ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ.
ಆಧುನಿಕ ವೈದ್ಯಕೀಯದ ಜೊತೆಗೆ ಪಾರಂಪರಿಕ ವೈದ್ಯ ಪದ್ದತಿಯನ್ನ ನಾವು ಮುಖ್ಯವಾಹಿನಿಗೆ ತರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು, ನಾಗಮಂಗಲ ಆದಿಚುಂಚನಗಿರಿ ಸಂಸ್ಥಾನದಲ್ಲಿ ಇಂದು ರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಬೆಳೆಯುತ್ತಿರುವ ವಿಜ್ಞಾನ ತಂತ್ರಜ್ಞಾನದ ಯುಗದಲ್ಲಿ ಬಹುತೇಕರು ನಾಟಿ ವೈದ್ಯ ಪದ್ದತಿಯನ್ನ ನಂಬಲ್ಲ. ಆದರೆ ಅಲೋಪತಿ ಬರುವ ಮುನ್ನ ನಮ್ಮ ರಾಜ ಮಹಾರಾಜರಿಗೆ ಚಿಕಿತ್ಸೆ ನೀಡಿ, ಕಾಯಿಲೆಗಳನ್ನ ವಾಸಿಮಾಡುತ್ತಿದ್ದುದು ನಮ್ಮ ಗಿಡ ಮೂಲಿಕೆಗಳ ಔಷಧಿಯ ನಾಟಿ ಪದ್ದತಿ ಎಂಬುದನ್ನ ಮರೆಯಬಾರದು ಎಂದರು.
Dinesh Gundurao : ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಸಮಸ್ಯೆ ಪರಿಹರಿಸಲಾಗುತ್ತಿದ್ದು, ಡಿಸೆಂಬರ್ ಬಳಿಕ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Bangalore Health : ಸರ್ಕಾರಿ ಆರೋಗ್ಯ ಕ್ಷೇತ್ರವನ್ನ ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಮೂಲಕ ಮಹಿಳೆಯರಿಗೆ ಆರ್ಥಿಕ ಸಹಾಯ ಹಲವು ಬಡವರ ಕುಟುಂಬ ನಿರ್ವಹಣೆಗೆ ಅನುಕೂಲವಾಗಲಿದೆ. ದೇಶದಲ್ಲಿಯೇ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಅತಿ ದೊಡ್ಡ ಆರ್ಥಿಕ ಭದ್ರತೆ ಯೋಜನೆ ಇದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
PM Modi Bengaluru Road Show: ರಾಜ್ಯ BJP ನಾಯಕರನ್ನು ಅವರ ಪಕ್ಷದ ವರಿಷ್ಟರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂಬುದಕ್ಕೆ ಪ್ರಧಾನಿ ಮೋದಿಯವರ ಇಂದಿನ ವರ್ತನೆಯೇ ಸಾಕ್ಷಿ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದಲೇ ಉಚಿತ ಆರೋಗ್ಯ ಶಿಬಿರಗಳನ್ನ ರಾಜ್ಯದಾದ್ಯಂತ ನಡೆಸಲು ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಇಂದು ಗಾಂಧಿನಗರ ಬೃಹತ್ ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು.
Dinesh Gundurao: ಸರ್ಕಾರ ಸೊಷಿಯಲ್ ಮಿಡಿಯಾ, ಮಾಧ್ಯಮಗಳು ಮತ್ತು ಪೊಲೀಸ್ ಇಲಾಖೆಯ ಮೂಲಕ ಸೈಬರ್ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಸೇವೆಗಳಲ್ಲಿ ಪರಿಣಾಮಕಾರಿಯಾಗಿ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣಾ ಆಯೋಗ -2 ಹಲವು ಶಿಫಾರಸ್ಸುಗಳನ್ನ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನ ಇಂದು ಭೇಟಿ ಮಾಡಿದ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ಪ್ರಮುಖ 21 ಅಂಶಗಳನ್ನ ಒಳಗೊಂಡಿರುವ ವರದಿ ಸಲ್ಲಿಕೆ ಮಾಡಿದರು.
BJPಯವರು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಭೂಮಿ ನೀಡಿದ್ದಾರೆ
ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಗೆ ಹೀಗೆ ಮಾಡಿದ್ದಾರೆ
ಕಾನೂನು ಉಲ್ಲಂಘಿಸಿ BJP ನಾಯಕರು ಭೂಮಿ ನೀಡಿರುವುದು ಸತ್ಯ
ಹೆಚ್. ಕೆ. ಪಾಟೀಲ್, ಕೃಷ್ಣೆ ಬೈರೇಗೌಡ, ಚೆಲುವ ನಾರಾಯಣ ಸ್ವಾಮಿ, ಕೆ ವೆಂಕಟೇಶ್, ಡಾ. ಹೆಚ್. ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಆರ್ಬಿ ತಿಮ್ಮಾಪುರ, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಮಾಂಕಾಳ್ ವೈದ್ಯ, ರಹೀಮ್ ಖಾನ್, ಡಿ. ಸುಧಾಕರ್, ಸಂತೋಷ್ ಲಾಡ್, ಬೋಸರಾಜು, ಭೈರತಿ ಸುರೇಶ್, ಮಧು ಬಂಗಾರಪ್ಪ, ಎಂ. ಸಿ. ಸುಧಾಕರ್, SS ಮಲ್ಲಿಕಾರ್ಜುನ, ಬಿ ನಾಗೇಂದ್ರ
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಎತ್ತಿರುವ ಸಚಿವ ಉಮೇಶ್ ಕತ್ತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ 'ಪದೇ ಪದೇ ಪ್ರತ್ಯೇಕ ರಾಜ್ಯದ ಮಾತಾನಾಡುವ ಸಚಿವ ಉಮೇಶ್ ಕತ್ತಿಯವರು ನಾಡದ್ರೋಹಿಯಲ್ಲದೆ ಮತ್ತೇನು.? ಉಮೇಶ್ ಕತ್ತಿಯವರಿಗೆ ಕರ್ನಾಟಕದಲ್ಲಿ ಇರಲು ಸಂಕಟವಾದರೆ ರಾಜ್ಯ ಬಿಟ್ಟು ತೊಲಗಲಿ" ಎಂದು ಹೇಳಿದ್ದಾರೆ.
ಕಾಂಗ್ರೆಸ್ ವರಿಷ್ಠರಿಗೆ ಇಡಿ ನೋಟಿಸ್ ನೀಡಿರುವ ಹಿನ್ನಲೆಯಲ್ಲಿ ಇಂದು ದೇಶಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು ಇಂದು ದೇಶದಲ್ಲಿ ಇರುವ ಎಲ್ಲಾ ಇಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.