ಕಾರ್ಮಿಕ ಸಂಘಟನೆಗಳಿಂದ ಇಂದು ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ
ನಗರದ ಫ್ರಿಡಂ ಪಾರ್ಕ್ನಲ್ಲಿ ಇಂದು ಶಕ್ತಿ ಪ್ರದರ್ಶನಕ್ಕೆ ಮುಂದಾದ AITUC
ಇಂದು ಬೆಳಿಗ್ಗೆ 10ಗಂಟೆಯಿಂದ ಫ್ರಿಡಂ ಪಾರ್ಕ್ನಲ್ಲಿ ಬ್ರಹತ್ ಪ್ರತಿಭಟನೆ
ಆಲ್ ಇಂಡಿಯಾ ಟ್ರೇಡ್ ಯುನಿಯನ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಪ್ರತಿಭಟನೆಯಲ್ಲಿ 30 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಭಾಗಿ ಸಾಧ್ಯತೆ
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ. ಕಾವೇರಿ ನೀರಿಗಾಗಿ ಅವೈಜ್ಞಾನಿಕ ತೀರ್ಪು ದಿಕ್ಕರಿಸಿ ಪ್ರತಿಭಟನೆ. ರೈತ ಮುಖಂಡ ಕುರುಬರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ..
ಆಟೋ ಸಾರಥಿಗಳಿಗೆ ಬೈಕ್, ಟ್ಯಾಕ್ಸಿ ಚಾಲಕರು ಕೌಂಟರ್ ನೀಡಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದು, ಆಟೋ ಚಾಲಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಆರೋಗ್ಯ ಸಿಬ್ಬಂದಿ ಮುಷ್ಕರ 30ನೇ ದಿನವೂ ಮುಂದುವರಿದಿದೆ.. ಸರ್ಕಾರ ಸ್ಪಂದಿಸದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕೋ ಎಚ್ಚರಿಕೆ ನೀಡಲಾಗಿದೆ.
ಫ್ರೀಡಂ ಪಾರ್ಕ್ನಲ್ಲಿ ಮತ್ತೆ ಸಾಲು ಸಾಲು ಪ್ರತಿಭಟನೆಗಳು ನಡೀತಿದೆ.. ರಾಜ್ಯದ ಮೂಲೆ ಮೂಲೆಯಿಂದ ವಿವಿಧ ಸಂಘಟನೆಯವರು ಆಗಮಿಸುತ್ತಿದ್ದು ವಿವಿಧ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.. ವಿವಿಧ ಸಂಘಟನೆಗಳ ಪ್ರತಿಭಟನೆ ಸರ್ಕಾರಕ್ಕೆ ತಲೆನೋವು ತಂದಿದೆ..
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ 4ನೇ ದಿನ ಮುಂದುವರಿದಿದೆ.. ಮೈ ಕೊರೆಯುವ ಚಳಿಯಲ್ಲೇ 4 ದಿನಗಳಿಂದ ನಿರಂತರ ಪ್ರತಿಭಟನೆ ನಡೀತಿದೆ.
ಫ್ರೀಡಂ ಪಾರ್ಕ್ನಲ್ಲಿ ನಿನ್ನೆ ಬೆಳಿಗ್ಗೆಯಿಂದ ಘೋಷಣೆ ಕೂಗುತ್ತ ಬಿಸಿಯೂಟ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದಾರೆ. ನಿನ್ನೆಯಿಂದ ಹೋರಾಟ ನಡೆಸುತ್ತಿದ್ದರೂ ಸಹ ಸಂಬಂಧಪಟ್ಟ ಇಲಾಖೆಯ ಸಚಿವರಾಗಲಿ ಅಥವಾ ಅಧಿಕಾರಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ.
ಬಿಬಿಎಂಪಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೆ ನಾನು ಅವರೊಂದಿಗೆ ಹೋರಾಟ ಮುಂದುವರಿಸುತ್ತೇನೆ ಎಂದು ಶಾಸಕ ಜಮೀರ್ ಹೇಳಿದ್ದಾರೆ.. ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಜಮೀರ್, ನಗರದ ಸ್ವಾಸ್ಥ್ಯ ಮತ್ತು ಸ್ವಚ್ಛತೆ ಕಾಪಾಡುವಲ್ಲಿ ಅತಿ ಮುಖ್ಯ ಪಾತ್ರ ವಹಿಸುತ್ತಿರುವ ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಎರಡು ದಿನಗಳೊಳಗಾಗಿ ಈಡೇರಿಸಬೇಕು. ಇಲ್ಲವಾದರೆ, ಸೋಮವಾರದಿಂದ ನಾನೂ ಪ್ರತಿಭಟನೆಯಲ್ಲಿ ಭಾಗವಹಿಸಿ, ಬೇಡಿಕೆಗಳು ಈಡೇರುವವರೆಗೂ ಪ್ರತಿಭಟಿಸೋದಾಗಿ ಎಚ್ಚರಿಕೆ ನೀಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪೌರಕಾರ್ಮಿಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಸಿಎಂ ಭರವಸೆಯನ್ನು ಬರವಣಿಗೆ ಮೂಲಕ ನೀಡಬೇಕು ಎಂದು ಪೌರ ಕಾರ್ಮಿಕರು ಪಟ್ಟು ಹಿಡಿದಿದ್ದಾರೆ..
ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನದ ಸಮಾರೋಪದಲ್ಲಿ ಮಾತನಾಡಿದ ರೈತಮುಖಂಡ ಬಡಗಲಪುರ ನಾಗೇಂದ್ರ, ಕೇಂದ್ರ ಸರ್ಕಾರ (Central Govt) ರೈತ ಹೋರಾಟದ ಹಿನ್ನಲೆ ಮಸೂದೆ ವಾಪಾಸ್ ಪಡೆದಿದ್ದರೂ ರಾಜ್ಯ ಸರ್ಕಾರದಲ್ಲಿ (State Govt) ಮುಂದುವರಿಯುತ್ತಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.