Kempegowda Jayanti: ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಡಾ ಸಿ. ಎನ್. ಅಶ್ವತ್ ನಾರಾಯಣ ಅವರಿಗೆ ಗೊತ್ತಿಲ್ಲ, ಅದಕ್ಕೆ ಅವರು ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ" - ಡಿಸಿಎಂ ಡಿ.ಕೆ. ಶಿವಕುಮಾರ್
ವಿದ್ಯಾಭ್ಯಾಸ ಮಾಡುವುದು ಎಂದರೆ ಕೇವಲ ತರಗತಿಗೆ ಬಂದೆವು, ಕಲಿತೆವು, ಪರೀಕ್ಷೆ ಬರೆದವು, ಪಾಸಾದೆವು ಎಂದರ್ಥವಲ್ಲ. ವಿದ್ಯಾರ್ಥಿ ಜೀವನ ಎನ್ನುವುದು ಇಷ್ಟಕ್ಕೆ ಸೀಮಿತ ಆಗಬಾರದು. ನಿಮ್ಮ ತರಗತಿ- ಹಾಸ್ಟೆಲ್ಗಳಿಂದ ಹೊರಬಂದು ವಾರಕ್ಕೊಮ್ಮೆಯಾದರೂ ಸುತ್ತಮುತ್ತಲ ಹಳ್ಳಿಗಳ ಜನರನ್ನು ನೋಡಿ. ದಿನನಿತ್ಯ ಅವರು ಎದುರಿಸುತ್ತಿರುವ ಸವಾಲುಗಳನ್ನು ಗಮನಿಸಿ.
ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದ್ದ ಮಾಧ್ಯಮ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅಶ್ವಥನಾರಾಯಣ, ಪಕ್ಷ ಮತ್ತು ಸರಕಾರದ ನಡುವೆ ಸಂಪರ್ಕದ ಅಂತರ ಇರಬಾರದು. ಅದನ್ನು ಹೋಗಲಾಡಿಸಲು ಇಂಥ ಮಾಧ್ಯಮ ಕಾರ್ಯಗಾರಗಳು ಹೆಚ್ಚು ಪೂರಕವಾಗುತ್ತವೆ ಎಂದು ಹೆಳಿದರು.
ಜಾಗತಿಕ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ, ರಚನಾತ್ಮಕ ಸ್ವಾಯತ್ತತೆ ನೀಡಿ ಅತ್ಯುತ್ತಮ ಫಲಿತಾಂಶವನ್ನು ಪಡೆಯಲಾಗುತ್ತಿದೆ. ಇದೇ ದಾರಿಯಲ್ಲಿ ನಮ್ಮ ಸರಕಾರವೂ ಹೆಜ್ಜೆ ಇಡಲು ಸಿದ್ಧವಿದೆ. ಎಲ್ಲವನ್ನೂ ಸರಕಾರವೇ ತನ್ನ ವಶದಲ್ಲಿಟ್ಟುಕೊಂಡು ಮಾಡಲು ಸಾಧ್ಯವಿಲ್ಲ- ಡಾ. ಸಿ.ಎನ್. ಅಶ್ವತ್ಥನಾರಾಯಣ
ಆನ್ ಲೈನ್ ವೇದಿಕೆ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ಸೈಬರ್ ಸುರಕ್ಷತಾ ಸಂಚಾಲಕ ಲೆಫ್ಟಿನೆಂಟ್ ಜನರಲ್ (ಡಾ.) ರಾಜೇಶ್ ಪಂತ್ ಅವರು ಪ್ರಧಾನ ಭಾಷಣ ಮಾಡಿದರು. ಸೈಬರ್ ಸುರಕ್ಷತೆಯ ಪ್ರಾಮುಖ್ಯ ಹಾಗೂ ಭಾರತದ ಮಹತ್ವದ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯಕ್ಕೆ ಇರುವ ಭೀತಿಗಳ ಕುರಿತು ಅವರು ಪ್ರಸ್ತಾಪಿಸಿದರು.
ಬೆಂಗಳೂರಿನ ಮಲ್ಲೇಶ್ವರದ ಒಳಾಂಗಣ ಕ್ರೀಡಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ನಾರಾಯಣ ತರಬೇತಿ ಸಂಸ್ಥೆಗಳ ಸಹಯೋಗದಲ್ಲಿ ತೆರೆಯಲಾಗಿರುವ "ಮಲ್ಲೇಶ್ವರಂ ಕೌಶಲ್ಯ ಕೇಂದ್ರ"ದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಡಿಸಿಎಂ ಸಿ.ಎನ್. ಅಶ್ವತ್ಥನಾರಾಯಣ
2018ರಲ್ಲಿ ಯಾರಿಗೂ ಬಹಮತ ಸಿಗದಿದ್ದಾಗ ರಾಜ್ಯದಲ್ಲಿ ಒಂದು ರೀತಿಯ ರಾಜಕೀಯ ಶೂನ್ಯತೆ, ಅಭಿವೃದ್ಧಿಹೀನ ವಾತಾವರಣ ಉಂಟಾಗಿತ್ತು. ಬಳಿಕ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಉತ್ತರ ಕರ್ನಾಟಕದಲ್ಲಿ ಹಿಂದೆಂದೂ ಕಂಡರಿಯದ ಮಹಾ ಪ್ರವಾಹ ಉಂಟಾಯಿತು.
ಪದೇಪದೆ ಮನವಿ ಮಾಡಿದರೂ ತಮ್ಮಲ್ಲಿರುವ ಅರ್ಧದಷ್ಟು ಹಾಸಿಗೆಗಳನ್ನು ಸರಕಾರಕ್ಕೆ ನೀಡಲು ಮೀನಾಮೇಷ ಎಣಿಸುತ್ತಿರುವ ಕೆಲ ಖಾಸಗಿ ಆಸ್ಪತ್ರೆಗಳ ನಡುವೆಯೇ ನಾವು ಕೇಳುವುದಕ್ಕೆ ಮುನ್ನವೇ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ, ಹಾಸಿಗೆಗಳನ್ನು ನೀಡಲು ಮುಂದೆ ಬಂದಿರುವ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬದ್ಧತೆ ಮತ್ತು ಸೇವಾ ತತ್ಪರತೆಯನ್ನು ಮುಕ್ತಮನಸ್ಸಿನಿಂದ ಮೆಚ್ಚಲೇಬೇಕು- ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ
ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ರಿನ್ಯಾಕ್ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಕಂಪನಿಯ ತಜ್ಞರಿಂದ ಉಪ ಮುಖ್ಯಮಂತ್ರಿ ಮಾಹಿತಿ ಪಡೆದರಲ್ಲದೆ, ಕಂಟೈನರುಗಳಲ್ಲಿನ ಐಸಿಯುಗಳನ್ನು ಕೂಲಂಕಶವಾಗಿ ಪರಿಶೀಲನೆ ಮಾಡಿದರು.
ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.