧರಿಸಿ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
'ಚುನಾವಣೆ ನಡೆದಾಗ, ನಾನು ಕಾಂಗ್ರೆಸ್ ಅಧ್ಯಕ್ಷನಾಗುತ್ತೇನೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗುತ್ತದೆ, ಆದ್ದರಿಂದ ದಯವಿಟ್ಟು ಅಲ್ಲಿಯವರೆಗೆ ಕಾಯಿರಿ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ದ್ವೇಷ ಮತ್ತು ವಿಭಜನೆಯ ರಾಜಕಾರಣದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಅದರೆ, ನನ್ನ ಪ್ರೀತಿಯ ದೇಶವನ್ನೂ ಕಳೆದುಕೊಳ್ಳಲು ನಾನು ಇಷ್ಟಪಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.