BJP : 2024ರ ಲೋಕಸಭೆ ಚುನಾವಣೆಗೆ ಇನ್ನೂ ಒಂದರಿಂದ ಒಂದೂವರೆ ವರ್ಷ ಬಾಕಿ ಇದೆ, ಆದರೆ ಭಾರತೀಯ ಜನತಾ ಪಕ್ಷ ತನ್ನ ತಯಾರಿಯನ್ನು ಆರಂಭಿಸಿದೆ. ಕಾಂಗ್ರೆಸ್ನ ಮಾಜಿ ದೊಡ್ಡ ನಾಯಕರಿಗೆ ಬಿಜೆಪಿ ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ.
ಪಂಜಾಬ್ ಲೋಕ ಕಾಂಗ್ರೆಸ್ ವರಿಷ್ಠ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭಾನುವಾರದಂದು ನವಜೋತ್ ಸಿಂಗ್ ಸಿಧು ಮತ್ತು ಚರಣ್ಜಿತ್ ಸಿಂಗ್ ಚನ್ನಿ ವಿರುದ್ಧ ವಾಗ್ದಾಳಿ ನಡೆಸಿ ಅವರಿಬ್ಬರೂ ನಿಷ್ಪ್ರಯೋಜಕರಾಗಿದ್ದಾರೆ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ನಿಂದ ಕಾಂಗ್ರೆಸ್ ಪಕ್ಷವು ನಿರ್ನಾಮವಾಗಲಿದೆ ಎಂದು ಹೇಳಿದರು.
Punjab Politics Latest Update: ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಭಾರೀ ಹಿನ್ನಡೆ ಅನುಭವಿಸಿದೆ. ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಂಜಾಬ್ ಕಾಂಗ್ರೆಸ್ ತನ್ನ ಮುಂದಿನ ಮುಖ್ಯಮಂತ್ರಿಯಾಗಿ ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ತರಬೇತಿಯ ಮಂತ್ರಿಯಾಗಿರುವ ಚರಣ್ಜಿತ್ ಸಿಂಗ್ ಚನ್ನಿ (58) ಅವರನ್ನು ನೇಮಕ ಮಾಡುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದೆ.ಈಗ ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸಿದ ರಾಜ್ಯದ ಮೊದಲು ಸಿಎಂ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ,ಕೇಂದ್ರ ಸಚಿವ ರಾಮದಾಸ್ ಅಠವಾಲೆ ಭಾನುವಾರ ಅವರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟಕ್ಕೆ (ಎನ್ಡಿಎ) ಸೇರಲು ಆಹ್ವಾನಿಸಿದರು.
ಹಿರಿಯ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಭಾನುವಾರ ಗಾಂಧಿ ಕುಟುಂಬಕ್ಕಿಂತ ಕ್ಯಾಪ್ಟನ್ ಅಮರಿಂದರ್ ಸಿಂಗ್ ಜನಪ್ರಿಯವಾಗುತ್ತಿರುವುದರಿಂದ ಅವರನ್ನು ಪಂಜಾಬ್ ಮುಖ್ಯಮಂತ್ರಿಯಿಂದ ತೆಗೆದುಹಾಕಿದ್ದಾರೆ ಎಂದು ಹೇಳಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿಧು ವಿರುದ್ಧ ವಾಗ್ದಾಳಿ ನಡೆಸಿರುವ ಅಮರಿಂದರ್ ಸಿಂಗ್ ಅವರನ್ನು ದೇಶ ವಿರೋಧಿ, ಅಪಾಯಕಾರಿ, ಅಸ್ಥಿರ, ಅಸಮರ್ಥ ಮತ್ತು ರಾಜ್ಯ ಮತ್ತು ದೇಶಕ್ಕೆ ಭದ್ರತೆಗೆ ಮಾರಕ ಎಂದು ಕಿಡಿ ಕಾರಿದ್ದಾರೆ.ಅಷ್ಟೇ ಅಲ್ಲದೆ ಅವರನ್ನು ಮುಖ್ಯಮಂತ್ರಿ ಮಾಡುವ ಯಾವುದೇ ಕ್ರಮದ ವಿರುದ್ಧ ಹೋರಾಡುವುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಿರುದ್ಧ ಶಾಸಕರ ಅಸಮಾಧಾನದ ಹೊರತಾಗಿಯೂ, ಪಂಜಾಬ್ ಉಸ್ತುವಾರಿ ಎಐಸಿಸಿ ಹರೀಶ್ ರಾವತ್ ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಕ್ಯಾಪ್ಟನ್ ಅಮರಿಂದರ್ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಲಿದೆ ಎಂದು ಹೇಳಿದರು.
ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ಗುರುವಾರ ಸಿಂಗ್ 2017 ರಲ್ಲಿ ಮಾಡಿದಂತೆ 2022 ರ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುತ್ತಾರೆ ಎಂದು ಹೇಳಿದ್ದಾರೆ.
ಕೋವಿಡ್ -19 ಲಸಿಕೆ ಧನಸಹಾಯದ ಬಗ್ಗೆ ಸ್ಪಷ್ಟನೆ ಕೋರಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಮತ್ತು ಲಸಿಕೆ ಹಂಚಿಕೆಗಾಗಿ ಪಂಜಾಬ್ಗೆ ಆದ್ಯತೆ ನೀಡುವಂತೆ ಒತ್ತಾಯಿಸಿದ್ದಾರೆ.ಜನಸಂಖ್ಯೆಯ ವಯಸ್ಸಿನ ವಿವರ ಮತ್ತು ಹೆಚ್ಚಿನ ಸಹ-ಕಾಯಿಲೆಗಳಿಂದಾಗಿ ಪಂಜಾಬ್ನಲ್ಲಿ ಹೆಚ್ಚಿನ ಮರಣ ಪ್ರಮಾಣವಿದೆ ಎಂದು ಸಿಎಂ ಹೇಳಿದ್ದಾರೆ.
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಡುವೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಗುರುವಾರ (ಆಗಸ್ಟ್ 20) ತುರ್ತು ಕ್ರಮಗಳನ್ನು ಆದೇಶಿಸಿದ್ದಾರೆ. ಈ ಕ್ರಮಗಳಲ್ಲಿ ಪಂಜಾಬ್ನ ಎಲ್ಲಾ 167 ನಗರಗಳು ಮತ್ತು ಪಟ್ಟಣಗಳಲ್ಲಿ ವಾರಾಂತ್ಯದ ಲಾಕ್ಡೌನ್ ವಿಸ್ತರಣೆ ಮತ್ತು ದೈನಂದಿನ ರಾತ್ರಿ ಕರ್ಫ್ಯೂ (ಸಂಜೆ 7 ರಿಂದ ಬೆಳಿಗ್ಗೆ 5 ರವರೆಗೆ ) ಸೇರಿದೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪತ್ರಕರ್ತರೊಂದಿಗೆ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಈ ಆಘಾತಕಾರಿ ವಿಷಯ ಹೇಳಿದರು. ಮುಂಬರುವ ಕಾಲದಲ್ಲಿ ಕರೋನಾ ವೈರಸ್ನಿಂದ ಪರಿಸ್ಥಿತಿ ಇನ್ನಷ್ಟು ಅಪಾಯಕಾರಿಯಾಗಬಹುದು ಎಂದು ಆರೋಗ್ಯ ತಜ್ಞರನ್ನು ಉಲ್ಲೇಖಿಸಿ ಅವರು ತಿಳಿಸಿದ್ದಾರೆ.
ರಾಜ್ಯವ್ಯಾಪಿ ಸಹಾಯ ಸಂಖ್ಯೆ 100, 112 ಮತ್ತು 181 ಅನ್ನು ಡಯಲ್ ಮಾಡುವ ಮೂಲಕ ಈ ಸೇವೆಯನ್ನು ಬಳಸಬಹುದು. ಈ ಸಂಖ್ಯೆಗಳಿಗೆ ಡಯಲ್ ಮಾಡಿದರೆ ಕೂಡಲೇ ಅವರು ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) ಸಂಪರ್ಕ ಹೊಂದುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.