ತಮ್ಮ ಕಾರ್ಯಕರ್ತರಿಂದಲೇ ಛೀಮಾರಿ ಹಾಕಿಕೊಂಡ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸ್ವಪಕ್ಷದವರ ಬೆನ್ನಿಗೆ ಚೂರಿ ಹಾಕಿದ ಮಾಜಿ ಸಚಿವ ಆರ್.ಅಶೋಕ್ ಅವರನ್ನು ಅವರ ಪಕ್ಷದ ನಾಯಕರು, ಕಾರ್ಯಕರ್ತರೇ ಒಪ್ಪುತ್ತಿಲ್ಲ, ಇನ್ನು ಜನತೆ ಒಪ್ಪುವರೇ ಬಿಜೆಪಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
‘ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರ್ಕಾರ! ವಿಸ್ಮಯಗಳ ಆಗರ!!’ವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
BJP State President: ‘ಯೋಧನ ಬದುಕಿನಲ್ಲಿ ಎದುರಾಗುವ ಯಾವುದೇ ಸವಾಲು ಒಳ್ಳೆಯದು ಅಥವಾ ಕೆಟ್ಟದ್ದು ಆಗಿರಲಾರದು. ಸವಾಲು ಎಂದರೆ ಅದು ಕೇವಲ ಸವಾಲು ಅಷ್ಟೇ’ ಅಂತಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬರೆದುಕೊಂಡಿದ್ದಾರೆ.
‘ಕುಮಾರಸ್ವಾಮಿಗೆ ಹೀನಾಯ ಸೋಲಿನ ಹತಾಶೆ, ಅಧಿಕಾರ ಸಿಗದಿರುವ ಹತಾಶೆ, ಪಕ್ಷ ಖಾಲಿಯಾಗುತ್ತಿರುವ ಹತಾಶೆ ಮತ್ತು ಕಾರ್ಯಕರ್ತರ ಅಸಹಕಾರದ ಹತಾಶೆ. ಈ ಎಲ್ಲಾ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ. ವಿದ್ಯುತ್ತನ್ನೂ ಬಿಡದೆ ಕಳ್ಳತನ ಮಾಡಿದವರೊಬ್ಬರು ಸಮಾಜಕ್ಕೆ ಬುದ್ದಿ ಹೇಳುತ್ತೇನೆ ಎಂದು ಹೊರಡುವುದು ಪರಮಹಾಸ್ಯ’ವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಇಂದು 11ನೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ
ಬೆಳಗ್ಗೆ 9:30ಕ್ಕೆ ಬಿಜೆಪಿ ಕಚೇರಿಗೆ ಆಗಮಿಸಲಿರುವ ಬಿ.ವೈ ವಿಜಯೇಂದ್ರ
10 ಗಂಟೆಗೆ ಪೂರ್ಣಾಹುತಿ ಹೋಮದಲ್ಲಿ ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ಭಾಗಿ
ಬಳಿಕ 10:30ಕ್ಕೆ ಕಟೀಲ್ ಅವರಿಂದ ಅಧಿಕಾರ ಹಸ್ತಾಂತರ
ಬಳಿಕ 11:30 ಕ್ಕೆ ಸುದ್ದಿ ಗೋಷ್ಠಿ ನಡೆಸಲಿರುವ ಬಿಜೆಪಿ ನೂತನ ರಾಜ್ಯಾಧ್ಯಕ್ಷ
ಸುದ್ದಿಗೋಷ್ಠಿ ನಂತರ ಶಾಸಕರು, ಹಿರಿಯ ನಾಯಕರ ಜೊತೆ ಕೆಲ ಕಾಲ ವಿಜಯೇಂದ್ರ ಮಾತುಕತೆ
ಪುರಾಣ ಪ್ರಸಿದ್ದಿ ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಕೆ... ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ... ನಾಳೆ ಪದಗ್ರಹಣ ಹಿನ್ನೆಲೆ ಇಂದು ಕುರುಡುಮಲೆ ವಿನಾಯಕನಿಗೆ ಪೂಜೆ
BY Vijayendra Visit to Siddaganga Mutt: ಶಿವಕುಮಾರಸ್ವಾಮಿಗಳ ಗದ್ದುಗೆಗೆ ನಮಿಸಿದ ವಿಜಯೇಂದ್ರ ನಂತರ ಶಿವಕುಮಾರ ಶ್ರೀಗಳ ಧ್ಯಾನಮಂದಿರಕ್ಕೆ ಭೇಟಿ ನೀಡಿದರು. ಶ್ರೀಗಳ ಧ್ಯಾನ ಮಂದಿರಕ್ಕೆ ನಮಿಸಿ 2 ನಿಮಿಷಗಳ ಕಾಲ ಧ್ಯಾನ ಮಾಡಿದರು.
BY Vijayendra : ಯಡಿಯೂರಪ್ಪನವರ ಮಗನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡುವ ಮೂಲಕ ಬಿಜೆಪಿ ಲೀಡರ್ ಲೆಸ್ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ಪಕ್ಷದಲ್ಲಿ ದುಡಿದವರು ಹಲವರಿದ್ದರೂ "ಎಳೆ ಹುಡುಗ"ನಿಗೆ ಪಟ್ಟ ಕಟ್ಟಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕೆ ಮಾಡಿದೆ.
BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡನ ಈ ನಿರ್ಧಾರಕ್ಕೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.
BY Vijayendra : ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡೊ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗ್ತೇನೆ ಎಂದು ನೂತನ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
BY Vijayendra : ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ರಾಜಕಾರಣದಿಂದ ದೂರ ಉಳಿದಿದ್ದರೂ ಸಹ ಬಿಎಸ್ ಯಡಿಯೂರಪ್ಪ ತಮ್ಮ ಪುತ್ರನನ್ನು ರಾಜ್ಯ ಕಮಲ ಪಾಳಯದ ಸಾರಥಿಯನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇಷ್ಟು ದಿನ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ಹೈಕಮಾಂಡ್ ಸಾರಥಿಯನ್ನು ನೇಮಕ ಮಾಡಿದೆ. ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ನನಗೆ ಯಾವುದೇ ಭಯ ಇಲ್ಲ, ನಾನು ನಿರ್ಭಯವಾಗಿ ಮಾತಾಡ್ತೀನಿ. ಇವರಿಗೆ ಒಂದು ಗ್ರಾಮಪಂಚಾಯ್ತಿ ನಿಂತು ಗೆಲ್ಲೋಕೆ ಆಗಲ್ಲ ಎಂದು ವಾಗ್ದಾಳಿ ನಡೆಸಿದರು. ಆ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿ, ಅವರ ಹೆಸರು ಇವಾಗ ನಾನು ಹೇಳಲ್ಲ, ಸಮಯ ಬಂದಾಗ ಅವರ ಹೆಸರು ಹೇಳ್ತೀನಿ, ಎಂದು ತಮ್ಮ ಮಾತಿನಿಂದ ಜಾರಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.