Google Doodle : 2024ರ ಲೋಕಸಭೆ ಚುನಾವಣೆ ಭಾರತದಲ್ಲಿ ಏಳು ಹಂತಗಳಲ್ಲಿ ನಡೆಯಲಿದೆ. ಇಂದು 1 ನೇ ಹಂತವು ಪ್ರಾರಂಭವಾಗುತ್ತಿದ್ದಂತೆ, ಪ್ರಜಾಪ್ರಭುತ್ವದ ಪ್ರದರ್ಶನವನ್ನು ಆಚರಿಸಲು ಗೂಗಲ್ ಡೂಡಲ್ ಅನ್ನು ಬಿಡುಗಡೆ ಮಾಡಿದೆ.
ನೀವೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲಾ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್
ಲೋಕಸಭೆ ಚುನಾವಣೆ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳು ಮತ್ತು ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ವೀಕ್ಷಿಸಲು ಭಾರತಕ್ಕೆ ಭೇಟಿ ನೀಡುವಂತೆ ಬಿಜೆಪಿ ಹಲವು ದೇಶಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸಿದೆ. ಬಿಜೆಪಿಯಿಂದ 25 ದೇಶಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸಲಾಗಿದೆ.
Lok Sabha Election 2024: ದೇಶದಲ್ಲಿ ಪ್ರಜಾಪ್ರಭುತ್ವ ಭಾರೀ ಅಪಾಯದಲ್ಲಿದೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ಬಿಜೆಪಿಯ ಕುತಂತ್ರದಿಂದ ದೇಶವನ್ನು ಉಳಿಸಲು ಎಲ್ಲಾ ಜಾತ್ಯತೀತ ಹಾಗೂ ಸಮಾನ ಮನಸ್ಕ ಶಕ್ತಿಗಳೊಂದಿಗೆ ನಾನು ಕೈಜೋಡಿಸುತ್ತೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.
ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ (ಜಾರಿ ನಿರ್ದೇಶನಾಲಯ) ದಾಳಿ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.
ಭಾರತದ ದನಿಯು ಸದಾ ನ್ಯಾಯಪರವಾಗಿ ಹಾಗೂ ವಿವೇಕದಿಂದ ಕೂಡಿದೆ. ನಾವು ವಿವೇಚನೆಯುಳ್ಳವರು, ಅದರಿಂದ ನಮ್ಮ ಮೇಲೆ ಯಾರೂ ಕೂಡ ದಬ್ಬಾಳಿಕೆ ನಡೆಸಲು ಸಾಧ್ಯವಿಲ್ಲ. ನಾವು ಪ್ರಪಂಚದ ಎಲ್ಲಾ ರೀತಿಯ ಜನಗಳನ್ನು ಗೌರವಿಸುತ್ತೇವೆ ಹಾಗೂ ಅವರ ನೋವಿಗೆ ಸೂಕ್ಷ್ಮವಾಗಿ ಸ್ಪಂದಿಸುತ್ತೇವೆ. ಇದನ್ನು ಜಗತ್ತು ಇದೀಗ ಗಮನಿಸಲು ಆರಂಭಿಸಿದೆ. ವಿಶ್ವಶಾಂತಿಗಾಗಿ ಭಾರತವು ವಹಿಸಬಹುದಾದ ಪಾತ್ರದತ್ತ ಜಗತ್ತು ಈಗ ಎಚ್ಚೆತ್ತುಕೊಂಡು ನೋಡುತ್ತಿದೆ.
2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.
ಹಿಂದಿನ ಕಾನೂನು ಆಯೋಗವು ವೈವಿಧ್ಯತೆ ಇರುವ ಈ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಇದೀಗ ಮತ್ತೆ ಈ ಕುರಿತು ಪರಿಶೀಲಿಸುವಂತೆ ಪ್ರಸಕ್ತ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ.
India-US Relations: ಈ ಕುರಿತು ಪ್ರಕಟಗೊಂಡ ಶ್ವೇತ ಭವನದ ಹೇಳಿಕೆಯ ಪ್ರಕಾರ ಭಾರತವು ಹಲವು ಹಂತಗಳಲ್ಲಿ ಯುಎಸ್ ನೊಂದಿಗೆ ಪ್ರಬಲ ಪಾರ್ಟ್ನರ್ ಶಿಪ್ ಹೊಂದಿದೆ. ಇದೀಗ ಶಾಂಗ್ರಿ-ಲಾ ಸಚಿವ ಆಸ್ಟಿನ್ ಅವರು ಹೆಚ್ಚುವರಿ ರಕ್ಷಣಾ ಸಹಕಾರ ಘೋಷಿಸಿದ್ದು, ನಾವು ಭಾರತದ ಜೊತೆಗೆ ಮುಂದುವರೆಯಲು ಬಯಸುತ್ತೇವೆ ಎಂದು ಹೇಳಿದ್ದಾರೆ.
ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಅಂತಾರೆ. ದೇಶವನ್ನು ಕೊಳ್ಳೆಹೊಡೆದವ್ರ ಜೊತೆ ಸಹಾಯ ಬೇಡ್ತಾರೆ ಎಂದು ರಾಹುಲ್ ಗಾಂಧಿ ವಿರುದ್ಧ ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು ಮೂರೂ ಬಿಟ್ಟವರು. ಇವರನ್ನು ಯಾವುದರಿಂದ ತಗೊಂಡ ಹೊಡೆಬೇಕು. ಕಾಲಲ್ಲಿರೋದು ತಗೊಂಡು ಹೊಡೆಬೇಕು ಬೇಡ್ವಾ..? ಎಂದು ವಾಗ್ದಾಳಿ ನಡೆಸಿದ್ದಾರೆ.
Pralhad Joshi : "ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ". ಎಂದು ಸಚಿವ ಪ್ರಲ್ಹಾದ್ ಜೋಶಿ ಮಂಗಳವಾರ ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ ವಿರುಧ್ಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.
Prajarajya Movie Rlease Date : ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ "ಪ್ರಜಾರಾಜ್ಯ" ಚಿತ್ರ ಇದೇ ಮಾರ್ಚ್ 3 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಈ ಚಿತ್ರ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ. ಉತ್ತಮ ಸಂದೇಶವಿರುವ ಚಿತ್ರ ಕೂಡ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎಂಬ ಭರವಸೆಯಿದೆ.
ಒಳ ಮೀಸಲಾತಿ ಜಾರಿಗಾಗಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.
ಅಪರಾಧದ ಹಣದಿಂದ ರೆಡ್ಡಿ ಇವತ್ತು ಹೊಸ ಪಕ್ಷ ಕಟ್ಟಲು ಹೊರಟಿದ್ದಾನೆ ಎಂದು ಬಾಗಲಕೋಟೆಯಲ್ಲಿ ಸಿಎಫ್ಡಿ ಅಧ್ಯಕ್ಷ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಆಶಯವನ್ನು ಸಮಗ್ರವಾಗಿ ನಾಶ ಮಾಡುವುದು ಆಗಿದೆ ಎಂದಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವ ಬೆನ್ನಲ್ಲೇ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ 'ಬಿಜೆಪಿ ಸರ್ಕಾರದ ಧರ್ಮರಾಜಕಾರಣ, ಕೋಮುವಾದ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗಳ ವಿರುದ್ಧ ನಾಡಿನ ಜನ ಜಾಗೃತರಾಗಿದ್ದಾರೆ' ಎಂದು ಹೇಳಿದ್ದಾರೆ.
ಹೆಗಡೆವಾರ್ ಅವರ ಲೇಖನವನ್ನು ಪಠ್ಯದಲ್ಲಿ ಸೇರಿಸಿರುವ ಸರ್ಕಾರದ ನಡೆಗೆ ವಿಧಾನ ಪರಿಷತ್ ನ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಆದರ್ಶ ಪುರುಷರು ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವ ಕೊಡುವುದಿಲ್ಲವೇಕೆ?" ಎಂದು ಪ್ರಶ್ನಿಸಿದ್ದಾರೆ.
ಸಿಬಿಎಸ್ಇ 11 ಮತ್ತು 12 ನೇ ತರಗತಿಗಳ ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಅಲಿಪ್ತ ಚಳುವಳಿ, ಶೀತಲ ಸಮರದ ಯುಗ, ಆಫ್ರೋ-ಏಷ್ಯನ್ ಪ್ರಾಂತ್ಯಗಳಲ್ಲಿ ಇಸ್ಲಾಮಿಕ್ ಸಾಮ್ರಾಜ್ಯಗಳ ಉದಯ, ಮೊಘಲ್ ನ್ಯಾಯಾಲಯಗಳ ವೃತ್ತಾಂತ ಮತ್ತು ಕೈಗಾರಿಕಾ ಕ್ರಾಂತಿಗೆ ಸಂಬಂಧಿಸಿದ ಅಧ್ಯಾಯಗಳನ್ನು ಕೈಬಿಟ್ಟಿದೆ.
ಭಾರತದ ಚುನಾವಣಾ ರಾಜಕೀಯದಲ್ಲಿ ಫೇಸ್ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ವ್ಯವಸ್ಥಿತ ಹಸ್ತಕ್ಷೇಪವನ್ನು ಕೊನೆಗೊಳಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಬುಧವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.