ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಕಾಂಗ್ರೆಸ್ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದು ಬಿಜೆಪಿ ಮತಗಳ ಮೇಲೆ ಪರಿಣಾಮ ಬೀರಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
Karnataka Election 2023 : ಶೆಟ್ಟರ್ ಅವರಿಗೆ ರಾಜಕೀಯ ನಿವೃತಿ ಹೊಂದುವಂತೆ ಪಕ್ಷ ಹೇಳಿಲ್ಲ. ಅವರನ್ನು ರಾಜ್ಯಸಭೆಗೆ ಕಳಿಸುವ ಬಗ್ಗೆ ಚರ್ಚೆಯಾಗಿತ್ತು. ಅಲ್ಲದೆ, ಅವರ ಕುಟುಂಬಕ್ಕೆ ಟಿಕೆಟ್ ನೀಡುವುದಾಗಿ ತಿಳಿಸಿತ್ತು. ಲಕ್ಷಣ ಸವದಿ ಅವರನ್ನ ಚುನಾವಣೆಯಲ್ಲಿ ಸೋತಮೇಲೆ ಡಿಸಿಎಂ, ಕೋರ್ ಕಮಿಟಿ ಸ್ಥಾನ, ಹಾಗೂ ಎಂಎಲ್ಸಿ ಸ್ಥಾನ ನೀಡಲಾಗಿತ್ತು. ಅದರಂತೆ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬಂದಾಗ ಅವರಿಗೆ ಅಧಿಕಾರ ನೀಡುವ ಭರವಸೆಯನ್ನು ನೀಡಿತ್ತು.
Karnataka Election 2023 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಶಿಗ್ಗಾಂವಿ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಅನೇಕ ಬದಲಾವಣೆ ಮಾಡಿದೆ. ಕರ್ನಾಟಕದಲ್ಲಿ ಬಿಜೆಪಿ ತನ್ನದೇ ಆದ ಇತಿಹಾಸವನ್ನು ಹೊಂದಿದೆ ಎಂದರು.
Karnataka Assembly Elections 2023: ಒಳಮೀಸಲಾತಿ ಹೆಚ್ಚಳ, ನೆನೆಗುದಿಗೆ ಬಿದ್ದ ಸಮಸ್ಯೆಗಳಿಗೆ ಪರಿಹಾರ, ಒಬಿಸಿ ಯಲ್ಲಿ ಬದಲಾವಣೆ ಜನಮಾನಸದಲ್ಲಿ ಪಕ್ಷ ಹಾಗೂ ಸರ್ಕಾರದ ಪರವಾಗಿ ಜನತಾ ಜನಾರ್ದನ ಇದೆ. ಈ ಬಾರಿ ನಮ್ಮ ಕೆಲಸಗಳ ಆಧಾರದ ಮೇಲೆ ಸಕಾರಾತ್ಮಕ ತೀರ್ಪನ್ನು ಕೇಳುತ್ತಿದ್ದೇವೆ. ಜನರ ಆಶೀರ್ವಾದ ನಮ್ಮ ಪರವಾಗಿದೆ - ಸಿಎಂ ಬಸವರಾಜ ಬೊಮ್ಮಾಯಿ
ನಾಡಪ್ರಭು ಕೆಂಪೇಗೌಡರ ಬೆಂಗಳೂರು ಸುಂದರವಾಗಿದೆ. ಬ್ರಾಂಡ್ ಬೆಂಗಳೂರಿನ ಹೆಸರು ಉಳಿಸುವುದು ಬಹಳ ಕಷ್ಟ, ಹಾಳು ಮಾಡುವುದು ಸುಲಭ. ಆದ್ದರಿಂದ ನಾವೆಲ್ಲ ಬ್ರಾಂಡ್ ಬೆಂಗಳೂರಿನ ಹೆಸರನ್ನು ಉಳಿಸೋಣ. ಎಲ್ಲರ ಸಹಕಾರದಿಂದ ಬೆಂಗಳೂರಿಗೆ ಉತ್ತಮ ಹೆಸರು ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.