ನಾಲ್ಕೈದು ದಿನಗಳಷ್ಟು ಹಳೆಯದಾದ ಈ ವಿಕೃತ ದೇಹಗಳು ನೆರೆಯ ರಾಜ್ಯವಾದ ಉತ್ತರ ಪ್ರದೇಶದಿಂದ ಬಿಹಾರಕ್ಕೆ ಹರಿಯುತ್ತಿವೆ ಎಂದು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಜಾ ಹೇಳಿದ್ದಾರೆ.
ಪ್ರಿನ್ಸ್ ಕುಮಾರ್ ಎಂಬ ಬಾಲಕ ಮಾರ್ಚ್ 23, 2007 ರಂದು ಮುಜಾಫರ್ಪುರದ ಗೋಸೈದಾಸ್ ತೆಂಗರಿ ಸರ್ಕಾರಿ ಶಾಲೆಯಲ್ಲಿ 8 ನೇ ತರಗತಿಯನ್ನು ಪಾಸು ಮಾಡಿದ್ದಾನೆ. ನಂತರ ಮುಂದಿನ ತರಗತಿಗೆ ಬೇರೆ ಶಾಲೆಗೆ ಹೋಗಬೇಕೆಂದು, ಶಾಲೆಯಲ್ಲಿ ಟಿಸಿ ಕೇಳಿದ್ದಾನೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ತಮ್ಮ ಸರ್ಕಾರಕ್ಕೆ 17 ಹೊಸ ಮಂತ್ರಿಗಳನ್ನು ಸೇರಿಸುವ ಮೂಲಕ ತಮ್ಮ ಸಂಪುಟವನ್ನು ವಿಸ್ತರಿಸಿದರು.ಇಂದಿನ ಕ್ಯಾಬಿನೆಟ್ ವಿಸ್ತರಣೆಯಲ್ಲಿ ಪ್ರಮಾಣವಚನ ಸ್ವೀಕರಿಸಿದವರಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಶಹನವಾಜ್ ಹುಸೇನ್ ಕೂಡ ಇದ್ದರು.
ಜೈಲಿನಲ್ಲಿರುವ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಯಾದವ್ ಅವರ ಆರೋಗ್ಯ ಕ್ಷೀಣಿಸಿದ ನಂತರ ಚಿಕಿತ್ಸೆಗಾಗಿ ಇಂದು ದೆಹಲಿಯ ಏಮ್ಸ್ ಗೆ ಕರೆದೊಯ್ಯಲು ಸಿದ್ಧತೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳ ಮೇಲೆ ಮಂತ್ರಿಗಳು, ಸಂಸದರು, ಶಾಸಕರು, ಅಧಿಕಾರಿಗಳು, ನೌಕರರು ಅಥವಾ ಇನ್ನಾವುದೇ ವ್ಯಕ್ತಿಗಳ ವಿರುದ್ಧ ಇಲ್ಲ-ಸಲ್ಲದ ಮಾತುಗಳನ್ನಾಡುವುದು ಹಾಗೂ ಟೀಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಎಐಎಂಐಎಂ (ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್) ಮುಖ್ಯಸ್ಥ ಅಸದುದ್ದೀನ್ ಒವೈಸಿ ಅವರ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರುಯುಪಿ ಮತ್ತು ಬಂಗಾಳ ಚುನಾವಣೆಗಳಲ್ಲಿ ಭಾಗವಹಿಸುವುದನ್ನು ಬಿಜೆಪಿ ರಾಜ್ಯಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ ಎಂದು ಭಾವಿಸಿದ್ದಾರೆ.
ಕೈದಿಗಳು ತಮ್ಮ ದೈನಂದಿನ ಬಳಕೆಗಾಗಿ ಹಣವನ್ನು ಹಿಂಪಡೆಯಲು ಸಹಾಯ ಮಾಡಲು ಜೈಲಿನ ಆವರಣದೊಳಗೆ ಶೀಘ್ರದಲ್ಲೇ ಎಟಿಎಂ ಸ್ಥಾಪಿಸುವುದಾಗಿ ಪೂರ್ಣಿಯಾ ಕೇಂದ್ರ ಜೈಲು ಅಧಿಕಾರಿಗಳು ಘೋಷಿಸಿದ್ದಾರೆ. ಇದರೊಂದಿಗೆ ಪೂರ್ಣಿಯಾ ಈ ಸೌಲಭ್ಯವನ್ನು ಹೊಂದಿದ ಬಿಹಾರದ ಮೊದಲ ಕೇಂದ್ರ ಜೈಲು ಆಗಲಿದೆ.
ಬಿಹಾರದಲ್ಲಿ ಭಾರತೀಯ ಜನತಾ ಪಕ್ಷದ ನಾಯಕತ್ವದ ಬದಲಾವಣೆಯ ಪಿಸುಮಾತುಗಳ ಮಧ್ಯೆ, ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಭಾನುವಾರ ತರ್ಕಿಶೋರ್ ಪ್ರಸಾದ್ ಸಿಂಗ್ ಅವರನ್ನು ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಿಸಿದರು.
ಎನ್ಡಿಎ ಮುಖ್ಯಮಂತ್ರಿ ಮುಖವಾಗಿರುವ ನಿತೀಶ್ ಕುಮಾರ್ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕರಿಸುವ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಗುರುವಾರ ಹೇಳಿದ್ದಾರೆ.ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಚಾರವಾಗಿ ಎನ್ಡಿಎ ಮೈತ್ರಿಕೂಟ ಈ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಮಹತ್ವದ ಬೆಳವಣಿಗೆಯೊಂದರಲ್ಲಿ ನಿತೀಶ್ ಕುಮಾರ್ ಅವರನ್ನು ಬಿಹಾರ ಮುಖ್ಯಮಂತ್ರಿಯಾಗಿ ನೇಮಿಸುವ ಪ್ರಶ್ನೆಯೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಬುಧವಾರ ಹೇಳಿದ್ದಾರೆ.ಮೊದಲ ಬಾರಿಗೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಅವರ ಜೆಡಿಯುಗಿಂತ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದ ಒಂದು ದಿನದ ನಂತರ ಮೋದಿ ಈ ಹೇಳಿಕೆ ನೀಡಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆಗೆ ಇದೇ ನವೆಂಬರ್ 7(ಶನಿವಾರ)ರಂದು 3ನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರ ರಾಜ್ಯದ ಜನತೆಗೆ ಬಹಿರಂಗ ಪತ್ರ ಬರೆದಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ (voting) ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಜನರು ಸರತಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಕೊವಿಡ್ ಕರಾಳ ಛಾಯೆ (COVID-19 )ಆವರಿಸಿರುವಂತೆಯೆ, ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ ನಡೆಯಲಿದೆ, 243 ವಿಧಾನ ಸಭಾ ಕ್ಷೇತ್ರಗಳ ಪೈಕಿ 71 ಕ್ಷೇತ್ರಗಳ ಮತದಾರರು 1066 ಅಭ್ಯರ್ಥಿಗಳ ಮತ ಭವಿಷ್ಯ ಬರೆಯಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.