Karnataka Assembly Election: ಇಂದು ಹನೂರು ವಿಧನಾಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅರ್ಜಿ ಸಲ್ಲಿಸಿದ ಹ್ಯಾಟ್ರಿಕ್ ಶಾಸಕ ನರೇಂದ್ರ ಅವರು ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದಾರೆ.
Karnataka Assembly Election 2023: ಸತತ ಮೂರು ಬಾರಿ ಜಯಗಳಿಸಿ ನಾಲ್ಕನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ಚಾಮರಾಜನಗರದ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಇಂದು ಉಮೇದುವಾರಿಕೆ ಸಲ್ಲಿಸಿದ್ದಾರೆ.
Karnataka Assembly Election: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ಚರ ಬೆಟ್ಟ ಗ್ರಾಪಂ ವ್ಯಾಪ್ತಿಯ ಪಡಿಸಲನತ್ತ ಮತ್ತು ತೇಕಾಣೆ ಗ್ರಾಮಸ್ಥರು ಮೂಲಸೌಕರ್ಯ ಕಲ್ಪಿಸದಿದ್ದಕ್ಕೇ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.
ಕೃಷಿ ಇಲಾಖೆ ಸಹಾಯಕ ನಿದೇಶಕ ಪ್ರವೀಣ್ಕುಮಾರ್, ತಾಂತ್ರಿಕ ಮತ್ತು ಕೃಷಿ ಅಧಿಕಾರಿ ಸತೀಶ್ ಹಾಗೂ ಡಿ.ಗ್ರೂಪ್ ನೌಕರ ಅರುಣ್ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಗುಂಡ್ಲುಪೇಟೆ ಪಟ್ಟಣದಲ್ಲಿರುವ ಎಸ್.ಆರ್.ಟ್ರೇಡರ್ಸ್ ಎಂಬ ಕಂಪನಿಯ 70-80 ಫೈಲ್ ಗಳ ಬಿಲ್ ಪಾಸ್ ಮಾಡದೇ ಪೆಂಡಿಂಗ್ ಇಟ್ಟಿದ್ದ ಈ ಇಬ್ಬರು ಅಧಿಕಾರಿಗಳು 2.5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಸಿಸಿಟಿವಿ ಕ್ಯಾಮರಾದಲ್ಲಿ ನಿಗೂಢ ಬೆಳಕೊಂದು ಪದೇಪದೆ ಕಾಣಿಸಿಕೊಂಡು ಭಕ್ತರನ್ನು ಅಚ್ಚರಿಗೊಳಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ ಗ್ರಾಮದಲ್ಲಿ ನಡೆದಿದೆ.
ಈಗ ವೆಂಕಟೇಶನನ್ನು ಸಾಕಿ ಸಲಹುತ್ತಿರುವ ಅಜ್ಜಿಗೆ ಸರಿಯಾದ ಮನೆಯಿಲ್ಲ, ಆದರೂ ಕೂಡ ಕೂಲಿ ಮಾಡಿ ಇಬ್ಬರು ಮಕ್ಕಳನ್ನು ಸಾಕಿದ್ದಾಳೆ.ಈಗ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲು ಮುಂದಾಗಿರುವ ವೆಂಕಟೇಶನಿಗೆ ಮುಂದಿನ ವಿದ್ಯಾಭ್ಯಾಸ ಮತ್ತು ಕ್ರೀಡಾ ಸಾಧನೆಗೆ ಸರ್ಕಾರದ ಸಹಾಯ ಹಸ್ತಬೇಕಾಗಿದೆ.
Karnataka Assembly Election: ಜಿಲ್ಲೆಯಲ್ಲಿ 195 ಮಂದಿ ಸೇವಾ ಮತದಾರರು ಇದ್ದು 97 ಸೆಕ್ಟರ್ ಅಧಿಕಾರಿಗಳು, 12 ಪ್ಲೈಯಿಂಗ್ ಸ್ಕ್ವಾಡ್ ತಂಡ,16 ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ, ಮಾದರಿ ನೀತಿ ಸಂಹಿತೆ ಪಾಲನೆ ಮೇಲೆ ನಿಗಾ ಇಡುವ ಉದ್ದೇಶದಿಂದ 37 ಮಂದಿ ಇರಲಿದ್ದಾರೆ.
ಜಿಲ್ಲಾಧಿಕಾರಿಯವರ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮದ ಬ್ಯಾಂಕ್ ಖಾತೆಯಿಂದ ಎಡಿಸಿ ಸಹಿಯನ್ನು ರಾಜೇಶ್ ಎಂಬಾತ ಫೋರ್ಜರಿ ಮಾಡಿ 1 ಕೋಟಿ ರೂ.ಗೂ ಅಧಿಕ ಹಣವನ್ನು ತನ್ನ ಮತ್ತು ಇತರರ ಖಾತೆಗೆ ವರ್ಗಾವಣೆ ಮಾಡಿದ್ದಾನೆ ಎನ್ನಲಾಗಿದೆ.
ಪತ್ರಕರ್ತನ ಸಮಯಪ್ರಜ್ಞೆಯಿಂದ ನೀರಿನಲ್ಲಿ ಮುಳುಗುತ್ತಿದ್ದ ಮರಿಯಾನೆಯೊಂದು ತಾಯಿ ಮಡಿಲು ಸೇರಿದ ಘಟನೆ ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಪಾಲಾರ್ ಅರಣ್ಯ ಪ್ರದೇಶದ ಬೀಟ್ ನಲ್ಲಿ ಗುರುವಾರ ನಡೆದಿದೆ.
ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಚಾಮರಾಜನಗರ ಅಬಕಾರಿ ಇಲಾಖೆ ಹೈ ಅಲರ್ಟ್ ಆಗಿದ್ದು, ಮಿಂಚಿನ ಕಾರ್ಯಾಚರಣೆ ನಡೆಸುತ್ತಿದೆ. ಎಲೆಕ್ಷನ್ ಬಂತೆಂದರೆ ಎಣ್ಣೆ ಹಂಚೋದು ಮಾಮೂಲಿ. ಅಕ್ರಮ ಮದ್ಯ ಹಂಚಿಕೆ ಆಗಬಾರದೆಂದು ಈಗಿನಿಂದಲೇ ಅಬಕಾರಿ ಇಲಾಖೆ ಅಲರ್ಟ್ ಆಗಿದೆ. ಕಳೆದ ಒಂದು ತಿಂಗಳಿನಲ್ಲಿ 115 ದಾಳಿ ನಡೆಸಿ 58 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳೆದ ಫೆ. 19ರಿಂದ ಮಾರ್ಚ್ 20ರವರೆಗೆ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯು ಒಟ್ಟು 115 ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 58 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ ಮಾರ್ಚ್ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ.
ಮತದಾರರು, ಕಾರ್ಯಕರ್ತರು ಹಾಗೂ ರಾಜಕೀಯ ಪಕ್ಷಗಳಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ಅನಗತ್ಯವಾಗಿ ದಲಿತ ರಾಜಕಾರಣಿಗಳ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮನವಿ ಮಾಡಿಕೊಂಡರು.
Chamarajanagar : ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.