ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿ ರಥಯಾತ್ರೆಗೆ ಚಾಲನೆ ಸಿಕ್ಕಿದೆ.. ಬಿಜೆಪಿಯ ರಥಯಾತ್ರೆಗೆ ಜೆ.ಪಿ.ನಡ್ಡಾರಿಂದ ಗ್ರೀನ್ಸಿಗ್ನಲ್ ನೀಡಿದ್ದಾರೆ.. ರಥಯಾತ್ರೆಯಿಂದ ಸಚಿವ ಸೋಮಣ್ಣ ದೂರ ಉಳಿದಿದ್ದಾರೆ.. ಇದು ಅಸಮಾಧಾನದಿಂದ ಸಚಿವ ಸೋಮಣ್ಣ ರಥಯಾತ್ರೆ ಗೈರಾದ್ರಾ ಅನ್ನೋ ಪ್ರಶ್ನೆ ಹುಟ್ಟುಹಾಕಿದೆ..
ಚಾಮರಾಜನಗರ ಜಿಲ್ಲೆಯಲ್ಲಿ ಬಹುಪಾಲು ಮಂದಿ ರೈತರು ಬಾಳೆ, ಅರಿಶಿಣ ಹಾಗೂ ಟೊಮ್ಯಾಟೊ, ಸಣ್ಣ ಈರುಳ್ಳಿಯನ್ನು ಬೆಳೆಯಲಿದ್ದು ತಮಿಳುನಾಡು ಮತ್ತು ಮೈಸೂರು ಉತ್ತಮ ಮಾರುಕಟ್ಟೆಗಳಾಗಿದೆ. ಹಾಗಾಗಿಯೇ ಅರಿಶಿಣಪುಡಿ ತಯಾರಿಕಾ ಘಟಕ ಮತ್ತು ಟೊಮೆಟೊ, ಬಾಳೆ ಸಂಸ್ಕರಣ ಘಟಕವನ್ನು ಸ್ಥಾಪಿಸಬೇಕೆಂದು ಇಲ್ಲಿನ ಜನರ ಬಹುವರ್ಷಗಳ ಬೇಡಿಕೆ.
ಗೆಳೆಯರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಆರೋಪಿ ಯುವಕ ಕೊಳ್ಳೇಗಾಲದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿನ ಲೋಕೇಶ್ ಎಂಬವರ ಪಾನಿಪೂರಿ ಅಂಗಡಿಗೆ ತೆರಳಿ ಸ್ನೇಹಿತರ ಜೊತೆ ಮೂರು ಪ್ಲೇಟ್ ಪಾನಿಪೂರಿ ತಿಂದಿದ್ದಾನೆ. ಹಣವನ್ನು ಫೋನ್ ಪೇ ಮಾಡುವುದಾಗಿ ಹೇಳಿ ವ್ಯಾಪಾರಿ ಫೋನ್ ಪಡೆದು ಬೇರೊಬ್ಬನಿಗೆ ಕರೆ ಮಾಡಿದ್ದಾನೆ.
Darshan visits Male Mahadeshwara Hill : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರಿಂದು ತಮ್ಮ ಸ್ನೇಹಿತರ ಜೊತೆ ಇಂದು ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಹುಲಿಯ ಕಾಲಿಗೆ ತಂತಿಯಿಂದ ಕಲ್ಲು ಕಟ್ಟಿ ಕೆರೆಗೆ ಎಸೆದಿರುವುದು ಮೇಲ್ನೋಟಕ್ಕೆ ಖಚಿತವಾಗಿದ್ದು ಬೇರೆ ಸ್ಥಳದಲ್ಲಿ ಮೃತಪಟ್ಟಿರುವ ಹುಲಿಯನ್ನು ಕೆರೆಗೆ ತಂದು ಬಿಸಾಡಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲೇ ಕಳೆದ 4 ದಿನಗಳಲ್ಲಿ ಮೂರು ಮನೆಗೆ ಕನ್ನ ಹಾಕಿದ್ದಾರೆ. ಕನ್ನ ಹಾಕಲು ಹೊಂಚು ಹಾಕುತ್ತಿದ್ದ ಆರೋಪದ ಮೇಲೆ ಜನರೇ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆಯೂ ನಡೆದಿದ್ದು ಕಳ್ಳರ ಕೃತ್ಯಕ್ಕೆ ಯಾಕೋ ಬ್ರೇಕ್ ಬೀಳುತ್ತಿಲ್ಲ.
ನಗರದ ಗೋಪಾಲಪುರ ಗ್ರಾಮದ ಮಹಾದೇವಪ್ಪ ಎಂಬವರು ತಮ್ಮ ಹೊಲದಲ್ಲಿ ಕೆಲಸ ಮಾಡುತಿದ್ದ ವೇಳೆಯಲ್ಲಿ ಏಕಾಏಕಿ ಆನೆಯೊಂದು ಮೇಲೆರಗಿದೆ. ಆನೆಯಿಂದ ಜೀವ ಉಳಿಸಿಕೊಳ್ಳುವ ಬರದಲ್ಲಿ ರೈತನ ಎರಡೂ ಕಾಳುಗಳು ಮುರಿದಿವೆ ಎಂದು ವರದಿ ಆಗಿದೆ.
ಮತ್ತೊಂದು ಕಾಗದದಲ್ಲಿ “ನರಸಿಂಹ ಸ್ವಾಮಿ ಈ ನಂಬರುಗಳಿಗೆ ಮೊದಲನೇ ಬಹುಮಾನ ಬರುವಂತೆ ಮಾಡು ನಿನ್ನ ಹುಂಡಿಗೆ 101 ರೂ. ಹಾಕುತ್ತೇನೆ” ಎಂದು ಲಾಟರಿ ಟಿಕೆಟ್ ನಂಗಳನ್ನು ಬರೆದು ಕಾಣಿಕೆ ಹುಂಡಿಗೆ ಹಾಕಿದ್ದಾನೆ. ಇನ್ನು, ದೇಗುಲದ ಹುಂಡಿಯಲ್ಲಿ 1,87,565 ಹಣ ಸಂಗ್ರಹವಾಗಿದೆ ಎಂದು ಸಿಬ್ಬಂದಿ ಮಾಹಿತಿ ಹಂಚಿಕೊಂಡಿದ್ದಾರೆ
Bird flu: ಕಾಡಂಚಿನ ಗ್ರಾಮ ಮೇಲುಕಾಮನಹಳ್ಳಿ ಸುತ್ತಮುತ್ತಲಿನಲ್ಲಿ ಸಾಕು ಕೋಳಿಗಳು ಸಾಮೂಹಿಕವಾಗಿ ಮೃತವಾಗುತ್ತಿರುವುದರಿಂದ ಹಕ್ಕಿ ಜ್ವರ ಹರಡಿರಬಹುದು ಎಂಬ ಆತಂಕ ಎದುರಾಗಿದೆ. ಗ್ರಾಮದಲ್ಲಿ ಅನೇಕರು ಮನೆಗಳಲ್ಲಿ ನಾಟಿ ತಳಿಯ ಕೋಳಿಗಳನ್ನು ಸಾಕಿ ಮಾರಾಟ ಮಾಡುತ್ತಿದ್ದರು.
ಹನೂರು ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಬಿರುದು ಪಡೆದುಕೊಂಡಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ನಾಲ್ ರೋಡ್ ಬಡಾವಣೆಯಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಚರಂಡಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಕ್ರಿಯೆ ಯೋಜನೆ ಮಾಡದೇ ಇರುವುದರಿಂದ ವಾರ್ಡ್ ನಲ್ಲಿ ಸಮಸ್ಯೆಗಳು ತಲೆದೋರಿದೆ.
B Puttaswamy Resigned for police Inspector: ರಾಮಾಪುರ, ಕೊಳ್ಳೇಗಾಲ, ಚಾಮರಾಜನಗರದಲ್ಲಿ ಪಿಎಸ್ಐ, ಪಿಐ ಆಗಿ ಕರ್ತವ್ಯ ನಿರ್ವಹಿಸಿದ್ದ ಬಿ.ಪುಟ್ಟಸ್ವಾಮಿ, ಜನಸ್ನೇಹಿ ಆಡಳಿತದಿಂದ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮದ ರಾಜು(55) ಮೃತ ದುರ್ದೈವಿ. ಬಿಳಿಗಿರಿರಂಗನಾಥ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಹುಚ್ಚನಕೆಂಬೆರೆ ಬೀಟ್ ನಲ್ಲಿ ಕರಡಿಯೊಂದು ದಾಳಿ ಮಾಡಿ ಕೊಂದು ಹಾಕಿದೆ.
ಲೋಕಸಭಾ ಸದಸ್ಯ ವಿ. ಶ್ರೀನಿವಾಸಪ್ರಸಾದರ ವಿಶೇಷ ಕಾಳಜಿ ಹಾಗೂ ಮುತುವರ್ಜಿಯಿಂದ ಜಿಲ್ಲೆಯು ರಾಜ್ಯದಲ್ಲಿ ಆಯ್ಕೆಯಾಗಿದ್ದು ಪ್ರತಿ ಊರುಗಳಲ್ಲಿ ವಿಶೇಷ ಚೇತನರನ್ನು ಗುರುತಿಸಿ ಅವರಿಗೆ ಸಾರಿಗೆ ಸೌಲಭ್ಯ ಕಲ್ಪಿಸಿ ಸಾಧನಗಳನ್ನು ವಿತರಿಸಲಾಯಿತು.
Minister R Ashok: ಹನೂರಿನಲ್ಲಿ ಇಂದು ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ ಎನ್ನುವುದು ಸುಳ್ಳು. ನಮ್ಮ ಬೊಕ್ಕಸ ತುಂಬಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗಲಿದೆ ಎಂಬ ಮೂಢನಂಬಿಕೆ ನನಗಿಲ್ಲ, ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗಲ್ಲ- ಇಲ್ಲಿಗೆ ಬಂದರೆ ಪುಣ್ಯ ಸಂಪಾದನೆ ಆಗಲಿದೆ, ಪುಣ್ಯವಂತರಾಗುತ್ತಾರೆ, ಚಾಮರಾಜನಗರದಲ್ಲಿ ಮುಂದಿನ ದಿನಗಳಲ್ಲಿ ಕೈಗಾರಿಕಾ ಕ್ರಾಂತಿ ಮಾಡಲಿದ್ದು ಯುವಕರು, ಬಡವರಿಗೆ ಉದ್ಯೋಗ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.