ಧಾರವಾಡ ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಜೋರಾಗಿದೆ. ಕುಂದಗೋಳ ತಾಲೂಕು ವರುಣನ ಆರ್ಭಟಕ್ಕೆ ನಲುಗಿದೆ. ಕುಂದಗೋಳ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳೆಯಾಗ್ತಿದ್ದು ಮನೆಗಳಿಗೆ ನೀರು ನುಗ್ಗಿದೆ.. ರಸ್ತೆಗಳು ಕೆರೆಯಂತಾಗಿವೆ..
ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದಲ್ಲಿ 2022-23 ನೇ ಸಾಲಿನ ಪ್ರಥಮ ವರ್ಷದ ಬಿ.ಎಸ್ಸಿ ಅಗ್ರಿ, ಎಬಿಎಂ, ಸಿಎಸ್ಪಿ ಮತ್ತು ಬಿಟಿಕ್ ಸ್ನಾತಕ ವಿದ್ಯಾರ್ಥಿಗಳಿಗೆ ಬೋಧಿಸಲು ಐದು ಅರೆಕಾಲಿಕ ಉಪನ್ಯಾಸಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಗಸ್ಟ್ 22 ರಂದು ಸಂದರ್ಶನ ಏರ್ಪಡಿಸಲಾಗಿದೆ.
ಕೃಷಿ ವಿಶ್ವವಿದ್ಯಾಲಯದ (AICRP on EAAI) ಕೃಷಿಯಲ್ಲಿ ಶಕ್ತಿಯ ನಿರ್ವಹಣೆ ಯೋಜನೆಯಡಿ ಖಾಲಿ ಇರುವ ಒಂದು ಸೀನಿಯರ್ ರಿಸರ್ಚ್ ಫೆಲೊ ತಾತ್ಕಾಲಿಕ ಹುದ್ದೆಗಾಗಿ ಆಗಸ್ಟ್ 18 ರಂದು ಮಧ್ಯಾಹ್ನ 12.30ಕ್ಕೆ ನೇರ ಸಂದರ್ಶನ ಕರೆಯಲಾಗಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯಾಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆಗೆ ಆದ್ಯತೆ ನೀಡಿ, ಕೇಂದ್ರ ಹಾಗೂ ಹೊರ ರಾಜ್ಯಗಳಿಂದ ಬರುವ ಪತ್ರ, ಸುತ್ತೋಲೆಗಳನ್ನು ಕನ್ನಡಿಕರಿಸಿ, ಆಡಳಿತ ನಿರ್ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದರು.
ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಭೀಕರವಾಗಿ ಸಜೀವ ದಹನಗೊಂಡ ಘಟನೆ ನಗರದ ಹೊರವಲಯದ ತಾರಿಹಾಳದ ಖಾಸಗಿ ಕೈಗಾರಿಕೆ ಶೆಡ್ ಯೊಂದರಲ್ಲಿ ಸಂಭವಿಸಿದೆ.ಇದೇ ವೇಳೆ ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮಳೆಗಾಲ ಶುರುವಾದ ಮೇಲಂತು ರೋಗಗಳು ಹೆಚ್ಚಾಗಿವೆ. ಧಾರವಾಡ ತಾಲೂಕಿನಲ್ಲಿ ಇದೀಗ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ತಾಲೂಕಿನಲ್ಲಿ ಸದ್ಯ 11 ಡೆಂಗಿ ಪ್ರಕರಣಗಳು ಕಂಡು ಬಂದಿದ್ದರೆ, ಅದರಲ್ಲಿ ಐದು ಪ್ರಕರಣಗಳು ಸಲಕಿನಕೊಪ್ಪ ಗ್ರಾಮದಲ್ಲಿ ಪತ್ತೆಯಾಗಿವೆ ಎಂಬುವುದು ವಿಶೇಷ.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13 ಹಾಗೂ 14 ರಂದು ಬೃಹತ್ ಯೋಗಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಗಿನ್ನೆಸ್ ಹಾಗೂ ವಿಶ್ವ ದಾಖಲೆ ನಿರ್ಮಾಣಕ್ಕಾಗಿ ರಾಜ್ಯದಾದ್ಯಂತ ಏಕಕಾಲಕ್ಕೆ ಯೋಗಾಭ್ಯಾಸ ನಡೆಯಲಿದೆ.
ಕೃಷಿ ವಿಶ್ವವಿದ್ಯಾಲಯದ ವಿಸ್ತರಣೆ ಹಾಗೂ ಸಂವಹನಾ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು, ಪದವೀಧರ ಸಹಾಯಕ ತಾತ್ಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ನೇಮಕಾತಿಗೆ ಜುಲೈ 21 ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ.
ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ರೂ.31.40 ಕೋಟಿ ವೆಚ್ಚದಲ್ಲಿ ಪೂರತಣಗೊಂಡಿರುವ ನಗರ ಪ್ರದೇಶದ ಬಡಜನರಿಗೆ ಮೂಲಭೂತ ಸೌಕರ್ಯ ಯೋಜನೆ ಪ್ಯಾಕೇಜ್- 3 ಕಾಮಗಾರಿಗಳ ಉದ್ಘಾಟನೆ ಹಾಗೂ 2.80 ಕೋಟಿ ರೂ.ವೆಚ್ಚದ ವಿದ್ಯುತ್ ಚಿತಾಗಾರ ನಿರ್ಮಾಣ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮವು ಜೂ.26 ರಂದು ಮಧ್ಯಾಹ್ನ 3:30 ಕ್ಕೆ ಘಂಟಿಕೇರಿಯ ಸರ್ಕಾರಿ ಶಾಸಕರ ಮಾದರಿ ಶಾಲೆ ನಂ.5 ಮತ್ತು ಕನ್ನಡ ಹೆಣ್ಣುಮಕ್ಕಳ ಶಾಲೆ ನಂ.1ರಲ್ಲಿ ನಡೆಯಲಿದೆ.
ಇಲ್ಲಿನ ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಇಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 221 ಪ್ರಕರಣಗಳಲ್ಲಿ ಸುಮಾರು 4 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಪರಿಹಾರಕ್ಕೆ ಇತ್ಯರ್ಥಪಡಿಸಲಾಯಿತು.
ಸಂಗೀತ, ಕಲೆ ಮುಂತಾದ ಸೃಜನಾತ್ಮಕ ಪ್ರಕಾರಗಳನ್ನು ತಲೆಮಾರುಗಳಿಗೆ, ಹೊಸಪೀಳಿಗೆಗೆ ದಾಟಿಸುವುದು, ಜಾಗತೀಕರಣದ ಈ ಯಾಂತ್ರಿಕ ಕಾಲಘಟ್ಟದಲ್ಲಿ ಸವಾಲಿನ ಕೆಲಸ. ಅಜ್ಜ,ಮಗ ಹಾಗೂ ಮೊಮ್ಮಗ ತಾವು ಬದುಕುತ್ತಿರುವ ಹಾಗೂ ಕಂಡುಂಡ ಸಮಕಾಲೀನ ಜಗತ್ತನ್ನು ತಮ್ಮ ಕುಂಚದಲ್ಲಿ ಅರಳಿಸಿ, ಸೃಷ್ಟಿಸಿರುವ ಮೂರು ತಲೆಮಾರುಗಳ ವೈವಿಧ್ಯಮಯ ದೃಶ್ಯಗಳ ಪ್ರದರ್ಶನ ಇಲ್ಲಿನ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಯಶಸ್ವಿಯಾಗಿ ಜರುಗಿತು.
ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಧರಣಿಗೆ ಕುಮಾರಸ್ವಾಮಿ ಅವರು ಬೆಂಬಲ ಸೂಚಿಸಲು ಬಂದಿದ್ದ ವೇಳೆ ಪಿಎಸ್ಐ ಅಕ್ರಮ ನೇಮಕಾತಿ ವಿರುದ್ಧ ಧ್ವನಿ ಎತ್ತಿದ ಅಭ್ಯರ್ಥಿಗಳು ಹಾಗೂ ಈಗಾಗಲೇ ಪರೀಕ್ಷೆ ಬರೆದು ಪಾಸಾದ ಅಭ್ಯರ್ಥಿಗಳು ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.