ನಿಗಮ-ಮಂಡಳಿ ನೇಮಕಾತಿ ವಿಚಾರವಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ಹರಾಜು, ಖರೀದಿ, ಮಾರಾಟ, ಇವೆಲ್ಲವೂ ಬಿಜೆಪಿಯ ಪೇಟೆಂಟ್! ಬೇಕಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಕೇಳಿ ನೋಡಿ ಎಂದು ಟೀಕಿಸಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಸಚಿವ ಪ್ರಿಯಾಂಕ್ ಖರ್ಗೆಯವರು, ಬಿಜೆಪಿ ಮುಖಂಡರಾದ ಮಣಿಕಂಠ ರಾಠೋಡ್ರವರನ್ನು ಇನ್ನಿಲ್ಲದಂತೆ ಟಾರ್ಗೆಟ್ ಮಾಡಿ, ಕಿರುಕುಳ ನೀಡಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ತಮ್ಮ ಕಾರ್ಯಕರ್ತರಿಂದಲೇ ಛೀಮಾರಿ ಹಾಕಿಕೊಂಡ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸ್ವಪಕ್ಷದವರ ಬೆನ್ನಿಗೆ ಚೂರಿ ಹಾಕಿದ ಮಾಜಿ ಸಚಿವ ಆರ್.ಅಶೋಕ್ ಅವರನ್ನು ಅವರ ಪಕ್ಷದ ನಾಯಕರು, ಕಾರ್ಯಕರ್ತರೇ ಒಪ್ಪುತ್ತಿಲ್ಲ, ಇನ್ನು ಜನತೆ ಒಪ್ಪುವರೇ ಬಿಜೆಪಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
‘ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರ್ಕಾರ! ವಿಸ್ಮಯಗಳ ಆಗರ!!’ವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
BJP State President: ‘ಯೋಧನ ಬದುಕಿನಲ್ಲಿ ಎದುರಾಗುವ ಯಾವುದೇ ಸವಾಲು ಒಳ್ಳೆಯದು ಅಥವಾ ಕೆಟ್ಟದ್ದು ಆಗಿರಲಾರದು. ಸವಾಲು ಎಂದರೆ ಅದು ಕೇವಲ ಸವಾಲು ಅಷ್ಟೇ’ ಅಂತಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬರೆದುಕೊಂಡಿದ್ದಾರೆ.
‘ಕುಮಾರಸ್ವಾಮಿಗೆ ಹೀನಾಯ ಸೋಲಿನ ಹತಾಶೆ, ಅಧಿಕಾರ ಸಿಗದಿರುವ ಹತಾಶೆ, ಪಕ್ಷ ಖಾಲಿಯಾಗುತ್ತಿರುವ ಹತಾಶೆ ಮತ್ತು ಕಾರ್ಯಕರ್ತರ ಅಸಹಕಾರದ ಹತಾಶೆ. ಈ ಎಲ್ಲಾ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ. ವಿದ್ಯುತ್ತನ್ನೂ ಬಿಡದೆ ಕಳ್ಳತನ ಮಾಡಿದವರೊಬ್ಬರು ಸಮಾಜಕ್ಕೆ ಬುದ್ದಿ ಹೇಳುತ್ತೇನೆ ಎಂದು ಹೊರಡುವುದು ಪರಮಹಾಸ್ಯ’ವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
BJP vs BJP: ಈಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮಗ ಬಿ.ವೈ.ವಿಜಯೇಂದ್ರ ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕೂ ಕಲ್ಲು ಹಾಕುವುದು ಖಚಿತ. ಬಿಜೆಪಿ ಕಾರ್ಯಕ್ರಮದಲ್ಲಿ ನಿಮಗೊಂದು ಕುರ್ಚಿಯೂ ಇಲ್ಲ ಈಗ, ನಿಮ್ಮ ವ್ಯರ್ಥಪ್ರಲಾಪದ ಬಗ್ಗೆ ನಮಗೆ ಮರುಕವಿದೆ! ಎಂದು ಕಾಂಗ್ರೆಸ್ ಟೀಕಿಸಿದೆ.
BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡನ ಈ ನಿರ್ಧಾರಕ್ಕೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.
CM Siddaramaiah: ನಮ್ಮ ಸರ್ಕಾರವು ಬಳಕೆದಾರರ ಹಿಂದಿನ ಒಂದು ವರ್ಷದ ಸರಾಸರಿ ವಿದ್ಯುತ್ ಬಳಕೆ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅದಕ್ಕೆ ಶೇ.10 ಹೆಚ್ಚುವರಿಯಾಗಿ ಸೇರಿಸಿ ಗರಿಷ್ಟ 200 ಯುನಿಟ್ ವರೆಗೆ ಉಚಿತ್ ವಿದ್ಯುತ್ ನೀಡುತ್ತಿರುವುದರಿಂದ ನಿಮ್ಮದೇ ಸರ್ಕಾರ ದರ ಏರಿಕೆ ಮಾಡಿದ್ದರೂ ಆ ಹೊರೆ ನಾಡಿನ 1.58 ಕೋಟಿ ನೊಂದಾಯಿತ ಕುಟುಂಬಗಳನ್ನು ಬಾಧಿಸದಂತೆ ತಡೆದಿದ್ದೇವೆ ಎಂದರು.
BJP vs BJP: ಜೆಡಿಎಸ್ ಬಿಜೆಪಿಯ ಆಶ್ರಯದಲ್ಲಿದೆಯೋ, ಬಿಜೆಪಿ ಜೆಡಿಎಸ್ ಸೇರಿಗಿನ ಆಶ್ರಯ ಪಡೆದಿದೆಯೋ ಎಂಬ ಅನುಮಾನ ಬಿಜೆಪಿಗರಿಗೇ ಶುರುವಾಗಿದೆ! ವಿರೋಧ ಪಕ್ಷದ ನಾಯಕನಿಲ್ಲದೆ ಸದನದ ಒಳಗೂ ಹೊರಗೂ ಬಿಜೆಪಿ ಅಬ್ಬೇಪಾರಿಯಂತಾಗಿದೆ, ಈ ಬಗ್ಗೆ ಬಿಜೆಪಿ ಶಾಸಕರ ಗೋಳು ಮುಗಿಲು ಮುಟ್ಟಿದೆ.
ಬಿಜೆಪಿಯಲ್ಲಿ ಸಮರ್ಥ ನಾಯಕತ್ವ ಇಲ್ಲದ ಕಾರಣ, ಪಕ್ಷದ ಕೆಲವು ಮಾಜಿ ಸಚಿವರು ಹಾಗೂ ಮಾಜಿ ಶಾಕಸರು ನನ್ನೊಂದಿಗೆ ದೂರವಾಣಿ ಕರೆ ಮಾಡಿ ಪಕ್ಷ ಬಿಡುವ ಬಗ್ಗೆ ಮಾತನಾಡಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದರು.
ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು, ಕೆಲವು ಜಿಹಾದಿ ಪುಂಡರು ನಿಯಮ ಉಲ್ಲಂಘಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಕ್ರಮ ಕೈಗೊಳ್ಳಲು ಮುಂದಾದರೆ, ಹಾಡುಹಗಲೇ ಸಮವಸ್ತ್ರ ಧರಿಸಿದ ಪೊಲೀಸ್ ಮೇಲೆ ಗುಂಪು ಹಲ್ಲೆ ನಡೆಸುವಷ್ಟರ ಮಟ್ಟಿಗೆ ಜಿಹಾದಿಗಳು ಸೊಕ್ಕಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಕುಮಾರಸ್ವಾಮಿಯವರಿಗೆ ಸುಲಭದಲ್ಲಿ ಸಿಗುವ ಹೈಕಮಾಂಡ್ ಬಿಜೆಪಿ ನಾಯಕರಿಗೆ ಸಿಗದಿರುವುದೇಕೆ ? ಕರ್ನಾಟಕದಲ್ಲಿ ಸಾಂವಿಧಾನಿಕ ಹುದ್ದೆಯಾದ ವಿಪಕ್ಷ ನಾಯಕನ ಸ್ಥಾನ ಹಲವು ತಿಂಗಳುಗಳಿಂದ ಖಾಲಿಯಿರುವುದು ಬಿಜೆಪಿಗೆ ಗಂಭೀರ ವಿಷಯವಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
BJP-JDS alliance: ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ ತಿಂಗಳುಗಟ್ಟಲೇ ಕರ್ನಾಟಕದಲ್ಲಿ ಠಿಕಾಣಿ ಹೂಡಿದ್ದರೂ, ಹತ್ತಾರು ಕಿಲೋಮೀಟರ್ ರೋಡ್ ಶೋಕಿ ಮಾಡಿದರೂ ಮೋದಿ ಮುಖಕ್ಕೆ ಕನ್ನಡಿಗರು ಕಿಂಚಿತ್ ಬೆಲೆ ಕೊಡಲಿಲ್ಲ. ಮೋದಿ ಮುಖ ಎಂಬುದು ಈಗ ಚಲಾವಣೆಗೆ ಸಾಧ್ಯವಿಲ್ಲದ ಸವಕಲು ನಾಣ್ಯದಂತಾಗಿದೆ ಎಂಬ ಸತ್ಯ ಬಿಜೆಪಿಗರಿಗೆ ಅರ್ಥವಾದಂತಿದೆ! ಎಂದು ಕಾಂಗ್ರೆಸ್ ಟೀಕಿಸಿದೆ.
ಪ್ರತಿಭಟನೆಯಲ್ಲಿ ತಮಿಳುನಾಡು ಏಜೆಂಟ್ ಡಿಕೆಶಿಗೆ ಧಿಕ್ಕಾರ, ಬರಿದಾಯ್ತು ಕಾವೇರಿ ಹಾಳಾಯ್ತು ಬೆಂಗಳೂರು, ಕುಡಿಯುವ ನೀರಿಗೆ ಸಂಚಕಾರ ಮಾಡಿದ ರಾಜ್ಯ ಸರ್ಕಾರಕ್ಕೆ ಧಿಕ್ಕಾರ, ಜೀವ ನದಿ ಕಾವೇರಿಯ ನೀರು ನಮ್ಮದು ಎಂಬ ವಿವಿಧ ಘೋಷಣೆಗಳನ್ನು ಕೂಗಿ, ರಾಜ್ಯಕ್ಕೆ ದ್ರೋಹ ಬಗೆದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಎಂದು ಆಕ್ರೋಶ ಹೊರಹಾಕಿದರು.
Veerendra Patil's Wife Passes Away: ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸೋಮವಾರ ಬೆಳಗ್ಗೆ ಶಾರದಾ ಪಾಟೀಲ್ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 93 ವರ್ಷ ವಯಸ್ಸು ಆಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.