ಸರ್ಕಾರ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದೆ. 7 ಜನ IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ಹಣಕಾಸು ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಶ್ರೀನಿವಾಸ್ ಕೆ. ನೇಮಕ ಮಾಡಲಾಗಿದೆ.
Egg In Mid-Day Meals: ಪ್ರಸ್ತುತ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಲಾಗುತ್ತಿತ್ತು ಎಂಬುದು ಇಲ್ಲಿ ಉಲ್ಲೇಖನೀಯ. ಆದರೆ, ಇದೀಗ ಈ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ವಿಸ್ತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ.
ಜೀವನದಲ್ಲಿ ಒಮ್ಮೆಯಾದರೂ ಕಾಶಿಗೆ ಹೋಗಬೇಕು ಎಂಬುದು ಹಲವರ ಕನಸು. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ, ಬೆಂಗಳೂರಿನಿಂದ ಕಾಶಿಗೆ ತೆರಳಲು ಹೊಸ ರೈಲು ಸೇವೆ ಆರಂಭವಾಗಲಿದೆ. ಅದೇ 'ಭಾರತ್ ಗೌರವ್' ತೀರ್ಥಯಾತ್ರೆ ರೈಲು. ಈ ರೈಲಿನಲ್ಲಿ ಉತ್ತರ ಭಾರತದ ಪ್ರಮುಖ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಬಹುದು.
Project Reward Implementation - ಭಾರತ ಸರ್ಕಾರ (Government Of India), ಕರ್ನಾಟಕ (Government Of Karnataka) ಮತ್ತು ಒಡಿಶಾ ರಾಜ್ಯ ಸರ್ಕಾರಗಳು (Government Of Odisha ) ಹಾಗೂ ವಿಶ್ವಬ್ಯಾಂಕ್ (World Bank) ಗಳು $115 ಮಿಲಿಯನ್ ಮೊತ್ತದ ಸಾಲ ಒಪ್ಪಂದಗಳಿಗೆ ಸಹಿ ಹಾಕಿವೆ, “ನವೀನ ಅಭಿವೃದ್ಧಿ ಮೂಲಕ ಕೃಷಿ ಸ್ಥಿತಿಸ್ಥಾಪಕತ್ವಕ್ಕಾಗಿ ಜಲಾನಯನವನ್ನು ಪುನರುಜ್ಜೀವನಗೊಳಿಸುವ ಯೋಜನೆಯ (Project REWARD) ಅನುಷ್ಠಾನಕ್ಕಾಗಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಂದರೆ, ಕೃಷಿ ಅಭಿವೃದ್ಧಿ ಮತ್ತು ಜಲ ಸಂಪನ್ಮೂಲಗಳ ನಿರ್ವಹಣೆಗಾಗಿ ನಡೆಯುತ್ತಿರುವ ಪ್ರಾಜೆಕ್ಟ್ ರಿವಾರ್ಡ್ ಅಡಿಯಲ್ಲಿ ಭಾರತ ಸರ್ಕಾರ ಮತ್ತು ವಿಶ್ವಬ್ಯಾಂಕ್ ನಡುವೆ $115 ಮಿಲಿಯನ್ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಇನ್ನು ಮುಂದೆ ಬೆಂಗಳೂರು ಸೇರಿ ರಾಜ್ಯದಲ್ಲಿ ಕ್ಲಸ್ಟರ್ ಮತ್ತು ಬಿಗ್ ಕ್ಲಸ್ಟರ್ ಜೋನ್ ಗಳು ಜಾರಿಗೆ ಬರಲಿವೆ. 5 ಕ್ಕಿಂತ ಹೆಚ್ಚು ಕೇಸ್ ಗಳು ವರದಿಯಾದ್ರೆ ಕ್ಲಸ್ಟರ್ ಜೋನ್ ಎಂದು ಪರಿಗಣಿಸಲು ಆದೇಶ ನೀಡಲಾಗಿದೆ.
ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿಧಾನಸಭಾ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇರಳದ ಸರ್ಕಾರವು ಕೈಗೊಂಡಿರುವ ಕ್ರಮಗಳ ರೀತಿಯಲ್ಲಿಯೇ ರಾಜ್ಯದಲ್ಲಿನ ಸರ್ಕಾರವು ಕೂಡ ತೆಗೆದುಕೊಳ್ಳಬೇಕು ಎಂದು ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.