ಸಿಎಂ ಬಸವರಾಜ ಬೊಮ್ಮಾಯಿ ಸುಳ್ಳಿನ ರಾಜ, ಸುವರ್ಣ ಸೌಧದ ಅಸೆಂಬ್ಲಿ ಹಾಲ್ ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ನನಗೆ ಗೊತ್ತೇ ಇಲ್ಲ ಎನ್ನುತ್ತಾರೆ ಎಂದು ಮುಖ್ಯಮಂತ್ರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸ್ವಾತಂತ್ರ ಹೋರಾಟಕ್ಕೆ ಸಾವರ್ಕರ್ ಕೊಡುಗೆ ಇಲ್ಲ ಎಂದರು.
ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತಿದ್ದು, ಎಸ್ಸಿ, ಎಸ್ಟಿ ಮೀಸಲಾತಿ ಮಸೂದೆ (Ordinance Replacement bill) ಸೇರಿದಂತೆ ಇತರ ಇಲಾಖೆಗಳ ಹಲವಾರು ಮಸೂದೆಗಳನ್ನು ಮಂಡಿಸಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
CM Basavaraj Bommai : ಇಂದು ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
CM Basavaraj Bommai : ಚಾಮರಾಜನಗರ ಮತ್ತು ಗುಂಡ್ಲುಪೇಟೆಯ 754 ಕೋಟಿ ರೂ.ಗಳ ಯೋಜನೆಯ ಎರಡು ಪ್ರಸ್ತಾವನೆಗಳನ್ನು ಮಂಡಳಿ ಸಭೆಗೆ ಅನುಮೋದನೆಗಾಗಿ ಕಳುಹಿಸಲಾಗಿದ್ದು, ಶೀಘ್ರದಲ್ಲಿಯೇ ಅನುಮೋದನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗಲಿದೆ ಎಂಬ ಮೂಢನಂಬಿಕೆ ನನಗಿಲ್ಲ, ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗಲ್ಲ- ಇಲ್ಲಿಗೆ ಬಂದರೆ ಪುಣ್ಯ ಸಂಪಾದನೆ ಆಗಲಿದೆ, ಪುಣ್ಯವಂತರಾಗುತ್ತಾರೆ, ಚಾಮರಾಜನಗರದಲ್ಲಿ ಮುಂದಿನ ದಿನಗಳಲ್ಲಿ ಕೈಗಾರಿಕಾ ಕ್ರಾಂತಿ ಮಾಡಲಿದ್ದು ಯುವಕರು, ಬಡವರಿಗೆ ಉದ್ಯೋಗ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.
ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ.
ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ ಅವರಿಂದ ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯ ಅಳಿದರೂ ಸಹ ತದನಂತರ ಬಂದ ಬಿ.ಎಸ್.ಯಡಿಯೂರಪ್ಪ ಗಡಿಜಿಲ್ಲೆಗೆ ಕಾಲಿಡಲೇ ಇಲ್ಲ- ಆದರೆ ಬೊಮ್ಮಾಯಿ ಈಗ ಎರಡನೇ ಬಾರಿಗೆ ಗಡಿಜಿಲ್ಲೆಗೆ ಆಗಮಿಸುತ್ತಿದ್ದು ನೂರಾರು ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಹಿಂದೆ ಜಯಂತಿಗಳಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಕಲಾಗಿದ್ದ ಅಭಿನಂದನಾ ಕಟೌಟ್ ಗಳನ್ನು ಚಾಮರಾಜನಗರ ನಗರಸಭೆ ತೆರವು ಮಾಡಿತ್ತು.
ಮುಂದಿನ ದಿನಗಳಲ್ಲಿ ಯುವನೀತಿಯನ್ನು ತರಲಾಗುವುದು. ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸಚಿವ ಸುನೀಲ್ ಕುಮಾರ್ರವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ವಿರೋಧ ವ್ಯಕ್ತಪಡಿಸಿದ್ದು, ರಾಜಕೀಯೇತರ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದರು.
ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
CM Basavaraj Bommai : ಇಂದು ತಮ್ಮನ್ನು ಭೇಟಿಯಾದ ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೇಮಕಗೊಂಡಿರುವ ಚಂದ್ರು ಅಯ್ಯರ್ ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದರು.
ಮಹಾರಾಷ್ಟ್ರದ ಅರ್ಜಿ ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
CM Basavaraj Bommai met the Union Water Power Minister : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.