Bharat Bandh by Farmers: ಹೊಸ ಕೃಷಿ ಕಾನೂನುಗಳಿಗೆ (New Agriculture Laws) ವಿರುದ್ಧವಾಗಿ ಮಾರ್ಚ್ 26 ರಂದು ಭಾರತ್ ಬಂದ್ ಸಮಯದಲ್ಲಿ ರಸ್ತೆ ಮತ್ತು ರೈಲು ಸಾರಿಗೆ, ಮಾರುಕಟ್ಟೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲಾಗುವುದು.
ಕೇಂದ್ರ ಸರ್ಕಾರ ಅವಸರದಲ್ಲಿ ಕೃಷಿ ಬಿಲ್ ಗಳನ್ನು ಪಾಸ್ ಮಾಡಬಾರದಿತ್ತು. ಕೃಷಿ ಕಾನೂನುಗಳ ಬಗ್ಗೆ ಇನ್ನೂ ಎರಡ್ಮೂರು ತಿಂಗಳ ಕಾಲಾವಕಾಶ ತಗೊಳ್ಳಿ. ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಿ- ಎಚ್.ಡಿ. ದೇವೇಗೌಡ
ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು 3 ಗಂಟೆಗಳ ರಾಷ್ಟ್ರವ್ಯಾಪಿ ಚಕ್ಕಾ ಜಾಮ್ಗೆ ಕರೆ ನೀಡಿದ್ದಾರೆ. ಚಕ್ಕಾ ಜಾಮ್ನಲ್ಲಿ ಹಿಂಸಾಚಾರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ಸೇರಿದಂತೆ ವಿವಿಧ ರಾಜ್ಯಗಳ ಪೊಲೀಸರು ಭಾರೀ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಈ ಪ್ರತಿಭಟನಾತ್ಮಕ ಟ್ರ್ಯಾಕ್ಟರ್ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ರೈತ ಸಂಘಟನೆಗಳು ಭಾಗವಹಿಸುತ್ತಿದ್ದು ಎಲ್ಲಾ ಸಂಘಟನೆಗಳಿಗೂ ಭಿನ್ನ ಭಿನ್ನವಾದ ಸ್ತಬ್ಧಚಿತ್ರಗಳನ್ನು ರೂಪಿಸುವಂತೆ ಸೂಚಿಸಲಾಗಿದೆ. ದೇಶದೆಲ್ಲೆಡೆಯಿಂದ ಸುಮಾರು ಒಂದು ಲಕ್ಷ ಟ್ರ್ಯಾಕ್ಟರ್-ಟ್ರಾಲಿಗಳು ಭಾಗವಹಿಸಲಿವೆ.
ಮುಂದಿನ ಮಾತುಕತೆಯಲ್ಲಿ ರೈತ ಸಂಘಟನೆಯ ಪ್ರತಿನಿಧಿಗಳು ಪರ್ಯಾಯ ಮಾರ್ಗ ಹುಡುಕಬಹುದು, ಅದರಿಂದ ಪರಿಹಾರ ಸಿಗಬಹುದು ಎಂಬ ಭಾವನೆ ಇದೆ ಎಂದು ನರೇಂದ್ರ ಸಿಂಗ್ ಥೋಮರ್ ಹೇಳಿದರು. ಈ ಮುಖಾಂತರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಹಠಮಾರಿತನ ಮುಂದುವರೆಸುತ್ತದೆ ಎಂಬುದನ್ನು ಒಪ್ಪಿಕೊಂಡರು.
ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ 7ನೇ ಸುತ್ತಿನ ಸಭೆ ನಡೆಯುವ ಮೊದಲೇ ರೈತರು 'ಮಾತುಕತೆ ಫಲಪ್ರದವಾಗದಿದ್ದರೆ, ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು' ಎಂಬ ಎಚ್ಚರಿಕೆ ನೀಡಿದ್ದರು. ಈಗ ಪ್ರತಿಭಟನೆ ತೀವ್ರಗೊಳಿಸುವ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
7ನೇ ಸುತ್ತಿನ ಮಾತುಕತೆ ವಿಫಲವಾದರೆ ಹರಿಯಾಣದ ಎಲ್ಲಾ ಶಾಪಿಂಗ್ ಮಾಲ್ ಹಾಗೂ ಟೋಲ್ ಫ್ಲಾಜಾಗಳನ್ನು ಮುಚ್ಚಿಸುವುದಾಗಿ ಮತ್ತು ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಮಾಡುವುದಾಗಿ ಪ್ರತಿಭಟನಾನಿರತ ರೈತರು ಬೆದರಿಕೆ ಹಾಕಿದ್ದಾರೆ.
ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ- ಎಚ್.ಡಿ. ಕುಮಾರಸ್ವಾಮಿ
'ಮನ್ ಕಿ ಬಾತ್' ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡುವ ಸಮಯದಲ್ಲಿ ದೇಶದ ಜನರು ತಟ್ಟೆ ಬಾರಿಸಿ, ಚಪ್ಪಾಳೆ ತಟ್ಟಿ ರೈತರ ಪ್ರತಿಭಟನೆಯನ್ನು ಬೆಂಬಲಿಸಬೇಕು. ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು' ಎಂದು ಮನವಿ ಮಾಡಲಾಗಿದೆ
ಪ್ರತಿಭಟನಾ ನಿರತ ರೈತರು ಹೊಸ ಕಾನೂನುಗಳು ಕನಿಷ್ಟ ಬೆಂಬಲ ಬೆಲೆಯ ವ್ಯವಸ್ಥೆಗೆ ಮಾರಕವಾಗಿವೆ. ಈಗಿರುವ ಮಂಡಿ ವ್ಯವಸ್ಥೆಯನ್ನು ತೆಗೆದುಹಾಕಲಾಗುತ್ತದೆ. ದೊಡ್ಡ ದೊಡ್ಡ ಕಾರ್ಪೊರೇಟ್ ಕಂಪನಿಗಳು ಕೃಷಿ ಕ್ಷೇತ್ರವನ್ನು ಆವರಿಸಿಕೊಂಡು ರೈತರು ಬೀದಿಗೆ ಬೀಳಬೇಕಾಗುತ್ತದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
ಥೋಮರ್ ಪತ್ರ ಬರೆದ ಬಳಿಕ ಟ್ವೀಟ್ ಮಾಡಿರುವ ಮೋದಿ, 'ಕೃಷಿ ಸಚಿವ @nstomar ಜೀ ರೈತ ಸಹೋದರ ಸಹೋದರಿಯರಿಗೆ ಪತ್ರ ಬರೆದು ಒಳ್ಳೆಯ ಸಂವಾದ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಎಲ್ಲಾ ರೈತರು ಪತ್ರವನ್ನು ಓದುವಂತೆ ವಿನಂತಿಸುತ್ತೇನೆ' ಎಂದಿದ್ದಾರೆ.
ಇಂದು ಸಿಂಗು ಗಡಿಯಲ್ಲಿ ರೈತ ಮುಖಂಡರು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ರೈತರಿಗೆ ಬೆಂಬಲ ನೀಡಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಅಮಿತ್ ಶಾ ರೈತ ಸಂಘಟನೆಗಳ 13 ಪ್ರತಿನಿಧಿಗಳ ಜೊತೆ ನಡೆಸಿದ ‘ಅನೌಪಚಾರಿಕ ಮಾತುಕತೆ’ ವಿಫಲವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಕೇಂದ್ರ ಸರ್ಕಾರ ರೈತ ಪ್ರತಿನಿಧಿಗಳೊಂದಿಗೆ ಅಧಿಕೃತವಾಗಿ ಕರೆದಿದ್ದ 6ನೇ ಸಭೆಯನ್ನು ರೈತರು ಬಹಿಷ್ಕರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.