ಮನ್ಸೂರ್, ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ
ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದ ಮತದಾನ
ಮತದಾನ ಮಾಡಿದ ಮನ್ಸೂರ್ ಅಲಿ ಖಾನ್
ಮನ್ಸೂರ್, ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ
ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly Elections) ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ (BS Yeddyurappa) ಅವರ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಆ ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ- ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ
ಮಂಡ್ಯ ಲೋಕಸಮರ ಅಖಾಡಕ್ಕೆ ಇಂದು ಡಿ.ಬಾಸ್ ಎಂಟ್ರಿ - ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ - ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿಂದು ಪ್ರಚಾರ
ಸ್ಟಾರ್ ಚಂದ್ರು ಪರ ದರ್ಶನ್ ಮತಬೇಟೆ
Chamarajnagar loksabha Constituency congress candidate Sunil bose: ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಗೋ ಬ್ಯಾಕ್ ಅಂಥಾ ಯಾಕೆ ಹಾಕಿದ್ದಾರೆ, ನಾನು ಹೊರಗಿವನಾ? ಎಂದು ಪ್ರಶ್ನಿಸಿದರು.
Lok Sabha Election 2024: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ.
Loksabha Election 2024: ಸಚಿವ ಎಚ್.ಸಿ.ಮಹಾದೇವಪ್ಪ ಕೂಡ ಈ ಹಿಂದೆ 1991 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಈಗ ಪುತ್ರ ಅಪ್ಪನ ಬಳಿಕ ಲೋಕ ಅಖಾಡಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗಿಳಿಯುವುದು ಪಕ್ಕಾ ಆಗಿದೆ.
Loksabha Election 2024: ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಎಂಪಿ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲ್ಲೇ ಬೇಕಾದ ಅನಿವಾರ್ಯತೆ ಇದ್ದು ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.
Congress candidate: ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಬ್ಬರದ ಪ್ರಚಾರಕ್ಕಾಗಿ ಅಭ್ಯರ್ಥಿಗಳು ನಾನಾ ರೀತಿಯ ತಂತ್ರಗಳನ್ನು ಬಳಸುತ್ತಾರೆ.. ಹೀಗೆ ಮಧ್ಯಪ್ರದೇಶದ ರತ್ಲಾಮ್ನ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ವೃದ್ಧರೊಬ್ಬರಿಂದ ಚಪ್ಪಲಿ ಏಟು ತಿಂದಿರುವ ವೀಡಿಯೋ ಸದ್ಯ ಭಾರೀ ವೈರಲ್ ಆಗಿದೆ..
ಚುನಾವಣಾ ಟಿಕೆಟ್: ಚುನಾವಣೆಗೆ ಸ್ಪರ್ಧಿಸಲು ಬಯಸುವ ಅಭ್ಯರ್ಥಿಯು ತನ್ನ ಸಾಮಾಜಿಕ ಮಾಧ್ಯಮದ ಹ್ಯಾಂಡಲ್ ಬಗ್ಗೆ ಮಾಹಿತಿಯನ್ನು ನೀಡಬೇಕು. ಇದರಿಂದ ಪಕ್ಷವು ಆತನ ಹಿನ್ನೆಲೆಯನ್ನು ಪರಿಶೀಲಿಸಬಹುದು. ರಾಜ್ಯ ಚುನಾವಣಾ ಸಮಿತಿಯು ಸೆಪ್ಟೆಂಬರ್ ಮೊದಲ ವಾರದಲ್ಲಿ ಸಭೆ ಸೇರಿ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ನಡೆಸಲಿದೆ.
Karnataka Elections 2023: ಮೂಡುಬಿದಿರೆಯ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನಲ್ಲಿ ಹೋಗುವಾಗ ಬಿಜೆಪಿ ಕಾರ್ಯಕರ್ತರು ಜೋರಾಗಿ ಘೋಷಣೆ ಕೂಗಿದ್ದಾರೆ. ಈ ವೇಳೆ ಮಿಥುನ್ ರೈ ಜೊತೆಗಿದ್ದ ಕಾಂಗ್ರೆಸ್ ಕಾರ್ಯಕರ್ತರೂ ಘೋಷಣೆ ಕೂಗಿದ್ದಾರೆ.
ಕೈ ಅಭ್ಯರ್ಥಿ ಹೋಟೆಲ್ ಮೇಲೆ ಐಟಿ ದಾಳಿ. ಶಿಗ್ಗಾಂವಿ ‘ಕೈ’ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್. ಪಠಾಣ್ ಒಡೆತನದ ಹೋಟೆಲ್ ಮೇಲೆ ಐಟಿ ದಾಳಿ. ಬಂಕಾಪುರ ಟೋಲ್ ಬಳಿ NH 4 ಬಳಿಯ ಹೋಟೆಲ್. ಗ್ರ್ಯಾಂಡ್ ಹೋಟೆಲ್ನಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚಂದ. ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ ಎಂದು ರಾಣೇಬೆನ್ನೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ರು.
ಕಲಘಟಗಿ ಅಳ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸಂತೋಷ್ ಲಾಡ್ ಕಲಘಟಗಿಯ ಕಣ್ಣವಿ ಹೊನ್ನಾಪುರ, ಯರಿಕೊಪ್ಪ ಹಾಗೂ ಗ್ರಾಮಗಳಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದ್ರು. ಹೀರೆ ಮಲ್ಲಿಗವಾಡ ಗ್ರಾಮದಲ್ಲಿ ಬೈಕ್ ರ್ಯಾಲಿ ಮೂಲಕ ಗ್ರಾಮಸ್ಥರು ಸ್ವಾಗತ ಮಾಡಿದರು. ಪಕ್ಷದ ನೂರಾರು ಕಾರ್ಯಕರ್ತರೂ ಲಾಡ್ಗೆ ಸಾಥ್ ನೀಡಿದರು.
ಕೋಟೆನಾಡು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ಅಖಾಡಕ್ಕಿಳಿದ ವೀರೇಂದ್ರ ಪಪ್ಪಿ, ಬಿಜೆಪಿ ಭದ್ರಕೋಟೆ ಬೇಧಿಸಲು ಸತತ ಪ್ರಯತ್ನ ನಡೆಸುತ್ತಿದ್ದಾರೆ. ದಂಡಿನ ಕುರುಬರ ಹಟ್ಟಿ, ದೊಡ್ಡಸಿದ್ದವ್ವನಹಳ್ಳಿ, ತೋಪರ ಮಾಳಿಗೆ, ಬೊಮ್ಮನಹಳ್ಳಿ, ಹಂಪಯ್ಯನ ಮಾಳಿಗೆ, ಕಸವನಹಳ್ಳಿ, ಕ್ಯಾದಿಗೆರೆ ಇತರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ರೋಡ್ ಶೋ, ಪಾದಯಾತ್ರೆ, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿರುವ ವೀರೇಂದ್ರ ಪಪ್ಪಿ, ಮದುವೆ ಮನೆಗಳಲ್ಲೂ ಮತಯಾಚಿಸಿ ಗಮನ ಸೆಳೆದರು.
ಕಲಘಟಗಿ ಹಾಗೂ ಅಳ್ನಾವರ ವಿಧಾನಸಭಾ ಕ್ಷೇತ್ರದ ಮಿಶ್ರಿಕೋಟಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂತೋಷ್ ಲಾಡ್ ಬಿರುಸಿನ ಪ್ರಚಾರ ಕೈಗೊಂಡರು. ನಂತರ ಕಲಕುಂಡಿ ಗ್ರಾಮದ ಗ್ರಾಮಸ್ಥರು ಚಕ್ಕಡಿ ಮೂಲಕ ಲಾಡ್ರನ್ನು ಸ್ವಾಗತಿಸಿದರು. ನನ್ನ ಅಧಿಕಾರಾವಧಿಯಲ್ಲಿ ಕಲಘಟಗಿಯ ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಯಾಗಿದೆ. ಈ ಬಾರಿ ಕ್ಷೇತ್ರದ ಜನ ಅಭಿವೃದ್ಧಿ ಮಾಡಿದವರ ಕೈ ಹಿಡಿಯಲಿದ್ದಾರೆ ಎಂದು ಸಂತೋಷ್ ಲಾಡ್ ಹೇಳಿದ್ರು. ಲಾಡ್ ಅವರ ಜೊತೆ ಸಹಸ್ರಾರು ಕೈ ಕಾರ್ಯಕರ್ತರು ಅಲ್ಲದೇ ವಿಶೇಷವಾಗಿ ಪುತ್ರ ಕರಣ್ ಲಾಡ್ ಪ್ರಚಾರದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಯಾರಬ್ ಬಿಜೆಪಿ ಪ್ರಾಯೋಜಿತ ಅಭ್ಯರ್ಥಿಯಾಗಿದ್ದಾನೆ. ಪಾಕಿಸ್ತಾನ ಧ್ವಜ ಇರುವ ಕರಪತ್ರ ಮುದ್ರಿಸಿ ಅಶಾಂತಿ ನರ್ಮಾಣಕ್ಕೆ ಷಡ್ಯಂತ್ರ. ಯಾರಬ್ ಮುನಿರತ್ನ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾನೆ. ಮುನಿರತ್ನ ಜೊತೆಗೂಡಿ ಯಾರಬ್ ಷಡ್ಯಂತ್ರ ರೂಪಿಸಿದ್ದಾನೆ. ಕಾಂಗ್ರೆಸ್ ನಾಯಕರ ಫೋಟೋ ಜೊತೆಗೆ ಪಾಕಿಸ್ತಾನ ಧ್ವಜ ಮುದ್ರಿಸಿದ್ದಾರೆ. ನನ್ನ ವಿರುದ್ಧ ಕೋಮು ಪ್ರಚೋದನೆ ಮೂಡಿಸುವ ಕೆಲಸ ಮಾಡ್ತಿದ್ದಾರೆ ಎಂದು ಆರ್.ಆರ್ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಆರೋಪಿಸಿದ್ದಾರೆ.
ಅಭಿವೃದ್ದಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಜಿ ಹೋಮ್ ಮಿನಿಸ್ಟರ್ ರಾಂಗ್.ಕಾಂಗ್ರೆಸ್ ಹಿರಿಯ ನಾಯಕನಿಂದ ಕಾರ್ಯಕರ್ತನ ಮೇಲೆ ʻಕೈʼಕೋಪ. ಏನ್ ಕೆಲಸ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಕಪಾಳಮೋಕ್ಷ. ಯುವಕನಿಗೆ ಮಾಜಿ ಗೃಹ ಸಚಿವ ಎಂಬಿ ಪಾಟೀಲ್ ಕಪಾಳ ಮೋಕ್ಷ. ನಿನ್ನೆ ತಡರಾತ್ರಿ ಪ್ರಚಾರಕ್ಕೆ ತೆರಳಿದ್ದಾಗ ದೇವಾಪೂರ ಗ್ರಾಮದಲ್ಲಿ ಘಟನೆ. ಬಬಲೇಶ್ವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂಬಿ ಪಾಟೀಲ್. ಪ್ರಚಾರಕ್ಕೆ ತೆರಳಿದ್ದಾಗ ಬಬಲೇಶ್ವರದಲ್ಲಿ MBP ದರ್ಪ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.