ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೋದರ ಸಂಬಂದಿಯನ್ನು ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಸಾಮಾಜಿಕ ಜಾಲ ತಾಣದ ಮೂಲಕ ಬಿಎಸ್ವೈ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿ ಪ್ರವಾಸ ಮೊಟಕುಗೊಳಿಸಿ ನಿನ್ನೆ ರಾಜ್ಯಕ್ಕೆ ವಾಪಸ್ ಆಗಿದ್ದರಿಂದ ಶುಕ್ರವಾರ ನಡೆಯಬೇಕಿದ್ದ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿತ್ತು.
ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನ ಭೇಟಿ ಮಾಡಿದ ಸಿಎಂ ಬಿಎಸ್ವೈ ಕೆಲವೊಂದು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಮೊದಲ ಆದ್ಯತೆ ರೈತರಿಗೆ. ಇಂದು ರಾತ್ರಿ ದೆಹಲಿಗೆ ಹೋಗಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೇನೆ. ಪ್ರವಾಹ ಪರಿಹಾರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ಬಿಜೆಪಿ ಸೇರ್ಪಡೆ ಕುರಿತು ಕ್ಷೇತ್ರದ ಜನರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 6 ಸಾವಿರ ರೂಪಾಯಿ ನೆರವು ನೀಡುವ ಯೋಜನೆಯ ಮೊದಲ ಕಂತಿನ 2 ಸಾವಿರ ರೂಪಾಯಿಗಳನ್ನು 15-20 ದಿನಗಳೊಳಗೆ ರೈತರಿಗೆ ಪಾವತಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಅದನ್ನು ಸರಿದಾರಿಗೆ ತರಬೇಕು. ಮುಮ್ನ್ದಿನ ನಾಲ್ಕೈದು ತಿಂಗಳುಗಳಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡಬೇಕಿದೆ. ಇದಕ್ಕಾಗಿ ಎಲ್ಲರ ಸಹಕಾರವನ್ನು ಕೋರುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಅನರ್ಹಗೊಂಡ ಬಂಡಾಯ ಶಾಸಕರಾದ ಮುನಿರತ್ನಂ, ಬೈರತಿ ಬಸವರಾಜ್, ಎಂಟಿಬಿ ನಾಗರಾಜ್, ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರು ಬಿಗಿ ಭದ್ರತೆ ನಡುವೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.