ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಭಾನುವಾರ ಮಾಜಿ ಸಂಸದ ಹಾಗೂ ಉದ್ಯಮಿ ನವೀನ್ ಜಿಂದಾಲ್ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಳಿಕ ಬಿಜೆಪಿ ಸೇರಿದ್ದಾರೆ. ಈ ಮಾಹಿತಿಯನ್ನು ನವೀನ್ ಜಿಂದಾಲ್ ಟ್ವೀಟ್ ಮಾಡಿದ್ದಾರೆ.
Lok Sabha Election 2024: ಲೋಕಸಭಾ ಚುನಾವಣೆಯಲ್ಲಿ ಸತತ ಐದನೆಯ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿರುವ ಸಂಸದ ಪಿಸಿ ಗದ್ದಿಗೌಡರ್ ಪ್ರತಿನಿಧಿಸುವ ಬಾಗಲಕೋಟೆ ಲೋಕಸಭಾ ಕ್ಷೇತ್ರ ಕಾವೇರಿದೆ. ಕಳೆದ ಆರೇಳು ದಿನದಿಂದ ಚುನಾವಣಾ ಕಾವು ಕೂಡ ಏರುತ್ತಿದೆ.
Lok Sabha Elections 2024 : ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯವರು ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ಪರವಾಗಿ ಯಾವುದೇ ಅಲೆ ಇಲ್ಲ.ನಾವು ನಮ್ಮ ಊರುಗಳ ಬಡ ದೇವಾಲಯಗಳ ಅಭಿವೃದ್ಧಿಗೆ ಕಾನೂನು ತಂದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಈ ಕಾನೂನನ್ನು ಪರಿಷತ್ ನಲ್ಲಿ ಮಣಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಾ ಪ್ರಹಾರ ನಡೆಸಿದ್ದಾರೆ.
ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಿದೆ.ಕಾಂಗ್ರೆಸ್ ಈ ಬಗ್ಗೆ ದಂದ್ವ ನಿಲುವು ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಒಟ್ಟು 57 ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ ಕಾಂಗ್ರೆಸ್
ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಚಿಕ್ಕೋಡಿಯಿಂದ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್
ಸಂಯುಕ್ತ ಪಾಟೀಲ್ಗೆ ಒಲಿದ ಲೋಕಸಭಾ ಟಿಕೆಟ್
ಕುಮಾರಸ್ವಾಮಿ ನನಗೆ ವೈಯುಕ್ತಿಕವಾಗಿ ಸ್ನೇಹಿತರು
ನಾನು ಯಾವತ್ತು ಅವರನ್ನ ವೈರಿಗಳ ತರ ನೋಡಿಲ್ಲ
ಮೇಲುಕೋಟೆಯಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿಕೆ
ನಮ್ಮ ಅಭ್ಯರ್ಥಿ ಪರ ದುಡಿಯುವುದು ನಮ್ಮ ಕರ್ತವ್ಯ
ಕೈ ನಾಯಕರಲ್ಲಿ ಅಸಮಾಧಾನ ಸ್ಫೋಟ- ಇಂದು ಸುರ್ಜೇವಾಲಾ ನೇತೃತ್ವದಲ್ಲಿ ಮೀಟಿಂಗ್- ಬಂಡಾಯ ನಾಯಕರ ಮನವೊಲಿಕೆ ಸಾಧ್ಯತೆ
ಸ್ಥಳೀಯ ನಾಯಕರ ನಡುವೆ ಘರ್ಷಣೆ ಹಿನ್ನೆಲೆ
ರಾಜ್ಯದ ಇನ್ನೂ 4 ಕ್ಷೇತ್ರಗಳ ಟಿಕೆಟ್ ಪೆಂಡಿಂಗ್
ಇಂದು ಸುರ್ಜೇವಾಲಾ ನೇತೃತ್ವದಲ್ಲಿ ಮೀಟಿಂಗ್
ಸಭೆಯಲ್ಲಿ ಅಸಮಾಧಾನಿತರ ಮನವೊಲಿಕೆ ಸಾಧ್ಯತೆ
ನಂತರ ನಾಲ್ಕು ಕ್ಷೇತ್ರಗಳ ಟಿಕೆಟ್ ಘೋಷಣೆ
Loksabha Election 2024: ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಎಂಪಿ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲ್ಲೇ ಬೇಕಾದ ಅನಿವಾರ್ಯತೆ ಇದ್ದು ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.
Lok Sabha Election 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣೆ ಸಂಬಂಧದ ಸಿದ್ದತೆಗಳನ್ನು ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಡ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಸಹ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.