ಗ್ಯಾರಂಟಿ ಹೊರೆಯಿಂದ ಕಾಂಗ್ರೆಸ್ ಶಾಸಕರಿಗೆ ಅನುದಾನ ಸಿಗುತ್ತಿಲ್ಲವಾ?. ಕಾಂಗ್ರೆಸ್ ಸರ್ಕಾರದಲ್ಲಿ ದುಡ್ಡು ಇಲ್ವಾ....? ಯಾಕಿಷ್ಟು ಗೊಂದಲ?. ಗ್ಯಾರಂಟಿ ಹೊರೆ ಬಗ್ಗೆ ಕಾಂಗ್ರೆಸ್ನ ಮತ್ತೊಬ್ಬ ಶಾಸಕ ಅಸಮಾಧಾನ.
Tipu Sultan Controversy: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಪ್ಪು ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಸರ್ಕಾರದ ಮೇಲೆ ಸಾಕಷ್ಟು ಹೊರ ಆಗುತ್ತಿದ್ದರೂ, ರಾಜ್ಯದ ಜನಸಾಮಾನ್ಯರ ಹೊರೆ ಇಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Chattisgarh: ಛತ್ತೀಸ್ಗಢದ ಕಾಂಗ್ರೆಸ್ ಶಾಸಕಿ ಅನಿತಾ ಶರ್ಮಾ ಅವರು 'ಹಿಂದೂ ರಾಷ್ಟ್ರ' ರಚಿಸಲು ಜನರು ಒಂದಾಗಬೇಕು ಎಂದು ಶುಕ್ರವಾರ ಕರೆ ನೀಡಿದ್ದಾರೆ. ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಒತ್ತು ನೀಡಿದ ಅವರು, ಇದಕ್ಕಾಗಿ ಎಲ್ಲಾ ಹಿಂದೂಗಳು ಮುಂದೆ ಬರುವಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.
ಯೂತ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಪಟೇಲ್ ಮತ್ತು ಇತರ 6 ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 353 (ಹಲ್ಲೆ), 427 (50 ರೂ. ಮೇಲ್ಪಟ್ಟು ನಷ್ಟ ಉಂಟು ಮಾಡಿದ ಕಿಡಿಗೇಡಿತನ), 447 (ಅಪರಾಧ ಅತಿಕ್ರಮಣ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿ ಪ್ರಕರಣ ದಾಖಲಿಸಲಾಗಿದೆ.
ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಮೈದಾನದಲ್ಲಿ ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ 'ಅಭಿಮಾನದ ಕಾರ್ಯಕರ್ತರ ಸಮಾವೇಶ' ಹೆಸರಿನಲ್ಲಿ ಅದ್ಧೂರಿ ಸಮಾವೇಶ ಕಾರ್ಯಕ್ರಮವೊಂದನ್ನು ಈ ಕಾರ್ಯಕ್ರಮವು ಆಯೋಜನೆ ಮಾಡಲಾಗಿತ್ತು.
ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಪುತ್ರ, ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸುಳಿವು ಬಿಟ್ಟುಕೊಟ್ಟಿದ್ದಾರೆ, ಸಿದ್ದರಾಮಯ್ಯ ಅವರು ವರುಣದಿಂದ ಸ್ಪರ್ಧೆ ಮಾಡ್ತಾರೆ ಎಂದು ಸಾಕಷ್ಟು ಜನ ಕೇಳಿದ್ದಾರೆ ಎಂದು ಹೇಳಿದರು.
ಮಾತ್ನಾಡುವ ಬರದಲ್ಲಿ ಸ್ಲಿಪ್ ಆಫ್ ಟಂಗ್ ಆಗುತ್ತೆ.. ಆದ್ರೆ ಅದಕ್ಕೊಂದು ಇತಿ ಮಿತಿ ಇರ್ಬೇಕು. ಇವತ್ತು ಸರ್ಕಾರಿ ನೌಕರಿಯಲ್ಲಿರುವ ಹೆಣ್ಣು ಮಗಳು ಬಗ್ಗೆ ಹಗುರವಾಗಿ ಮಾತ್ನಾಡೋದು ಎಷ್ಟು ಸರಿ ಎಂದು ಸಚಿವ ಸಿಸಿ ಪಾಟೀಲ್ ಅವರು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಶಾಸಕರೇ ಸಿದ್ದರಾಮಯ್ಯ ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಸಚಿವ ಡಾ. ಸುಧಾಕರ್ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಳೆದ 40 ವರ್ಷದಿಂದ ರಾಜಕಾರಣದಲ್ಲಿದ್ದಾರೆ. ಅವರಿಗೆ ಸ್ಪರ್ದೆ ಮಾಡಲು ಅವರ ಕ್ಷೇತ್ರ ಇಲ್ವಾ..?. ಕೆಲ ಕಾಂಗ್ರೆಸ್ ನಾಯಕರು ನಮ್ಮ ಕ್ಷೇತ್ರಕ್ಕೆ ಬಂದು ಸ್ಪರ್ದೆ ಮಾಡುವಂತೆ ಕೇಳಿ ಅವರಿಗೆ ಅವಮಾನ ಮಾಡುತ್ತಿದ್ದಾರೆ ಎಂದಿದ್ದಾರೆ.
ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ಗೆ ಬಿಜೆಪಿ ಶಾಸಕರು ಸೇರಿ ಕೇಸರಿ ಶಾಲು ಹಾಕಿದ್ದಾರೆ. ರಾಜುಗೌಡ ಮತ್ತು ರೇಣುಕಾಚಾರ್ಯ ಸೇರಿ 2 ಕೇಸರಿ ಶಾಲು ಹಾಕಿದ್ದಾರೆ. ಕೇಸರಿ ಶಾಲು ತೆಗೆಯಲು ಬಿಡದೇ ಎಳೆದಾಡಿದ್ದಾರೆ. ಈ ವೇಳೆ ಬೈರತಿ ಸುರೇಶ್, ಅಶೋಕ್ ಅಣ್ಣ ನೋಡಿ ಬಲವಂತವಾಗಿ ನನಗೆ ಕೇಸರಿ ಶಾಲು ಹಾಕ್ತಿದ್ದಾರೆ ಎಂದು ಕೂಗಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.