ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ವಿಚಾರ ನಡೀತಿರೋ ಪೈಪೋಟಿ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕೊಪ್ಪಳದ ಗವಿಮಠದಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ನ ಕಿತ್ತಾಟ ಬಿಜೆಪಿಗೆ ಒಳ್ಳೆಯದೇ. ಈ ಕಿತ್ತಾಟದ ಲಾಭ ಮಾಡಿಕೊಳ್ಳಲು ಬಿಜೆಪಿ ಇಷ್ಟ ಪಡುವುದಿಲ್ಲ. ನಾವು ಪಕ್ಷದ ಸಿದ್ಧಾಂತ, ಅಭಿವೃದ್ಧಿ ಮೂಲಕ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.
PSI ಅಕ್ರಮ ನೇಮಕಾತಿ ಹಗರಣದಲ್ಲಿ ಅಶೋಕ್, ಆರಗ ಜ್ಞಾನೇಂದ್ರ, ವಿಜಯೇಂದ್ರ ಹೆಸರು ಕೇಳಿ ಬರ್ತಿದೆ. ಹೀಗಾಗಿ ನ್ಯಾಯಾಂಗ ತನಿಖೆಯಾಗಲಿ ಎಂದು ನಾನು ಹೇಳಿದ್ದೇನೆ. ನನಗೆ ಇರೋ ಮಾಹಿತಿ ಮೇಲೆ ಕೇಳಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ..
ಕಾಂಗ್ರೆಸ್ ತಿರುಕನ ಕನಸು ಕಾಣ್ತಿದೆ ಎಂಬ ಯಡಿಯೂರಪ್ಪ ಹೇಳಿಕೆ ಅಂತರಾಳದಿಂದ ಹೇಳೋ ಮಾತಲ್ಲ ಅದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರನ್ನು ಸಿಎಂ ಸ್ಥಾನದಿಂದ ತೆಗೆದಿದ್ದಾರೆ. ಆ ಬಗ್ಗೆ ಅವರಿಗೆ ನೋವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ..
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತಾ ಅದರ ಅರ್ಥ ಎಂದು ಕಾಂಗ್ರೆಸ್ ತಿರುಕನ ಕನಸು ಕಾಣ್ತಿದೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸಾಧನೆಯ ಬಲದಿಂದ ಬಹುಮತ ಗಳಿಸಿ ಅಧಿಕಾರಕ್ಕೆ ಬರುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ನಿಮ್ಮದೇನಿದ್ದರೂ ‘ಆಪರೇಷನ್ ಕಮಲ’ದ ಹೊಲಸು ದಂಧೆ ಎಂದು ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಖಚಿತ. ಆದ್ರೆ ಕ್ಷೇತ್ರ ನಿರ್ಧಾರವಾಗಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ 140 ಕ್ಷೇತ್ರಗಳನ್ನು ಗೆದ್ದು, ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬುದು ನಮ್ಮ ದೃಷ್ಟಿ. ಆ ದೃಷ್ಟಿಯಿಂದ ರಾಜ್ಯಪ್ರವಾಸ ಪ್ರಾರಂಭವಾಗಿದೆ ಎಂದು ಬಿಎಸ್ವೈ ಹೇಳಿದ್ದಾರೆ.
ಬಿ.ವೈ.ವಿಜಯೇಂದ್ರನಿಗೆ ಪರಿಷತ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಬಾರದು ಎಂದು ಮನವಿ ಮಾಡಿದ್ದಾರೆ. ಪಕ್ಷ ಗುರುತಿಸಿದವರಿಗೆ ಟಿಕೆಟ್ ನೀಡಿದೆ, ನಾವು ಪಕ್ಷದ ಸಿಪಾಯಿಗಳು.
Karnataka MLC polls: ವಿಧಾನ ಪರಿಷತ್ ಚುನಾವಣೆಗೆ ಇಂದು ನಾಮಿನೇಶನ್ ಮಾಡಲು ಕೊನೆಯ ದಿನ. ಈ ನಡುವೆ ಇಂದು ಎಲ್ಲ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ. ಆದ್ರೆ ಬಿಜೆಪಿಯಲ್ಲಿ ಮುಂಚೂಣಿಯಲ್ಲಿ ಬಿವೈ ವಿಜಯೇಂದ್ರಗೆ ಟಿಕೆಟ್ ಮಿಸ್ ಆಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಬಿ ವೈ ವಿಜಯೇಂದ್ರಗೆ ವಿಧಾನ ಪರಿಷತ್ ಟಿಕೆಟ್ ಸಿಗುತ್ತದೋ ಇಲ್ವೋ ಗೊತ್ತಿಲ್ಲ.. ಬಟ್... ಸಚಿವ ಹಾಲಪ್ಪ ಆಚಾರ ಬಿಎಸ್ವೈ ಪರ ಬ್ಯಾಟ್ ಬೀಸಿದ್ದಾರೆ.. ಬನ್ನಿ ಏನ್ ಹೇಳಿದ್ದಾರೆ ಅಂತ ಕೇಳೋಣ.
ರಾಜ್ಯ ಉಪಾಧ್ಯಕ್ಷನಾಗಿ ಕೆಲಸ ಮಾಡ್ತಿದ್ದೀನಿ. ವಿಜಯೇಂದ್ರಗೆ ಏನು ಸ್ಥಾನಮಾನ ಕೊಡಬೇಕಿತ್ತೋ ಅದನ್ನ ಪಕ್ಷ ಕೊಟ್ಟಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.. ವಿಜಯೇಂದ್ರ ಅವರನ್ನು ಮಂತ್ರಿ ಮಾಡಬೇಕು ಅಂತಾ ನನ್ನ ಕಡೆಯಿಂದಾಗಲಿ, ಯಡಿಯೂರಪ್ಪ ಕಡೆಯಿದಾಗಲಿ ಒತ್ತಡ ಹಾಕಿಲ್ಲ. ಆ ಪ್ರಶ್ನೆ ಉದ್ಬವಿಸಿಲ್ಲ ಎಂದಿದ್ದಾರೆ.
ಯತ್ನಾಳ್ ಹಿರಿಯ ನಾಯಕರಿದ್ದಾರೆ. ಅವರ ಹೇಳಿಕೆಗೆ ಯಾರು ಒತ್ತಡ ಹಾಕಿದ್ರು ಅಂತಾ ಅವರೇ ಹೇಳಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.. ಕೇಂದ್ರದ ನಾಯಕರು, ಮುಖ್ಯಮಂತ್ರಿಗಳು, ರಾಜ್ಯದ ಅಧ್ಯಕ್ಷರು ಎಲ್ಲರೂ ಕೂಡಾ ಗಮನಿಸಿದ್ದಾರೆ. ಅವರ ಹೇಳಿಕೆ ಬಗ್ಗೆ ಅವರು ನಿರ್ಧಾರ ಮಾಡ್ತಾರೆ ಅಂತಾ ಹೇಳಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.