ಚಂಡಮಾರುತಕ್ಕೆ ತತ್ತರಿಸಿಹೋದ ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಂದು ಸಾವಿರ ಕೋಟಿ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ನೀಡುವಲ್ಲಿ ಒಟ್ಟಾಗಿ ಕಾರ್ಯನಿರ್ವಹಿಸಲಿವೆ ಎಂದಿದ್ದಾರೆ. ಇದೆ ವೇಳೆ ನೈಸರ್ಗಿಕ ವಿಪತ್ತಿನ ಈ ಪರಿಸ್ಥಿತಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೈಗೊಂಡ ಕ್ರಮಗಳನ್ನು ಅವರು ಶ್ಲಾಘಿಸಿದ್ದಾರೆ.
ಅಂಫಾನ್ ಚಂಡಮಾರುತ ಅಪ್ಪಳಿಸಲಿದೆ ಎಂಬ ಸುಳಿವಿನ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾ ರಾಜ್ಯಗಳಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸಲಾಗಿತ್ತು. ಲಕ್ಷಾಂತರ ಜನರನ್ನು ಬಂಗಾಳಕೊಲ್ಲಿಯ ಕಿನಾರೆಯಿಂದ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿತ್ತು.
ಹವಾಮಾನ ಇಲಾಖೆಯು ಮುಂದಿನ 6 ಗಂಟೆಗಳಲ್ಲಿ ಇನ್ನೂ ಹೆಚ್ಚು ಅಪಾಯಕಾರಿ ಚಂಡಮಾರುತದ ಮುನ್ಸೂಚನೆ ನೀಡಿದೆ. ಚಂಡಮಾರುತವನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವೂ ಎಚ್ಚರಿಕೆ ನೀಡಿದೆ.
ಭಾರಿ ಚಂಡಮಾರುತದ ಹಿನ್ನೆಲೆ ಪಶ್ಚಿಮ ಬಂಗಾಳ ಹಾಗೂ ಕರಾವಳಿ ತೀರದಲ್ಲಿ ಹೈ ಅಲರ್ಟ್ ಜಾರಿಗೊಳಿಸಲಾಗಿದೆ. ಓಡಿಷಾ, ಚತ್ತೀಸ್ಗಡ, ಬಂಗಾಳ ಹಾಗೂ ಆಂಧ್ರ ಪ್ರದೇಶದ ಕರಾವಳಿ ತೀರದ ಅನರಿಗೆ ಅಲರ್ಟ್ ಜಾರಿಗೊಳಿಸಲಾಗಿದೆ.
ಕೋಸ್ಟ್ ಗಾರ್ಡ್, ನೌಕಾಪಡೆ, ಸೈನ್ಯ ಮತ್ತು ವಾಯುಪಡೆಗಳ ಘಟಕಗಳು ಜನಸಾಮಾನ್ಯರ ರಕ್ಷಣೆಗೆ ಸಿದ್ಧವಾಗಿರುತ್ತವೆ ಮತ್ತು ವಿಮಾನ ಮತ್ತು ಹೆಲಿಕಾಪ್ಟರ್ಗಳ ಸಹಾಯದಿಂದ ಏರ್ ಕಣ್ಗಾವಲು ಮಾಡಲಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಮಂಗಳವಾರದಂದು ಫನಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಈಗ ಗೃಹ ಸಚಿವಾಲಯ ಹಾಗೂ ವಿಪತ್ತು ನಿರ್ವಹಣಾ ಪಡೆ ಮೀನುಗಾರಿಗೆ ಹಾಗೂ ಸಮುದ್ರ ತೀರದಲ್ಲಿ ವಾಸಿಸುವ ಜನರಿಗೆ ಮುನ್ನೆಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.