ಉತ್ತರ ಕಾಶ್ಮೀರದ ಹಂಡ್ವಾರಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮುಖಾಮುಖಿಯಾಗಿದ್ದು, ಇದರಲ್ಲಿ ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಗಳಿಂದ ಹತರಾಗಿದ್ದಾರೆ. ಇದಕ್ಕೂ ಮೊದಲು ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು.
CRPF Paramedical Staff Vacancy 2020: ಕೇಂದ್ರ ಮೀಸಲು ಪೋಲೀಸ್ ಪಡೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿಗೆ ಸೇರಿದ ಸುಮಾರು 800 ಅರೆ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದರ ಅಡಿಯಲ್ಲಿ ಇನ್ಸ್ಪೆಕ್ಟರ್, ಸಬ್-ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗಾಗಿ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಮೂವರು ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಈಶಾನ್ಯ ದೆಹಲಿಯಲ್ಲಿನ ಗಲಭೆಗಳನ್ನು ನಿಯಂತ್ರಿಸಲು ದೆಹಲಿ ಪೊಲೀಸ್ ವಿಫಲವಾದ ಕಾರಣ, ಸರ್ಕಾರವು ತಕ್ಷಣವೇ 1985 ರ ಬ್ಯಾಚ್ ಐಪಿಎಸ್ ಅಧಿಕಾರಿ - ಎಸ್ ಎನ್ ಶ್ರೀವಾಸ್ತವನನ್ನು ಸಿಆರ್ಪಿಎಫ್ ನಿಂದ ದೆಹಲಿ ಪೊಲೀಸರಿಗೆ ವಾಪಸ್ ಕಳುಹಿಸಿತು ಮತ್ತು ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ದೆಹಲಿ ವಿಶೇಷ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿತು
ಶ್ರೀನಗರದ ಕಾರ್ಯನಿರತ ಲಾಲ್ ಚೌಕ್ ಪ್ರದೇಶದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಗಸ್ತು ತಿರುಗುತ್ತಿದ್ದ ವೇಳೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದರಿಂದಾಗಿ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಧಿ ಕುಟುಂಬದ ಸಮರ್ಪಕ ರಕ್ಷಣೆಗಾಗಿ ಸಿಆರ್ಪಿಎಫ್ 6 ಕಂಪನಿಗಳನ್ನು ನಿಯೋಜಿಸಿದೆ, ಆದರೆ ಸಿಆರ್ಪಿಎಫ್ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಅವರಲ್ಲಿ ಹೆಚ್ಚು ಬುಲೆಟ್ ಪ್ರೂಫ್ ಕಾರು ಇಲ್ಲದಿರುವುದು.
ಜಾರ್ಖಂಡ್ನ ಖುಂಟಿ ಜಿಲ್ಲೆಯ ಗಡಿ ಪ್ರದೇಶದ ಬಳಿ ಗುಡ್ರಿಯ ಥೋಲ್ಕೊಬೆರಾದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದ ಎನ್ಕೌಂಟರ್ನಲ್ಲಿ ಓರ್ವ ನಕ್ಸಲ್ನನ್ನು ಗುಂಡಿಕ್ಕಿ ಕೊಲ್ಲಲಾಯಿತು.
ಭೂಕುಸಿತದಿಂದಾಗಿ ಮಣ್ಣಿನ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಲು ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಸೇನೆಯ ಜಂಟಿ ತಂಡವು "ಎಚ್ಚರಿಕೆಯಿಂದ ಉತ್ಖನನ" ನಡೆಸಿದೆ ಸಿಆರ್ಪಿಎಫ್ ಸಿಬ್ಬಂದಿ ತಿಳಿಸಿದ್ದಾರೆ.
ಅನಂತ್ನಾಗ್ ನಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ದಾಳಿಯಲ್ಲಿ ಭಯೋತ್ಪಾದಕರು ಚೀನಾದಲ್ಲಿ ತಯಾರಾದ ಉಕ್ಕಿನ ಬುಲೆಟ್ ಗಳನ್ನು ಬಳಸಿದ್ದಾರೆ ಎಂಬ ಆಘಾತಕಾರಿ ಅಂಶವೊಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೆ.ಪಿ ರಸ್ತೆಯಲ್ಲಿ ಬುಧುವಾರ ಸಂಜೆ ಉಗ್ರರ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸೈನಿಕರು ಮೃತಪಟ್ಟಿದ್ದಾರೆ .ಜಮ್ಮು ಮತ್ತು ಕಾಶ್ಮೀರ ಸ್ಟೇಶನ್ ಹೌಸ್ ಆಫೀಸರ್ (ಎಸ್ಒಒ), ಸಿಆರ್ಪಿಎಫ್ ಜವಾನ್ ಮತ್ತು ಸ್ಥಳೀಯ ಮಹಿಳೆ ಸೇರಿದಂತೆ ಮೂವರು ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಕೇಂದ್ರ ರಿಸರ್ವ್ ಪೊಲೀಸ್, ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಮತ್ತು ಸಶಸ್ತ್ರ ಪೊಲೀಸ್ ಪಡೆಗಳ ಹೆಚ್ಚುವರಿ ಕಂಪನಿಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗುತ್ತಿದೆ.
ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಸುಮಾರು 40 ಸಿಆರ್ಪಿಎಫ್ ಸೈನಿಕರು ಮೃತಪಟ್ಟ ಹಿನ್ನಲೆಯಲ್ಲಿ ಈಗ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈಗ ಭಯೋತ್ಪಾದಕರು ಹಾಗೂ ಅವರ ಬೆಂಬಲಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆನ್ನುವ ಕೂಗು ಸಹ ದೇಶದೆಲ್ಲೆಡೆ ವ್ಯಕ್ತವಾಗಿದೆ.
ಪುಲ್ವಾಮಾ ಉಗ್ರರ ದಾಳಿಯ ವಿಚಾರವಾಗಿ ಭಾರತದಲ್ಲಿ ಪಾಕ್ ನಡೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು ಈ ಬೆನ್ನಲ್ಲೇ ಈಗ ಪಾಕಿಸ್ತಾನ ಭಾರತದಲ್ಲಿನ ತನ್ನ ಹೈಕಮಿಷನರ್ ಗೆ ಪಾಕ್ ಗೆ ವಾಪಸ್ ಬರುವಂತೆ ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.