ಹೋಂ ಕ್ವಾರಂಟೈನ್, ಸಾಂಸ್ಥಿಕ ಕ್ವಾರಂಟೈನ್ನಲ್ಲಿರುವ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಕ್ವಾರಂಟೈನ್ ಪ್ರದೇಶದಿಂದ ಬೇರೆ ಕಡೆಗೆ ಚಲನ ವಲನ ಮಾಡುವುದಾಗಲಿ ಅಥವಾ ತಮ್ಮ ಮೊಬೈಲ್ಗಳನ್ನು ಸ್ವಿಚಾಫ್ ಮಾಡಬಾರದು. ಒಂದು ವೇಳೆ ಉದ್ದೇಶಪೂರ್ವಕವಾಗಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಥವಾ ಮೊಬೈಲ್ ಸ್ವಿಚಾಫ್ ಮಾಡಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಐ.ಪಿ.ಸಿ. ಸೆಕ್ಷನ್ 188 ರನ್ವಯ ಎಫ್ಐಆರ್ (FIR) ದಾಖಲಿಸಲಾಗುವುದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಷೋವೊಂದರ ವೇಳೆ ಫರಾಹ್ ಖಾನ್ ಭಾರತಿ ಸಿಂಗ್ ಹಾಗೂ ರವೀನಾ ಟಂಡನ್ ಆಂಗ್ಲಭಾಷೆಯಲ್ಲಿ ಶಬ್ದವೊಂದರ ಸ್ಪೆಲ್ಲಿಂಗ್ ಬರೆಯಲು ಸೂಚಿಸಿದ್ದಾರೆ. ಈ ಶಬ್ದ ಪವಿತ್ರ ಗ್ರಂಥವೊಂದರ ಶಬ್ದವಾಗಿತ್ತು. ಶಬ್ದದ ಅರ್ಥ ತಿಳಿಯದ ಭಾರತಿ ಸಿಂಗ್, ಕಾಮಿಡಿ ಮಾಡುವ ಉದ್ದೇಶದಿಂದ ಆ ಶಬ್ದದ ವಿಪರೀತ ಅರ್ಥವನ್ನೇ ಹೇಳಿದ್ದಾರೆ. ಇದನ್ನು ತಮಾಷೆ ಎಂದು ತಿಳಿದ ರವೀನಾ ಹಾಗೂ ಫರಾಹ್ ಖಾನ್ ಅವರೂ ಭಾರತಿ ಜೊತೆ ತಮಾಷೆ ಮಾಡಿದ್ದಾರೆ.
ಜನಸಮೂಹ ಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದ ಇತಿಹಾಸಕಾರ ರಾಮಚಂದ್ರ ಗುಹಾ, ಮಣಿರತ್ನಂ ಮತ್ತು ಅಪರ್ಣ ಸೇನ್ ಸೇರಿದಂತೆ ಸುಮಾರು 50 ಗಣ್ಯರ ವಿರುದ್ಧ ಬಿಹಾರದ ಮುಜಾಫರ್ಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.