CAA Notification Update: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆಯಾಜ್ಞೆ (Citizenship Amendment Act 2019) ನೀಡಲು ಸುಪ್ರೀಂ ತಿರಸ್ಕರಿಸಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೆ ಭಾರಿ ನೆಮ್ಮದಿ ಸಿಕ್ಕಂತಾಗಿದೆ. ಈ ಕುರಿತಾಗಿ ಬಂದ 236 ಅರ್ಜಿಗಳ ಪೈಕಿ ನಾವು ಎಷ್ಟು ಪ್ರಕರಣಗಳಲ್ಲಿ ನೋಟಿಸ್ ನೀಡಿದ್ದೇವೆ ಎಂದು ಪ್ರಶ್ನಿಸಿದ ಸುಪ್ರೀಂ ಉಳಿದ ಅರ್ಜಿಗಳಿಗೂ ಕೂಡ ನೋಟಿಸ್ ಜಾರಿ ಮಾಡಿ ದಿನಾಂಕ ನೀಡುತ್ತೇವೆ ಎಂದಿದೆ. ಇದರ ಜೊತೆಗೆ ಅಧಿಸೂಚನೆ ಜಾರಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಕಾಲಾವಕಾಶ ಕೋರಿದ್ದು, ಅವರಿಗೆ ಕಾಲಾವಕಾಶ ನೀಡಲಾಗುವುದು ಎಂದು ಪೀಠ ಹೇಳಿದೆ. (National News In Kannada)
Citizenship (Amendment) Act: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಇದೊಂದು ಎಲೆಕ್ಷನ್ ಗಿಮಿಕ್ ಎಂದು ಬಣ್ಣಿಸಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿ ಸಿಎಎ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Amith Shah talk on CAA: ಕೊರೊನಾ ಸಾಂಕ್ರಾಮಿಕದಿಂದಾಗಿ ಪೌರತ್ವ ತಿದ್ದುಪಡಿ ಕಾಯ್ದೆ ವಿಳಂಬವಾಗಿದೆ. ತುಳಿತಕ್ಕೊಳಗಾದ ನಾಗರಿಕರಿಗೆ ಪೌರತ್ವದ ಹಕ್ಕಿದೆ. ಅಸಾದುದ್ದೀನ್ ಓವೈಸಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಅಥವಾ ಕೇಜ್ರಿವಾಲ್ ಆಗಿರಲಿ ಎಲ್ಲ ವಿರೋಧ ಪಕ್ಷಗಳೂ ಸುಳ್ಳಿನ ರಾಜಕಾರಣ ಮಾಡುತ್ತಿವೆ. ಆದ್ದರಿಂದ ಸಮಯವು ಮುಖ್ಯವಲ್ಲ” ಎಂದಿದ್ದಾರೆ.
Citizenship Amendment Act: ''ಇಂಡಿಯಾ ಮೈತ್ರಿಕೂಟ'' ಅಧಿಕಾರಕ್ಕೆ ಬರುವುದಿಲ್ಲ. ಇದು ಅವರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ CAAಯನ್ನು ರದ್ದುಪಡಿಸುವುದು ಅಸಾಧ್ಯ. ಇದು ಸಂಪೂರ್ಣ ಸಾಂವಿಧಾನಿಕವಾಗಿದೆ. ಸುಪ್ರೀಂಕೋರ್ಟ್ ಸಹ ಈ ಕಾನೂನು ಜಾರಿಗೆ ತಡೆ ನೀಡಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Actor Vijay : ಕೇಂದ್ರದ ಸಿಎಎ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿರುವ ಸೂಪರ್ ಸ್ಟಾರ್ ನಟ ವಿಜಯ್, ಈ ಕಾಯ್ದೆಯನ್ನು ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
Citizenship Amendment Act Full Details: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಕುರಿತು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಾಲ್ಕು ವರ್ಷಗಳ ಹಿಂದೆ ಸಂಸತ್ತು ಅಂಗೀಕರಿಸಿದ ಈ ಮಸೂದೆಯನ್ನು ಕೇಂದ್ರವು ಇತ್ತೀಚೆಗೆ ತಂದಿತು. ಏನಿದು ಸಿಎಎ..? ಈ ಕಾನೂನು ಜಾರಿಯಿಂದ ಯಾರಿಗೆ ತೊಂದರೆಯಾಗುತ್ತದೆ? ಈ ಎಲ್ಲಾದರ ಮಾಹಿತಿ ಇಲ್ಲಿ ತಿಳಿಯಿರಿ..
Danish Kaneria supports CAA: “ಇನ್ಮುಂದೆ ಪಾಕಿಸ್ತಾನಿ ಹಿಂದೂಗಳು ಮುಕ್ತವಾಗಿ ಉಸಿರಾಡಬಹುದು” ಎಂದು ಕನೇರಿಯಾ ಎಕ್ಸ್ ಟ್ವೀಟ್ ಮಾಡಿದ್ದು, ಸಿಎಎ ಜಾರಿಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿದರು.
CAA: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹಿಂದೂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ನಿರಾಶ್ರಿತರು CAA 2019 ರ ಅಡಿಯಲ್ಲಿ ಪೌರತ್ವಕ್ಕಾಗಿ ಹೇಗೆ ಸಲ್ಲಿಸಬೇಕು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ...
Citizenship Amendment Act 2024: ಸಿಟಿಜನ್ ಶಿಪ್ ಅಮೆಂಡ್ಮೆಂಟ್ ಆಕ್ಟ್ ಅಂದರೆ ನಾಗರಿಕ ತಿದ್ದುಪಡಿ ಮಸೂದೆಗೆ (CAA) ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಕೇಂದ್ರ ಗೃಹ ಸಚಿವಾಲಯವು (Union Home Ministry) ಸಿಎಎ ಕುರಿತಾದ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದೆ. ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದಾಗ ಸಾಕಷ್ಟು ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. (National News In Kannada)
Implementation of Citizenship Amendment Act: ಪೌರತ್ವ (ತಿದ್ದುಪಡಿ) ಕಾಯಿದೆ 2019 ಎಂಬುದು, ಭಾರತದ ಮೂರು ನೆರೆಯ ರಾಷ್ಟ್ರಗಳಿಂದ ಧಾರ್ಮಿಕ ಆಧಾರದ ಮೇಲೆ ಕಿರುಕುಳಕ್ಕೊಳಗಾದ ನಂತರ ಭಾರತಕ್ಕೆ ಬಂದ ನಿರಾಶ್ರಿತರಿಗೆ ಮತ್ತು 31 ಡಿಸೆಂಬರ್ 2014 ಕ್ಕಿಂತ ಮೊದಲು ಭಾರತದಲ್ಲಿ ಆಶ್ರಯ ಪಡೆದ ನಿರಾಶ್ರಿತರಿಗೆ ಭಾರತೀಯ ಪೌರತ್ವದ ಹಕ್ಕನ್ನು ನೀಡುವ ಕಾನೂನಾಗಿದೆ.
CAA Implementation Date: ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2019 ರಲ್ಲಿ ಮಾಡಲಾಗಿದೆ. ಆದರೆ ದೇಶದಲ್ಲಿ ಇದುವರೆಗೆ ಜಾರಿಯಾಗಿಲ್ಲ. ಪೌರತ್ವ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾದ ನಂತರ ಅದರ ವಿರುದ್ಧ ಪ್ರತಿಭಟನೆಗಳು ಪ್ರಾರಂಭವಾಗಿದ್ದವು.
Asaduddin Owaisi: ಪೌರತ್ವ ತಿದ್ದುಪಡಿ ಕಾಯ್ದೆ ಅಂದರೆ ಸಿಎಎಗೆ ಸಂಬಂಧಿಸಿದಂತೆ ದೇಶದಲ್ಲಿ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಸಿಎಎ ವಿಚಾರದಲ್ಲಿ ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ಕೇಂದ್ರ ಸರ್ಕಾರದ ಮೇಲೆ ಕೆಂಡಕಾರಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಹಿಂತೆಗೆದುಕೊಳ್ಳುವಂತೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ ಮತ್ತು ಅದನ್ನು ರದ್ದುಗೊಳಿಸದಿದ್ದರೆ ಪ್ರತಿಭಟನಾಕಾರರು "ಉತ್ತರ ಪ್ರದೇಶದಲ್ಲಿ ಬೀದಿಗಿಳಿದು ಮತ್ತೊಂದು ಶಾಹೀನ್ ಬಾಗ್ ಮಾಡುತ್ತಾರೆ" ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯಿಂದ ಯಾವುದೇ ಮುಸ್ಲಿಂರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕೆ ಸೇರಿದ ಮತ್ತು ಗುಜರಾತ್, ರಾಜಸ್ಥಾನ, ಛತ್ತೀಸ್ಗಡ್, ಹರಿಯಾಣ ಮತ್ತು ಪಂಜಾಬ್ನ 13 ಜಿಲ್ಲೆಗಳಲ್ಲಿ ನೆಲೆಸಿರುವ ಹಿಂದೂ, ಸಿಖ್, ಜೈನ ಮತ್ತು ಬೌದ್ಧರಂತಹ ಮುಸ್ಲಿಮೇತರರನ್ನು ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಕೇಂದ್ರವು ಶುಕ್ರವಾರದಂದು ಆಹ್ವಾನಿಸಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ (ಮಾರ್ಚ್ 19) ಅಸ್ಸಾಂನಲ್ಲಿ ತಮ್ಮ ಪಕ್ಷಕ್ಕೆ ಅಧಿಕಾರಕ್ಕೆ ಬಂದರೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾಗದಂತೆ ನೋಡಿಕೊಳ್ಳುವುದಾಗಿ ಘೋಷಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.