ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುವುದಿಲ್ಲ ಎಂದು ಹೇಳಿದೆ. ಆ ಕ್ಷೇತ್ರಗಳನ್ನು ಮಾಯಾವತಿ-ಅಖಿಲೇಶ್ ಯಾದವ್ ಅವರ ಮೈತ್ರಿಕೂಟಕ್ಕೆ ಬಿಟ್ಟುಕೊಡುವುದಾಗಿ ಕಾಂಗ್ರೆಸ್ ಘೋಷಿಸಿದೆ.
ಒರಿಸ್ಸಾ ವಿಧಾನಸಭೆ ಚುನಾವಣೆಯಲ್ಲಿ ಕೋರೈ ವಿಧಾನಸಭಾ ಕ್ಷೇತ್ರದಿಂದ ಕಾಜಲ್ ನಾಯಕ್ ಎನ್ನುವ ಮಂಗಳಮುಖಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ)ದಿಂದ ಕಣಕ್ಕೆ ಇಳಿಯಲಿದ್ದಾರೆ. ಬಿಎಸ್ಪಿ ಪಕ್ಷದಿಂದ ಟಿಕೆಟ್ ದೊರಕುವ ಮೊದಲು ಹಲವು ಪಕ್ಷಗಳನ್ನು ಸಂಪರ್ಕಿಸಲಾಗಿತ್ತು ಆದರೆ ಯಾವ ಪಕ್ಷಗಳು ತಮಗೆ ಸೂಕ್ತ ಬೆಂಬಲ ನೀಡಲಿಲ್ಲ ಎಂದು ಹೇಳಿದರು.
ಸಹರಾನ್ಪುರದ ದೇವಬಂದ್ನಲ್ಲಿ ನಡೆಯಲಿರುವ ಮೈತ್ರಿ ಪಕ್ಷಗಳ ಮೊದಲ ರ್ಯಾಲಿಯಲ್ಲಿ ಬಿಎಸ್ಪಿ ನಾಯಕಿ ಮಾಯಾವತಿ, ಎಸ್ಪಿ ನಾಯಕ ಅಖಿಲೇಶ್ ಯಾದವ್ ಮತ್ತು ಆರ್ ಎಲ್ ಡಿ ನಾಯಕ ಅಜಿತ್ ಸಿಂಗ್ ರ್ಯಾಲಿಯ ನೇತೃತ್ವ ವಹಿಸಲಿದ್ದಾರೆ.
ಉತ್ತರಪ್ರದೇಶದಲ್ಲಿರುವ 80 ಲೋಕಸಭಾ ಸ್ಥಾನಗಳಲ್ಲಿ ಸಮಾಜವಾದಿ ಪಕ್ಷ 37 ಮತ್ತು ಬಹುಜನ ಸಮಾಜ ಪಕ್ಷ 38 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಎರಡೂ ಪಕ್ಷಗಳು ಒಮ್ಮತದ ನಿರ್ಧಾರ ಪ್ರಕಟಿಸಿವೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದ್ದರೆ, ಮತ್ತೊಂದೆಡೆ ಇತರ ರಾಜಕೀಯ ಪಕ್ಷಗಳು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿವೆ.
ಬಹುಜನ ಸಮಾಜ ಪಕ್ಷದ ಶಾಸಕಿ ರಮಾಬಾಯಿ ಸಿಂಗ್ ತಾನು ಎಲ್ಲ ಸಚಿವರ ಬಾಪ್ ಎಂದು ಹೇಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ತನಗೆ ಮತ್ತು ಇತರ ಬಿಎಸ್ಪಿ ಶಾಸಕರಿಗೆ ಮಂತ್ರಿಗಿರಿ ನೀಡದೆ ಹೋದಲ್ಲಿ ಕರ್ನಾಟಕದ ರೀತಿಯ ರಾಜಕೀಯ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದೆ. ಚುನಾವಣೆ ಬಗ್ಗೆ ಹಲವರು ಮಾತನಾಡುತ್ತಿದ್ದರು ಸಹಿತ ಬಹುತೇಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಕುರಿತು ಪ್ರಶ್ನೆಗಳನ್ನು ಕೇಳಿದಾಗ ಉತ್ತರಿಸಲು ತಡವರಿಸುತ್ತಾರೆ.ಇತ್ತೀಚಿಗೆ ತೆಲಂಗಾಣದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಐಎಂಐಎಂ ಪಕ್ಷದ ವಿಸ್ತೃತರೂಪ ಬಹುತೇಕರಿಗೆ ತಿಳಿದಿರಲಿಲ್ಲ.ಈ ಹಿನ್ನಲೆಯಲ್ಲಿ ಈಗ ನಾವು ಭಾರತದಲ್ಲಿರುವ ವಿವಿಧ ಪಕ್ಷಗಳ ಪ್ರಕಾರಗಳನ್ನು ನಾವು ತಿಳಿಯಬೇಕಾಗಿದೆ.
ಲೋಕಸಭಾ ಚುನಾವಣೆಗೂ ಮುನ್ನ ಮೈತ್ರಿ ಘೋಷಣೆ ಮಾಡಿಕೊಂಡಿರುವ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಈ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿವೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಸ್ಪರ್ಧೆಯನ್ನು ನೀಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳ ನಿರ್ಧಾರವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಸ್ವಾಗತಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಲೋಕಸಭೆ ಚುನಾವಣೆಯಲ್ಲಿ ತಲಾ 38 ಸ್ಥಾನಗಳಲ್ಲಿ ಮೈತ್ರಿ ಮಾಡಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ. ಆದರೆ ಈ ಮೈತ್ರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎರಡು ಪಕ್ಷಗಳು ಹೊರಗಿಟ್ಟಿವೆ.ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರಗಳನ್ನು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ.ಇನ್ನುಳಿದ ಎರಡು ಸ್ಥಾನಗಳನ್ನು ಮೈತ್ರಿ ಪಕ್ಷಕ್ಕೆ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.