ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರದ ಆಗಮನದ ಹೊರತಾಗಿ, ರಾಜ್ಯದ ಶಿಕ್ಷಣ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯ COVID-19 ಪ್ರಕರಣಗಳು ವರದಿಯಾಗುತ್ತಿವೆ.ಇದು ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಮೂರನೇ ಅಲೆಯ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನು ಹುಟ್ಟುಹಾಕಿದೆ.
Coronavirus In Karnataka - ಬೆಂಗಳೂರಿನ ನರ್ಸಿಂಗ್ ಕಾಲೇಜೊಂದರ 12 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು (Corona Positive) ದೃಢಪಟ್ಟಿದ್ದು, ಈ ಪೈಕಿ 11 ಮಂದಿಗೆ ಎರಡೂ ಡೋಸ್ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 9 ಮಂದಿಯಲ್ಲಿ ಮಾತ್ರ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಹೇಳಲಾಗುತ್ತಿದೆ.
ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಕಳೆದ ಎರಡು ದಿನಗಳಿಂದ 182 ಜನರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕ ಸರ್ಕಾರವು ಶುಕ್ರವಾರದಂದು 40 ಕ್ಕೂ ಹೆಚ್ಚು ಅತಿಥಿಗಳನ್ನು ಒಳಗೊಂಡ ಛತ್ರಗಳು, ಹೋಟೆಲ್ಗಳು, ರೆಸಾರ್ಟ್ಗಳು ಮತ್ತು ಫಂಕ್ಷನ್ ಹಾಲ್ಗಳಲ್ಲಿ ವಿವಾಹ ಕಾರ್ಯಗಳನ್ನು ನಡೆಸಲು ಅನುಮತಿ ನೀಡಿತು.
ಗ್ರಾಮೀಣ ಪ್ರದೇಶದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈಗ ರಾಜ್ಯದಲ್ಲಿ ಜೂನ್ 14 ರವರೆಗೆ ಲಾಕ್ ಡೌನ್ ನ್ನು ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ರಾಜ್ಯದಲ್ಲಿರುವ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕೆಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಕೊರೋನಾದ ಮೂರನೇ ಸಂಭವನೀಯ ಅಲೆಯನ್ನು ಎದುರಿಸಲು ಕ್ರಿಯಾ ಯೋಜನೆ ಹಾಗೂ ಸಮಸ್ಯೆ ನಿವಾರಣೆಗೆ ದೃಷ್ಟಿಕೋನವನ್ನು ಹೊಂದಿರುವ ದಾಖಲೆಯನ್ನು ಎರಡು ವಾರಗಳಲ್ಲಿ ಸಿದ್ಧಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
COVID-19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಕರ್ನಾಟಕ ಎರಡು ವಾರಗಳ ಲಾಕ್ಡೌನ್ ಘೋಷಿಸಿದೆ. ಇಂದು ಹೊರಡಿಸಿದ ಆದೇಶದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಮೇ 10 ರಂದು ಬೆಳಿಗ್ಗೆ 6 ರಿಂದ ಮೇ 25 ರವರೆಗೆ ಲಾಕ್ ಡೌನ್ ಆಗಲಿದೆ ಎಂದು ಹೇಳಿದರು.
ಕರ್ನಾಟಕವು ಮೊದಲ ಬಾರಿಗೆ 50,000 ಕ್ಕೂ ಹೆಚ್ಚು ಹೊಸ ಕರೋನವೈರಸ್ ಪ್ರಕರಣಗಳನ್ನು ಬುಧವಾರ ವರದಿ ಮಾಡಿದೆ,ಅವುಗಳಲ್ಲಿ ಅರ್ಧದಷ್ಟು ರಾಜಧಾನಿ ಬೆಂಗಳೂರಿನಲ್ಲಿವೆ.ಕಳೆದ ಕೆಲವು ವಾರಗಳಲ್ಲಿ ರಾಜ್ಯವು ತೀವ್ರ ಸ್ವರೂಪದಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿದೆ.
Covid-19 in Karnataka: ಮೃತಪಟ್ಟ 270 ಜನರಲ್ಲಿ, 92 ಜನರು ಪರೀಕ್ಷೆಯ ಸಮಯದಲ್ಲಿ ಯಾವುದೇ ಗಂಭೀರ ಕಾಯಿಲೆಯ ಬಗ್ಗೆ ದೂರು ನೀಡಿರಲಿಲ್ಲ ಮತ್ತು ಅವರಲ್ಲಿ 38 ಮಂದಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನರಾಗಿದ್ದರು.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 39,047 ಕೊರೊನಾ ಪ್ರಕರಣಗಳೊಂದಿಗೆ ಹೊಸ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ,ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 14.39 ಲಕ್ಷಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಇನ್ನೊಂದೆಡೆಗೆ ಬೆಂಗಳೂರಿನಲ್ಲಿ ಒಟ್ಟು 22, 596 ಪ್ರಕರಣಗಳು ಕಳೆದ 22 ಗಂಟೆಗಳಲ್ಲಿ ದಾಖಲಾಗಿವೆ.
ಕೊರೊನಾ ಎರಡನೆ ಅಲೆಯ ಭೀಕರತೆ ಮತ್ತು ಸಿದ್ಧತೆ ಕುರಿತು ರಾಜ್ಯದ ತಜ್ಞರ ಸಮಿತಿ 2020ರ ನವೆಂಬರ್ 30 ರಂದೇ ಸರ್ಕಾರಕ್ಕೆ ವರದಿ ನೀಡಿತ್ತು. ಈ ವರದಿಯನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳದಿರುವುದೇ ಇಷ್ಟೆಲ್ಲಾ ಸಾವು, ನೋವು, ಸಂಕಟ, ಕಣ್ಣೀರಿಗೆ ಕಾರಣವಾಗಿದೆ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ಪಿಹೆಚ್ಎಎಫ್ಐ ಲೈಫ್ ಕೇರ್ ಮತ್ತು ಎಪಿಡೊಮಲೋಜಿ ತಜ್ಞ ಡಾ. ಗಿರಿಧರ ಬಾಬು ಪ್ರಕಾರ, ಕರೋನಾ (Coronavirus) ರಕ್ಕಸನನ್ನು ನಿಯಂತ್ರಿಸಲು ಫುಲ್ ಲಾಕ್ ಡೌನ್ ಏಕಮಾತ್ರ ಆಯ್ಕೆ ಅಲ್ಲ.
ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಂಗಳವಾರದಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು ವಾರಾಂತ್ಯದ ಕರ್ಪ್ಯೂ ಘೋಷನೆಯನ್ನು ಮಾಡಿದೆ.
ಹೋಳಿ ಹಬ್ಬಕ್ಕೂ ಮುಂಚೆ ದೇಶದೆಲ್ಲೆಡೆ ಕೊರೊನಾ ಪ್ರಕರಣಗಳ ಹೆಚ್ಚಳ ಸಾಕಷ್ಟು ಚಿಂತೆಗಿಡುವಂತೆ ಮಾಡಿದೆ.ಈಗಾಗಲೇ ಹಲವು ರಾಜ್ಯಗಳು ಕೊರೊನಾ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿವೆ.ದೆಹಲಿ, ಮಹಾರಾಷ್ಟ್ರ, ಪಂಜಾಬ್, ಕೇರಳ, ಕರ್ನಾಟಕ ಛತ್ತೀಸ್ಗಡ ಮತ್ತು ಗುಜರಾತ್ನಲ್ಲಿ ಕರೋನಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ.
ಬೆಂಗಳೂರು ಒಂದರಲ್ಲೇ 1,000ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಈ ಮಧ್ಯೆ ರಾಜ್ಯಾದ್ಯಂತ ಹಬ್ಬ, ಜಾತ್ರೆ, ಉತ್ಸವಗಳಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.