ಇಂದು ರಾಜ್ಯದಲ್ಲಿ ನಮೋ ಕಹಳೆ ಮೊಳಗಲಿದೆ.. ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಬೆಳಗಾವಿ, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಮತ ʻಶಿಕಾರಿʼ ನಡೆಸಲಿದ್ದಾರೆ.. ಶಿವಮೊಗ್ಗದಲ್ಲಿ ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ..
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮ ದಿನದಂದೇ ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಮಾನ ನಿಲ್ದಾಣ ಉದ್ಘಾಟನೆ ಜೊತೆಗೆ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಇನ್ನು ಮೋದಿ ಕಾರ್ಯಕ್ರಮದ ಅಂಗವಾಗಿ ಒಂದು ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ನವ ವಧುವಿನಂತೆ ಸಿಂಗಾರಗೊಂಡಿರುವ ಶಿವಮೊಗ್ಗದಲ್ಲಿ ನಗರಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ವಿಧಾಸಭೆಯಲ್ಲಿ ವಿರೋಧ ಪಕ್ಷಗಳಿಗೆ ಯಡಿಯೂರಪ್ಪ ಸವಾಲು ಹಾಕಿದ್ರು. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಅಂತ ಸದನದಲ್ಲಿ ಗುಡುಗಿದ್ರು. ಇನ್ಮುಂದೆ ಚುನಾವಣೆಗೆ ನಿಲ್ಲಲ್ಲ ಅಂತ ಬಿಎಸ್ವೈ ಘೋಷಣೆ ಮಾಡಿದ್ರು.
ಕಾಂಗ್ರೆಸ್ ಕುರಿತು ಶಾಸಕ ಸಿ.ಟಿ.ರವಿಯವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿ, ಯಾವ ಪಕ್ಷದವರು ಯಾವ ಸಂಸ್ಕೃತಿ ಎಂದು ಜನರಿಗೆ ತಿಳಿದಿದೆ.ರಾಜ್ಯ ಭಾಜಪ ಪಕ್ಷದ್ದು ನರೇಂದ್ರ ಮೋದಿ ಸಂಸ್ಕೃತಿ. ಭಾರತವನ್ನು ಸಶಕ್ತ, ಸಮೃದ್ಧವಾಗಿ ಕಟ್ಟುವ ಕಾಲ ಸ್ವಾತಂತ್ರ್ಯಾ ನಂತರ 75 ವರ್ಷಗಳ ನಂತರ ಅವಕಾಶ ದೊರಕಿದೆ ಎಂದರು.
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸರ್ಕಾರ ಹಲವಾರು ಯೋಜನೆಗಳ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡುವ ಪ್ಲಾನ್ ಮಾಡಿದೆ. ಅದೇ ರೀತಿ ಶಿವಮೊಗ್ಗದ ಹೊಸ ಏರ್ಪೋರ್ಟ್ ಕಾಮಗಾರಿ ಭರದಿಂದ ಸಾಗಿದೆ. ಇದೇ ಫೆಬ್ರವರಿ 27 ರಂದು ಖುದ್ದು ಪ್ರಧಾನಿ ಇದಕ್ಕೆ ಚಾಲನೆ ನೀಡಲಿದ್ದಾರೆ. ಈ ವಿಮಾನ ನಿಲ್ದಾಣಕ್ಕೆ ಬಿಎಸ್ವೈ ಅವರ ಹೆಸರಿಡಲು ಸರ್ಕಾರ ಪಸ್ತಾವನೆ ಸಲ್ಲಿಸಲಿದೆ ಅಂತ ಬೊಮ್ಮಾಯಿ ಹೇಳಿದ್ದಾರೆ...
ನಮ್ಮ ಯಾತ್ರೆಯನ್ನ BSY ಪಂಚರ್ ಆಯ್ತು ಅಂತ ಹೇಳಿದ್ದಾರೆ. ಇನ್ನು ಸ್ವಲ್ಪ ದಿನದಲ್ಲಿ ಯಾರದಾಗುತ್ತೋ ಗೊತ್ತಾಗುತ್ತೆ ಎಂದು ಯಡಿಯೂರಪ್ಪ ಹೇಳಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ರು.
ಬಾಂಬ್ ಸ್ಪೋಟದ ವಿಷಯವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ತಿದ್ದಾರೆ ಅಂತ ನಾನು ಹೇಳಿದ್ದೇನೆ. ಇಂತ ರಾಜಕಾರಣದಿಂದ ಎಲ್ಲರಿಗೂ ದ್ರೋಹ ಬಗೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಗೌರವ ನಾವೇ ಹಾಳು ಮಾಡಿಕೊಳ್ತಿದ್ದೀವಿ ಅನ್ನುವ ಅಭಿಪ್ರಾಯದಲ್ಲಿ ನಾನು ಹೇಳಿಕೆ ಕೊಟ್ಟಿದ್ದೇನೆ ಎಂದರು.
Hiriyuru MLA Poornima Srinivas : ಪೂರ್ಣಿಮಾ ಶ್ರೀನಿವಾಸ್ ಚಿತ್ರದುರ್ಗ ಜಿಲ್ಲೆಯ ಏಕೈಕ ಮಹಿಳಾ ಶಾಸಕಿಯಾಗಿದ್ದಾರೆ. ಪೂರ್ಣಿಮಾ ಶ್ರೀನಿವಾಸ್ ಹಿರಿಯೂರು ಕ್ಷೇತ್ರದ ಇದೀಗ ಶಾಸಕಿಯಾಗಿದ್ದಾರೆ.
ವಿಧಾನಸಭೆ ಅವಧಿ ಮುಕ್ತಾಯಕ್ಕೆ 6 ತಿಂಗಳು ಬಾಕಿ ಇದೆ. ಅದಾಗಲೇ ಬಿಜೆಪಿ ಚುನಾವಣಾ ಸಿದ್ಧತೆಗೆ ಮುಂದಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ರಣ ಕಹಳೆ ಮೊಳಗಿಸಿದೆ. ಬಿಜೆಪಿ ಆಯೋಜಿಸಿದ್ದ ಜನ ಸಂಕಲ್ಪ ಯಾತ್ರೆ ಮೂಲಕ ಹಾಲಿ ಮತ್ತು ಮಾಜಿ ಸಿಎಂ ಇಬ್ಬರೂ ಚುನಾವಣೆಗೆ ಸಿದ್ಧರಾಗಿ ಅಂತಾ ಕಾರ್ಯಕರ್ತರನ್ನು ಹುರಿದುಂಬಿಸಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.