Basavaraj Bommai : ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವನ್ನು ಬಳಸಿ, ನಂತರ ಕೈಬಿಡುವ ನಮ್ಮ ಪ್ರವೃತ್ತಿಯ ಬಗ್ಗೆ ನಾವು ನ್ಯಾಯಯುತವಾಗಿ ಅದರೊಂದಿಗೆ ನಡೆದುಕೊಳ್ಳುತ್ತೇವೆಯೇ ಎಂಬ ಬಗ್ಗೆ ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳಬೇಕು. ವಯಸ್ಸಾದ ಗೋವುಗಳ ರಕ್ಷಣೆ ಸರ್ಕಾರ ಮತ್ತು ಸಮಾಜದ ಜವಾಬ್ದಾರಿ ಎಂದು ತಿಳಿಸಿದರು.
CM Bommai ಬೆಂಗಳೂರಿನಲ್ಲಿ ನಡೆದ ಸರ್ಕಾರದ ವಿವಿಧ ಇಲಾಖೆಗಳ ನೂತನ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಸಂಕಲ್ಪವನ್ನು ಮಾಡಿದ್ದಾರೆ.
CM Bommai : ಕರ್ನಾಟಕದ ಆಟೋ ಚಾಲಕ ಬಾಂಧವರು ಹಗಲಿರುಳೆನ್ನದೆ ದುಡಿಯುತ್ತಾರೆ. ದುಡಿಮೆಯಿಂದಲೇ ಸಂಸಾರ ಸಾಗಿಸಬೇಕಾದ ಅವರಿಗೆ ಆರೋಗ್ಯ ವಿಮೆ ಸವಲತ್ತನ್ನು ಈಗಾಗಲೇ ಒದಗಿಸಲಾಗಿದ್ದು ಅವರ ಮಕ್ಕಳ ಶಿಕ್ಷಣ ಕುರಿತು ಕಾಳಜಿಯಿಂದ ವಿದ್ಯಾನಿಧಿ ಯೋಜನೆಯನ್ನು ಅವರಿಗೂ ವಿಸ್ತರಿಸಲಾಗಿದೆ.
ಚುನಾವಣೆ ರಣಾಂಗಣದಲ್ಲಿ ಬೊಮ್ಮಾಯಿ ಆರ್ಭಟ. ನಾನೇ ಮುಂದಿನ ಸಿಎಂ ಎಂದ ಬಸವರಾಜ ಬೊಮ್ಮಾಯಿ. ನಗುನಗುತ್ತಲೇ ಸಚಿವ ಮುರುಗೇಶ್ ನಿರಾಣಿ ಕಾಲೆಳೆದ ಸಿಎಂ. ಬೀಳಗಿ ಕ್ಷೇತ್ರದಲ್ಲಿ ನೂರಾರು ಅಭಿವೃದ್ಧಿ ಕಾರ್ಯಗಳು ಆಗಿವೆ. ಆದರೆ ಮುರುಗೇಶ್ ನಿರಾಣಿ ನನ್ನನ್ನೇ ಕರೆದುಕೊಂಡು ಹೋಗಿಲ್ಲ. ನನ್ನನ್ನು ಕರೆದುಕೊಂಡು ಹೋದರೆ ಎಲ್ಲವೂ ಗೊತ್ತಾಗುತ್ತೆ. ಚಿಂತೆ ಮಾಡಬೇಡಿ, ನಾನು ಮತ್ತೆ ಸಿಎಂ ಆಗಿ ಬೀಳಗಿಗೆ ಬರ್ತೀನಿ ಎಂದು ಬಾಗಲಕೋಟೆಯ ಮುಧೋಳದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ರು.
ದೇಶದ ಅಭಿವೃದ್ಧಿಗೆ ಮೋದಿ, ರಾಜ್ಯಕ್ಕೆ ಸಿಎಂ ಬೊಮ್ಮಾಯಿ. ಈ ಇಬ್ಬರು ನಾಯಕರಿಗೆ ಅಭಿವೃದ್ದಿಗಾಗಿ ಕೈ ಬಲಪಡಿಸಬೇಕು ಎಂದು ಮತದಾರರ ಪ್ರಭುಗಳಲ್ಲಿ ಪರಿಪರಿಯಾಗಿ ಪ್ರಾರ್ಥಿಸಿದ ಗೋವಿಂದ ಕಾರಜೋಳ.
ಇಲ್ಲಿನ ಗ್ರಾನೈಟ್ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಹೋಗಿದೆ. ಕಳೆದ ಮೂರು ವರ್ಷಗಳಲ್ಲಿ ಔದ್ಯೋಗಿಕವಾಗಿ, ಕೃಷಿಗೆ ಪ್ರಸಿದ್ಧವಾಗಿರುವ ಕ್ಷೇತ್ರದ ಸಮಗ್ರ ಅಭಿವೃದ್ಧಿ, ದಾಖಲೆ ಪ್ರಮಾಣದಲ್ಲಿ ಆಗಿದೆ. ಇದಕ್ಕೆ ಕಾರಣ ನಮ್ಮ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬೋಗಸ ಕಾರ್ಡಗಳ ಬಿಡುಗಡೆ ಸರಣಿ ಆರಂಭಿಸಿದೆ. ಈಗಾಗಲೇ ಮೂರನ್ನು ಬಿಟ್ಟಿದೆ ಈಗ ನಾಲ್ಕನೇಯ ಬೋಗಸ್ ಕಾರ್ಡ್ ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.
ಸಿಎಂ ಬೊಮ್ಮಾಯಿ ಶಿಗ್ಗಾಂವ ಕ್ಷೇತ್ರ ಬಿಡ್ತಾರೆ ಎಂಬ ವಿಚಾರ
ಯಾವನ್ ಅವನು ಹೇಳಿದ್ದು ಎಂದ ಸಿಎಂ ಬೊಮ್ಮಾಯಿ
ಯಾವುದೇ ಕಾರಣಕ್ಕೂ ಶಿಗ್ಗಾಂವ ಕ್ಷೇತ್ರ ಬಿಡಲ್ಲ ಎಂದ CM
ಈ ಹಿಂದೆ ಎಂದು ಆಗದ ಅಭಿವೃದ್ಧಿ ಕೆಲಸಗಳು ಇಲ್ಲಿ ಆಗಿವೆ
ಕ್ಷೇತ್ರದ ಜನರ ನಿರಿಕ್ಷೆಗೆ ತಕ್ಕಂತೆ ಎಲ್ಲ ಕೆಲಸ ಮಾಡಿದ್ದೇನೆ
ಸವಣೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ
ರಾಜಸ್ಥಾನದಲ್ಲಿ ಪದವೀಧರರಿಗೆ ಪ್ರತಿ ತಿಂಗಳು ಮಾಶಾಸನ ಕೊಡುತ್ತೇವೆ ಎಂದಿದ್ದರು. ಇದುವರೆಗೂ ಕೊಟ್ಟಿಲ್ಲ. ಛತ್ತೀಸಗಡನಲ್ಲಿ 1500 ರೂಪಾಯಿ ಕೊಡುತ್ತೇವೆಂದರು, ಅದನ್ನು ಕೊಡಲಿಲ್ಲ. ಹೀಗೆ ಅವರು ನಾಲ್ಕು ರಾಜ್ಯಗಳಲ್ಲಿ ಹೇಳಿದ ಹಾಗೇ ಎಲ್ಲಿಯೂ ನಡೆದುಕೊಂಡಿಲ್ಲ. ಅದರ ಪಟ್ಟಿಯನ್ನು ನಾವು ಬಿಡುಗಡೆ ಮಾಡುತ್ತೇವೆ ಎಂದರು.
ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರ ಅನ್ನ ಕಸಿದುಕೊಂಡಿರುವ ಬೈಕ್ ಟ್ಯಾಕ್ಸಿ ವಿರುದ್ಧ ಆಟೋ ಚಾಲಕರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ, ಸಂಬಂಧ ಪಟ್ಟ ಸಚಿವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ರೂ ಯಾರು ಈ ಕಡೆ ಗಮನ ಹರಿಸಿಲ್ಲ.. ಹೀಗಾಗಿ ಕೆಂಡವಾಗಿರೋ ಆಟೋ ಚಾಲಕರು ಇಂದು ಇಡೀ ರಾಜಧಾನಿಯಲ್ಲಿ ಆಟೋ ಸೇವೆಯನ್ನು ಬಂದ್ ಮಾಡಿದ್ದಾರೆ.
Bengaluru Auto Strike: ಅನಧಿಕೃತ ರ್ಯಾಪಿಡೋ ಬೈಕ್ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರು ಆಟೋ ಸೇವೆಯನ್ನು ಬಂದ್ ಮಾಡಿದ್ದಾರೆ. ಇಂದು ಒಂದು ದಿನ ಸಂಪೂರ್ಣ ಆಟೋ ಸಂಚಾರ ಬಂದ್ಗೆ ನಿರ್ಧಾರ ಕೈಗೊಂಡಿರುವ ಆಟೋ ಚಾಲಕರು, ಇಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
Bhadra Upper Bank Project: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.