Karnataka Assembly Election: ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಕೋಟೆನಾಡು ಚಿತ್ರದುರ್ಗ.. ವಿಜಯನಗರದಲ್ಲಿ ನಮೋ ಸುನಾಮಿ ಸದ್ದು ಮಾಡಲಿದೆ. ಬಳಿಕ, ಹೊಸಪೇಟೆಯ ಪುನೀತ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಜರುಗಲಿದ್ದು ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.
Nadoja Belagallu Veeranna: ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪಿದ್ದಾರೆ. ನಾಡೋಜ ಬೆಳಗಲ್ಲು ವೀರಣ್ಣನವರ ಬಗ್ಗೆ ನೀವು ತಿಳಿದಿರದ ಮತ್ತಷ್ಟು ವಿಷಯಗಳು ಇಲ್ಲಿವೆ.
Nadoja Belagallu Veeranna: ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪಿದ್ದಾರೆ. ಬೆಳಗಲ್ಲು ವೀರಣ್ಣ ಬಳ್ಳಾರಿಯಿಂದ ಚಿಕ್ಕಮಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಚಿತ್ರದುರ್ಗಕ್ಕೆ ಹೊರಟಿದೆ. ಶಿವಮೊಗ್ಗ, ಚಿತ್ರದುರ್ಗದಲ್ಲಿ ಯಾತ್ರೆಯನ್ನ ಕೈಗೊಂಡಿದ್ದೇವೆ. ಅಸೆಂಬ್ಲಿ ಮುಗಿದ ನಂತರ ಮೈಸೂರಿನಲ್ಲಿ ಯಾತ್ರೆ ನಡೆಸ್ತೇವೆ. ನಮ್ಮ ಯಾತ್ರೆ ನೋಡಿ ಬಿಜೆಪಿ, JDSಗೆ ಹಿಂಸೆಯಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ರು.
ಒಂದು ಕಾಲದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ರೆಡ್ಡಿ ಬ್ರದರ್ಸ್ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅದ್ಯಾಕೋ ಏನೋ ರೆಡ್ಡಿ ಬಿಜೆಪಿ ಪಕ್ಷದಿಂದ ದೂರ ಸರಿದು, ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದಾರೆ. ಇದರಿಂದ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರಗಳಲ್ಲಿ ಬಹುತೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಚಿಂತನೆಯಲ್ಲಿದ್ದಾರೆ.
ಹೆಂಡತಿ ತವರು ಮನೆ ಸೇರಿದ ಬಳಿಕ ಕುಡಿತಕ್ಕೆ ದಾಸನಾಗಿದ್ದ ರಂಗನಾಥ, ಮಾವ ಉತ್ತಮಸ್ಥನಾದರೂ ಊರಲ್ಲಿ ಅನ್ನ ಆಹಾರ ಇಲ್ಲದೆ ಅಲೆಯುತ್ತಿದ್ದ. ಆದರೆ, ಇದ್ದಕ್ಕಿದ್ದಂತೆ ಈತನ ಮಾವ ಉಮೇಶ್ ಮತ್ತು ಹೆಂಡತಿ ಅಮೃತ ಮತ್ತು ಕುಟುಂಬಸ್ಥರು ಅವನನ್ನು ಮನೆಗೆ ಕರೆತಂದು ಸರಪಳಿ ಹಾಕಿ ಬಂಧಿಸಿದ್ದಾರೆ.
Chitradurga News : ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಪರಾಜಿತ ಅಭ್ಯರ್ಥಿ ಬಿ.ಸೋಮಶೇಖರ್ ಅವರ ಮೇಲೆ ಗುರುವಾರ ರಾತ್ರಿ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಮಠಾದೀಶರ ಸಮಾಗಮ ನಡೀತು. ಈ ವೇಳೆ ಸರ್ಕಾರದ ನಿರ್ಣಯದ ವಿರುದ್ಧ ಮಠಾದೀಶರು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಸಭೆಯಲ್ಲಿ ಯಾವೆಲ್ಲ ವಿಚಾರ ಚರ್ಚೆ ಆಯ್ತು ಅನ್ನೋದರ ಕಂಪ್ಲಿಂಟ್ ಡೀಟೆಲ್ಸ್ ಇಲ್ಲಿದೆ ನೋಡಿ.r
ಭ್ರಷ್ಟಾಚಾರವನ್ನು ಹುಟ್ಟಿಹಾಕಿದ್ದೇ ಕಾಂಗ್ರೆಸ್ ಪಕ್ಷ. ಲೋಕಾಯುಕ್ತವನ್ನು ಮುಚ್ಚಿ ಎಸಿಬಿಯನ್ನು ಪ್ರಾರಂಭಿಸಿದರು. 50 ಕ್ಕಿಂತ ಹೆಚ್ಚು ಪ್ರಕರಣಗಳು ಕಾಂಗ್ರೆಸ್ ನವರ ಮೇಲಿತ್ತು. ಅವುಗಳನ್ನು ಮುಚ್ಚಿಹಾಕಿದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾರತ್ ಜೋಡೋ ಐಕ್ಯತಾ ಯಾತ್ರೆ ಕೋಟೆಗಳನಾಡು ಚಿತ್ರದುರ್ಗ ಜಿಲ್ಲೆಗೆ ಎಂಟ್ರಿ ಕೊಟ್ಟಿದೆ. ಸಿದ್ದರಾಮಯ್ಯ ಗೈರು ಎದ್ದು ಕಾಣುತ್ತಿತ್ತು. ಇದರ ನಡುವೆ ಮಳೆರಾಯ ಪಾದಯಾತ್ರೆಗೆ ಅಡ್ಡಿ ಪಡಿಸಿದ್ದಾನೆ. ವಿವಿಧ ಜಿಲ್ಲೆಯಿಂದ ಬಂದ ಕಾರ್ಯಕರ್ತರು ಮಳೆಯಲ್ಲಿ ನೆನೆದೇ ಪಾದಯಾತ್ರೆ ಮಾಡಿದ್ದಾರೆ. ಇನ್ನೂ 3 ದಿನಗಳ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕಿನಲ್ಲಿ ಸಂಚರಿಸಲಿದೆ.
ಇಂದು ಚಿತ್ರದುರ್ಗ ಜಿಲ್ಲೆಗೆ ಭಾರತ್ ಜೋಡೋ ಯಾತ್ರೆ ಎಂಟ್ರಿ ನೀಡಲಿದೆ. ಸಂಜೆ 4 ಗಂಟೆಗೆ ಹಿರಿಯೂರಿಗೆ ಭಾರತ್ ಜೋಡೋ ಯಾತ್ರೆ ಆಗಮಿಸಲಿದ್ದು, ರಾಹುಲ್ ಯಾತ್ರೆಗೆ ಪ್ರಗತಿಪರ ಸಂಘಟನೆಗಳು ಸಾಥ್ ನೀಡಲಿವೆ.
ಚಿತ್ರದುರ್ಗದಲ್ಲಿ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆಗೂ ಮುನ್ನ ಈ ಬಾರಿ ಇನ್ನೊಂದು ವಿಶೇಷ ಇದೆ. ಅದು ನವದುರ್ಗೆಯರ ಸಂಗಮ ಮತ್ತು ಸಾಂಸ್ಕೃತಿಕ ವೈಭವ.. ಈ ಬಗ್ಗೆ ನಮ್ಮ ಚಿತ್ರದುರ್ಗ ಪ್ರತಿನಿಧಿ ಮಾಲತೇಶ್ ಅರಸ್ ಸಂಘಟಕರೊಂದಿಗೆ ಮಾಡಿರುವ ಚಿಟ್ ಚಾಟ್ ಇಲ್ಲಿದೆ.
ಪೋಕ್ಸೋ ಕೇಸ್ನಡಿ ಮುರುಘಾ ಶ್ರೀ ಬಂಧನ ವಿಚಾರ. ಮತ್ತೆ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್. ಶ್ರೀಗಳನ್ನ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ. ಬೆಂಗಳೂರಿಗೆ ಬೇಡ, ಜೈಲಿನಲ್ಲೇ ಚಿಕಿತ್ಸೆ ನೀಡಲು ತಾಕೀತು. ಸೆ. 6ರಂದು ಮಧ್ಯಾಹ್ನ 12ಕ್ಕೆ ಕೋರ್ಟ್ಗೆ ಹಾಜರಾಗಲು ಸೂಚನೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.