ತಂದೆ ಸಾವಿನ ಮರುದಿನವೇ ನೋವಿನಲ್ಲಿ ಮಗ ಕೂಡ ಸಾವು ಚಾಮರಾಜನಗರ ಜಿಲ್ಲೆ ಅಣಗಳ್ಳಿ ದೊಡ್ಡಿ ಗ್ರಾಮದಲ್ಲಿ ಘಟನೆ ಅಣಗಳ್ಳಿದೊಡ್ಡಿ ಗ್ರಾಮದ ನಿವಾಸಿ ಮಲ್ಲಣ್ಣ(54) ಸಾವು ಹೃದಯಘಾತಕ್ಕೆ ಬಲಿಯಾದ 54 ವರ್ಷದ ಮಲ್ಲಣ್ಣ
ಹುಲಿ ಸೆರೆ ಕಾರ್ಯಾಚರಣೆಗೆ ಕರೆತರಲಾಗಿದ್ದ ಸಾಕಾನೆ ಪಾರ್ಥಸಾರಥಿ ಕೆರೆಯಲ್ಲಿ ನೀರು ಕುಡಿಯುವಾಗ, ಹೆಜ್ಜೇನು ದಾಳಿ ನಡೆದಿದೆ.. ಇದರಿಂದ ಭಯಗೊಂಡ ಆನೆ ಪಟ್ಟಣಕ್ಕೆ ಎಂಟ್ರಿ ಕೊಟ್ಟಿತು.. ಹೆಚ್ಚಿನ ಮಾಹಿತಿ ಇಲ್ಲಿದೆ.
ತನ್ನ ಪ್ರಿಯಕರನ ಜೊತೆ ಸೇರಿ ಗಂಡನಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಸಿ.ಶ್ರೀಕಾಂತ್ ಜೀವಾವಧಿ ಶಿಕ್ಷೆ, 50 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲಿದೆ.
Dr BR Ambedkar photo Buddha statue Damage: ಕಿಡಿಗೇಡಿಗಳು ಬುದ್ದನ ವಿಗ್ರಹ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಭಗ್ನಗೊಳಿಸಿರುವ ಘಟನೆ ಗಡಿಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ದಸರಾ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಇಬ್ಬರು ಪುಟ್ಟ ಬಾಲಕರು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ನಡೆದಿದೆ.
ಸಂದನಪಾಳ್ಯದ ಜಾನ್ಸನ್ ಎಂಬಾತ ತನ್ನ ತಂದೆ ಪಾಕಿಯನಾಥನ್ ಅಲಿಯಾಸ್ ಆರುಳನಂದ ಎಂಬಾತನನ್ನು ಕೊಲೆಗೈದಿದ್ದಾನೆ. ಭಾನುವಾರ ರಾತ್ರಿ ತಂದೆ ಹಾಗೂ ಮಗನ ನಡುವೆ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಗಲಾಟೆ ಅಂತ್ಯವಾಗಿದೆ.
Elephant Destroyed Crops: ಕಾಡಾನೆ ಹಾವಳಿಗೆ ರೈತರ ಕೈಗೆ ಬಂದಿದ್ದ ಕಬ್ಬು ಸೇರಿದಂತೆ ಹಲವು ಬೆಳೆಗಳು ನೆಲಕಚ್ಚಿದ್ದು ಇದರಿಂದಾಗಿ ರೈತರು ಕಂಗಾಲಾಗಿರುವ ಘಟನೆ ಗಡಿಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನಲ್ಲಿ ಜರುಗಿದೆ.
Lokayukta Attack: ಗಡಿಭಾಗದ ಜಿಲ್ಲೆಯ ನಗರಸಭೆ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬ ಬಗ್ಗೆ ಸರಣಿ ದೂರುಗಳ ಹಿನ್ನಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಲೋಕಾಯುಕ್ತ ಅಧಿಕಾರಿಗಳು ಚಾಮರಾಜನಗರ ನಗರಸಭೆ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ತಾಯಿ-ಮಗು ಸಾವನ್ನಪ್ಪಿದ್ದು ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸಪ್ಪನಪಾಳ್ಯ ಗ್ರಾಮದ ಭಾಗ್ಯ (30) ಮೃತಪಟ್ಟ ಮಹಿಳೆಯಾಗಿದ್ದು, ಹೆರಿಗೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ವೇಳೆಯಲ್ಲಿ ತಾಯಿ ಮತ್ತು ಮಗು ಸಾವನ್ನಪ್ಪಿದ್ದು ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ದುರಂತ ಘಟನೆಗಳು ಶುಕ್ರವಾರ ವರದಿಯಾಗಿವೆ. ಮೊದಲ ಘಟನೆಯಲ್ಲಿ, ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡನೇ ಘಟನೆಯಲ್ಲಿ, ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕಾರು ಭೀಮನಬೀಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಹೋಗುತ್ತಿತ್ತು. ಚಾಲಕ ಮದ್ಯಪಾನ ಮಾಡಿದ್ದ ಕಾರಣ ರಸ್ತೆಯ ಬಲಭಾಗದಲ್ಲಿ ನಿಂತಿದ್ದವರಿಗೆ ಡಿಕ್ಕಿಯಾಗಿ ಶೆಡ್ಗೆ ನುಗ್ಗಿದ ಕಾರು ಜಮೀನೊಳಗೆ ಬಂದು ನಿಂತಿದೆ. ಇದರಿಂದ ಶೆಡ್ ಸಂಪೂರ್ಣ ಹಾನಿಯಾಗಿದ್ದು, ಬೈಕ್ ಕೂಡ ನಜ್ಜುಗುಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.