ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಿಎಸ್ವೈ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.
‘ಕರ್ನಾಟಕಕ್ಕೆ ಬರುವ ಪ್ರಧಾನಿ ಮೋದಿ, ಅಮಿತ್ ಶಾ ಅಪ್ಪಿತಪ್ಪಿಯೂ "ಬೊಮ್ಮಾಯಿ ಸರ್ಕಾರ" ಎಂದು ಸಂಬೋಧಿಸುವುದಿಲ್ಲ ಏಕೆ? ಬೊಮ್ಮಾಯಿ ಸರ್ಕಾರದ ಸಾಧನೆಗಳ ಪಟ್ಟಿ ಹೇಳುತ್ತಿಲ್ಲವೇಕೆ? ಬಿಜೆಪಿಗೆ ಬೊಮ್ಮಾಯಿ ಮುಗಿದ ಅಧ್ಯಾಯವೇ?
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಲು ಶಪಥ ಮಾಡಿದೆ, ಈ ನಡುವೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಉಪಹಾರಕ್ಕೆ ಹೋಗಿರುವ ಹಿಂದೆ ದೊಡ್ಡ ರಾಜಕೀಯ ಸಂದೇಶ ನೀಡಿದರು.
Karnataka Assembly Election: ಸಚಿವ ವಿ. ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು. ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿರುವುದರಿಂದ ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಪೋಟವಾಗಿದೆ.
ಬಿ.ಎಸ್.ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗೆ ಇಳಿಸಲು 'ಸಂಚು' ನಡೆಸಿ ಅದರಲ್ಲಿ ಎರಡೆರಡು ಬಾರಿ ಯಶಸ್ವಿಯೂ ಆಗಿದ್ದು ಬಿಜೆಪಿಯಲ್ಲಿರುವ ಇದೇ 'ಸಂತೋಷ ಕೂಟ’ವೆಂದು ಕಾಂಗ್ರೆಸ್ ಟೀಕಿಸಿದೆ.
ಜನರಿಗೆ ವಿದ್ಯುತ್, ಅಕ್ಕಿ ಉಚಿತವಾಗಿ ನೀಡುತ್ತೇನೆಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಇಷ್ಟು ದಿನ ಏನು ಮಾಡುತಿದ್ದರು? ಜನರ ಕಣ್ಣಿಗೆ ಮಣ್ಣು ಎರಚುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ವಿ.ಸೋಮಣ್ಣ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ ಎಂಬ ವಿಚಾರ. ಡಿಕೆಶಿ ಎಲ್ಲರನ್ನೂ ಕರೆದು ಮಾತನಾಡುವುದು ನಿರಂತರವಾಗಿದೆ. ಯಾರು ಸಹ ಅವರ ಮಾತಿಗೆ ಬಲಿಯಾಗುವುದಿಲ್ಲ, ಹೋಗುವುದಿಲ್ಲ ಎಂದು ಬೆಳಗಾವಿ ಜಿಲ್ಲೆಯ ಅಂಕಲಿ ಗ್ರಾಮದಲ್ಲಿ ಯಡಿಯೂರಪ್ಪ ಹೇಳಿದ್ರು.
ಗೃಹಬಳಕೆಯ ಸಿಲಿಂಡರ್ ದರ ಮತ್ತೆ 50 ರೂ. ಏರಿಕೆಯಾಗಿದೆ. ಮೋದಿಜಿಯ ಅಚ್ಛೆ ದಿನಗಳಲ್ಲಿ ಜನರು ಕಾಡುಮೇಡು ಅಲೆದು ಗೆಡ್ಡೆಗೆಣಸು ತಿಂದು ಬದುಕುವ ಹಂತಕ್ಕೆ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಎಸ್ವೈ ಬಗ್ಗೆ ಮೋದಿ ಹೊಗಳಿಕೆ ವಿಚಾರ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ. ಮೋದಿಯವರು ದೊಡ್ಡ ಕಲಾವಿದರು. ನಾವು ಕಲಾವಿದರನ್ನ ಸ್ಮರಣೆ ಮಾಡಿಕೊಳ್ತೇವೆ. ಪ್ರಧಾನಿ ಮೋದಿಯವರ ಬಗ್ಗೆ ಗೌರವವಿದೆ. ಬಿಎಸ್ವೈಗೆ ಕೊಟ್ಟ ನೋವು, ಕಣ್ಣೀರಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಬೇಕು ಎಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ರು.
ಮೋದಿ ಸಾಯಲಿ.. ಸಾಯಲಿ ಎಂದು ಕಾಯುತ್ತಿದ್ದಾರೆ. ಮೋದಿ ಯಾವಾಗ ಸಾಯುತ್ತಾನೆ ಎಂದು ನೋಡುತ್ತಿದ್ದಾರೆ. ನಾನು ಬದುಕಿದ್ರೆ ಏನು ಮಾಡೋದಕ್ಕೆ ಆಗಲ್ಲ ಅಂತಿದ್ದಾರೆ. ಆದ್ರೆ ಮೋದಿ ಇರೋವರೆಗೂ ಕಾಂಗ್ರೆಸ್ ಬೇಳೆ ಬೇಯಲ್ಲ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ರು.
ಇಂದು ರಾಜ್ಯದಲ್ಲಿ ನಮೋ ಕಹಳೆ ಮೊಳಗಲಿದೆ.. ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಬೆಳಗಾವಿ, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಮತ ʻಶಿಕಾರಿʼ ನಡೆಸಲಿದ್ದಾರೆ.. ಶಿವಮೊಗ್ಗದಲ್ಲಿ ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ..
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮ ದಿನದಂದೇ ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಮಾನ ನಿಲ್ದಾಣ ಉದ್ಘಾಟನೆ ಜೊತೆಗೆ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಇನ್ನು ಮೋದಿ ಕಾರ್ಯಕ್ರಮದ ಅಂಗವಾಗಿ ಒಂದು ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ನವ ವಧುವಿನಂತೆ ಸಿಂಗಾರಗೊಂಡಿರುವ ಶಿವಮೊಗ್ಗದಲ್ಲಿ ನಗರಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಯಸ್ಸಿನ ಕಾರಣದಿಂದ ರಾಜೀನಾಮೆ ಕೊಟ್ಟಿದ್ದಿದ್ದರೆ "ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ"ವೆಂದು ಕೊನೆಯ ದಿನದವರೆಗೂ ಹೇಳಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.