ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅರವಿಂದ ಬೆಲ್ಲದ ಅವರು, ಇಂದು ಸಂಜೆ ವಿಧಾನಸಭೆಯಲ್ಲಿ ಗಮನ ಸೆಳೆಯುವ ಪ್ರಶ್ನೆ ಕೇಳಿ, ಧಾರವಾಡ ಮಹಾನಗರ ಪಾಲಿಕೆ ರಚನೆಗಾಗಿ ಅಗತ್ಯವಿರುವ ಎಲ್ಲಾ ಮಾನದಂಡಗಳು ಪೂರ್ಣವಾಗಿದ್ದು, ಮಹಾನಗರ ಪಾಲಿಕೆ ರಚನೆಗೆ ಕ್ರಮವಹಿಸಿ ಆದೇಶ ಹೊರಡಿಸಬೇಕೆಂದು ನಗರಾಭಿವೃದ್ಧಿ ಸಚಿವರಲ್ಲಿ ಗಮನ ಸೆಳೆದರು.
Hubli-Dharwad : ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ವಾರ್ಡ್ ಸಮಿತಿ ರಚನೆ ಕಗ್ಗಂಟಾಗಿಯೇ ಉಳಿದಿದೆ. ಮೂರು ವರ್ಷಗಳಿಂದ ವಾರ್ಡ್ ಸಮಿತಿ ರಚಿಸುವಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದೆ.
DK Shivakumar challenges BJP: ಸದಾಶಿವನಗರ ನಿವಾಸದ ಬಳಿ ಮಾತಾನಾಡಿದ ಅವರು, “ಸೋಲಿನ ಭೀತಿ ಅವರಿಗಿದೆ. ಜಿಲ್ಲಾ ಪಂಚಾಯತ್, ತಾ.ಪಂ ಎಲೆಕ್ಷನ್ ಮಾಡಲಿ. ಜನ ಏನು ಹೇಳ್ತಾರೆ ಎಂದು ನೋಡೋಣ. ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಯಾರು ತೆಗೆಯಲು ಆಗಲ್ಲ. ಕೆಲವರು ಪ್ರಧಾನ ಮಂತ್ರಿ ಹೋದ್ರೆ ದೇಶಾನೇ ಬದಲಾವಣೆ ಆಗುತ್ತೆ ಎಂದು ಹೇಳ್ತಾರೆ.
ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ಚಾಮರಾಜಪೇಟೆ, ಟ್ರಿನಿಟಿ, MG ರೋಡ್, ಬಿಟಿಎಂ ಲೇಔಟ್, ಹೆಚ್ಎಸ್ಆರ್ ಲೇಔಟ್ ಸೇರಿದಂತೆ ಎಲ್ಲೆಡೆ ಭಾರೀ ಮಳೆಯಾಗಿದೆ..
ಶಿವಾನಂದ ಸರ್ಕಲ್ ನಲ್ಲಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ ಪಾಲಿಕೆ ಎಡವಟ್ಟು:
ಅದು ಸುಮಾರು 5 ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿ. ಕೋರ್ಟ್ ಕಟಕಟೆಯಲ್ಲಿ ಪ್ರಕರಣ ನಡೆಯುತ್ತಿತ್ತು. ಇತ್ತೀಚೆಗಷ್ಟೇ ಎಲ್ಲಾ ಇತ್ಯರ್ಥಗೊಂಡು ವಾಹನ ಓಡಾಟಕ್ಕೆ ಅವಕಾಶ ಮಾಡಿಕೊಡುವ ಪ್ರಸಂಗ ಎದುರಾಗಿತ್ತು. ಅಂತೆಯೇ ಪಾಲಿಕೆ ಕೂಡ ಕಾಮಗಾರಿ ಮುಗಿಸಿ ಟೆಸ್ಟಿಂಗ್ ಗೆ ಅಂತ ಫ್ಲೈ ಓವರ್ ಓಪನ್ ಮಾಡಿ ಕೊಟ್ಟಿತ್ತು. ಆದರೆ ಓಪನ್ ಆಗಿ ವಾರದಲ್ಲೇ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಟೀಲ್ ಬ್ರಿಡ್ಜ್ ವಾಹನ ಓಡಾಟಕ್ಕೆ ಯೋಗ್ಯವಲ್ಲಾ ಎಂಬ ಆರೋಪ ಕೇಳಿ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.