Gruha Lakshmi Scheme: ಕಳೆದ 4 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲವೆನ್ನುವುದು ಸುಳ್ಳು. ಏಕೆಂದರೆ ಮೇ ತಿಂಗಳ ಹಣವನ್ನು ಈಗಾಗಲೇ ಹಾಕಿದ್ದೇವೆ. ಜೂನ್ ಮತ್ತು ಜುಲೈ ತಿಂಗಳ ಹಣ ತಾಂತ್ರಿಕ ಕಾರಣದಿಂದ ತಡವಾಗಿತ್ತು. ಈಗಾಗಲೇ ನೇರ ನಗದು ಹಣ ವರ್ಗಾವಣೆ ಮೂಲಕ ಹಣ ಹಾಕಲು ಪ್ರಾರಂಭಿಸಿದ್ದೇವೆ. ಗರಿಷ್ಠ 10 ದಿನಗಳ ಒಳಗೆ 2 ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
VIP Wedding: ಕಾಂಗ್ರೆಸ್ ನಾಯಕ ಬೈರತಿ ಸುರೇಶ್ ಹಾಗೂ ಬಿಜೆಪಿ ನಾಯಕ ಎಸ್.ಆರ್.ವಿಶ್ವನಾಥ್ ಬೀಗರಾಗುತ್ತಿದ್ದಾರೆ. ಮಕ್ಕಳಿಗೆ ಮದುವೆ ಮಾಡುವ ಮೂಲಕ ʼಕೈʼ ಹಾಗೂ ʼಕಮಲʼ ಒಂದಾಗುತ್ತಿದೆ. ವಿಶ್ವನಾಥ್ ಅವರ ಪುತ್ರಿಯನ್ನು ಬೈರತಿ ಸುರೇಶ್ ಪುತ್ರ ಮದುವೆಯಾಗುತ್ತಿದ್ದಾರೆ.
ಮೂಡ ಹಗರಣದ ಕುರಿತು ಚರ್ಚಿಸಲು ನಿಲುವಳಿ ಸೂಚನೆ ಮಂಡಿಸಿದ್ದೆವು. ಕಾನೂನು ಸಚಿವರಾದ ಎಚ್.ಕೆ.ಪಾಟೀಲರು ಮಾತನಾಡಿ, ತನಿಖಾ ಆಯೋಗ ರಚಿಸಿದ್ದೇವೆ. ಅದರ ಮುಂದೆ ಹೇಳಿಕೆ ಕೊಡಿ ಎಂದು ತಿಳಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಿಜಯೇಂದ್ರ ಅವರು ಟೀಕಿಸಿದರು.
ತುಂಗಳ- ಸಾವಳಗಿ ಏತ ನೀರಾವರಿ ಯೋಜನೆಯ ಕೊನೆಯ ಭಾಗಗಳ ರೈತರಿಗೆ ನೀರು ತಲುಪುತ್ತಿಲ್ಲ ಎನ್ನುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ್ದ, ಡಿಸಿಎಂ ನಾಲೆಗಳಿಂದ ಅನೇಕ ಕಡೆ ಶೇ 90 ರಷ್ಟು ನೀರನ್ನು ಪಂಪ್ ಮಾಡಲಾಗುತ್ತಿದೆ. ಸದನ ಒಪ್ಪುವುದಾದರೆ ವಾರದೊಳಗೆ ಬಿಲ್ ತಯಾರು ಮಾಡಲಾಗುವುದು ಎಂದು ಭರವಸೆ ನೀಡಿದ್ದರು.
Vijayalakshmi Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಂಗಳೂರು: ಬಿಡ್ಬ್ಲೂಎಸ್ ಎಸ್ ಬಿ ನೌಕರರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು “ಕಳೆದ ಒಂದು ವರ್ಷದಿಂದ ನಮ್ಮ ಸಾರ್ವಜನಿಕರಿಂದ 70 ಸಾವಿರ ಸಲಹೆಗಳನ್ನು ಪಡೆಯಲಾಗಿದೆ
ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರ್ಕಾರವನ್ನೂ ಟೀಕಿಸಿಲ್ಲ. ಆದರೂ ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಎಚ್ಡಿಕೆ ಕುಟುಕಿದ್ದಾರೆ.
ನಾನು ರಾಜ್ಯಕ್ಕೆ ಬರುವುದನ್ನೇ ಸಹಿಸಲ್ಲ ಅಂದರೆ ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ ಇವರು..? ನಾನು ಬರಲೇಬಾರದು ಎನ್ನುವ ರೀತಿ ಸಿಎಂ, ಡಿಸಿಎಂ ಹಾಗೂ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ, ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಮಾಡಲಾಗುತ್ತದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಏನಾದರೂ ಟ್ವೀಟ್ ಮಾಡಲಿ, ಟೀಕೆ ಮಾಡಲಿ, ನಮ್ಮ ಸ್ವಾಭಿಮಾನವನ್ನು ನಾವು ಬಿಡುವ ಪ್ರಶ್ನೆಯೇ ಇಲ್ಲ. ಜನ ನಮ್ಮ ನಿರ್ಧಾರದಿಂದ ಸಂತೋಷವಾಗಿದ್ದಾರೆ ಎಂದು ಡಿಸಿಎಂ ಹೇಳಿದರು..
ಸದನದಲ್ಲಿ ಸದಸ್ಯರು ಮಾತನಾಡುವಾಗ ಅವರನ್ನು ಒತ್ತಾಯಪೂರ್ವಕವಾಗಿ ಸ್ಪೀಕರ್ ಕೂರಿಸುತ್ತಿದ್ದಾರೆ. ಇದು ಸದನಕ್ಕೆ ಅಥವಾ ಸ್ಪೀಕರ್ಗೆ ಗೌರವ ತರುವುದಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಈ ರೀತಿ ಸದನ ನಡೆದಿಲ್ಲ. ಸ್ಪೀಕರ್ ಸದನ ನಡೆಸಲು ಸಂಪೂರ್ಣ ವಿಫಲರಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು..
ಬಿಜೆಪಿ ಸರ್ಕಾರದಲ್ಲಿ ಕೆಲವು ಹಗರಣಗಳನ್ನು ಮುಚ್ಚಿಹಾಕಿದ್ದಾರೆ, ಮುಚ್ಚಿಹಾಕಲು ಪ್ರಯತ್ನ ಪಟ್ಟಿದ್ದಾರೆ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಬಯಲಿಗೆ ಎಳೆದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದರು.
DK Shivakumar : ಬಿಜೆಪಿ ವಿರುದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಆಗಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.
ಬೆಂಗಳೂರು: ಪ್ರತಿಪಕ್ಷಗಳಿಗೆ ಸದನದ ಕಲಾಪಗಳು ನಡಾವಳಿಗಳ ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ" ಎಂದರು.
ಇಂದಿನ ದಿನಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳುವುದು ಕಷ್ಟದ ಕೆಲಸ. ಡಬಲ್ ಡೆಕ್ಕರ್ ಮಾದರಿಯಿಂದ ಸಂಚಾರ ದಟ್ಟಣೆ ಸೇರಿದಂತೆ ಅನೇಕ ಉಪಯೋಗಗಳಿವೆ. ಹೆಚ್ಚು ಖರ್ಚಾದರೂ ಈ ಮಾದರಿ ಬೆಂಗಳೂರಿಗೆ ಅನುಕೂಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Karnataka Assembly session 2024: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ʼಪ್ರಜ್ವಲ್ ರೇವಣ್ಣನ ಪ್ರಕರಣ ಇದಕ್ಕಿಂತಲೂ ಸಣ್ಣದಾ? ನೂರಾರು ಮಹಿಳೆಯರಿಗೆ ಅನ್ಯಾಯ ಆಗಿದೆಯಲ್ಲ. ಅದು ಇದಕ್ಕಿಂತ ಸಣ್ಣ ಪ್ರಕರಣವೇ? ಎಂದು ಲೈಂಗಿಕ ಹಗರಣ ಪ್ರಕರಣವನ್ನು ಕೆದಕಿದರು.
Assembly Session 2024: "ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು" ಎಂದು ಅಶ್ವತ್ಥ್ ನಾರಾಯಣ್ ಹೇಳಿದಾಗ, “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಡಿಕೆಶಿ ಗುಡುಗಿದರು.
ತಮಿಳುನಾಡಿನವರು ಸಹ ಸರ್ವಪಕ್ಷ ಸಭೆ ಮಾಡುತ್ತಿದ್ದಾರೆ.ಅದು ಅವರ ಹಕ್ಕು.ಅವರ ಸಭೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ನಿಮಗೂ ಹೆಚ್ಚು ಅನುಕೂಲ ಆಗುವ ಮೇಕೆದಾಟು ಯೋಜನೆಗೆ ಸಹಕಾರ ನೀಡಿ ಎಂದು ಡಿಕೆಶಿ ಮನವಿ ಮಾಡಿದ್ದರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.