ರಾಜ್ಯದಲ್ಲಿ ಕೊರೋನಾ 2ನೇ ಅಲೆ ನಿಯಂತ್ರಿಸಲು ಸರ್ಕಾರ ಜೂನ್. 7ರವರೆಗೆ ಲಾಕ್ ಡೌನ್ ಘೋಷಣೆ ಮಾಡಿದೆ. ಇದರ ಮಧ್ಯೆ ಹೆಳ್ಳಿಗಳಲ್ಲಿಯೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದಿಂದಾಗಿ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಕೇಸ್ ಸೆಂಟರ್ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಲ್ಲದೆ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆಯ ಮಾಹಿತಿಯನ್ನು ಲಭ್ಯವಾಗುವಂತೆ ಮಾಡಿದೆ.
ರಾಜ್ಯದ 176 ತಾಲ್ಲೂಕುಗಳ 285 ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಕೆಲವು ಕಡೆ ಎರಡು ಕೇಂದ್ರಗಳನ್ನು ಗುರುತಿಸಲಾಗಿದೆ. 900 ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗಿದೆ. 40 ಸದಸ್ಯರಿಗೆ ಒಂದು ತಂಡ ರಚಿಸಲಾಗಿದೆ. ಪ್ರತಿ ತಂಡಕ್ಕೆ 5 ದಿನಗಳು ತರಬೇತಿ
ಈಗ ಪಂಚಾಯಿತಿಗೆ ಆಯ್ಕೆಯಾಗಿರುವ ಸದಸ್ಯರ ಸಹಾಯದಿಂದಲೇ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಜೊತೆಗೂಡಿ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಈ ಪ್ರಾದೇಶಿಕ ಪಕ್ಷವನ್ನು ನಮ್ಮ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ನಾನು ಹಗಲು ರಾತ್ರಿ ಶ್ರಮಿಸುತ್ತೇನೆ- ಹೆಚ್.ಡಿ. ದೇವೇಗೌಡ
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳಿಂದ ಆಯಾ ಪಕ್ಷದ ಚಿಹ್ನೆಗಳ ಮೂಲಕ ಅಭ್ಯರ್ಥಿಗಳು ಕಣಕ್ಕಿಳಿದಿರುವುದಿಲ್ಲವಾದರೂ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿರುವ ಕಾರಣಕ್ಕೆ ರಾಜ್ಯದ ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಗೆ ಈ ಚುನಾವಣೆ ನಿರ್ಣಾಯಕವಾಗಿದೆ.
ಅಧಿಕಾರವನ್ನು ವಿಕೇಂದ್ರೀಕರಣಗೊಳಿಸಬೇಕೆಂಬ ಮಹದಾಶಯಗಳೊಂದಿಗೆ ಗ್ರಾಮ ಪಂಚಾಯತಿಗಳ ರಚನೆಯಾಗಿದೆ. ಹಾಗೆ ರಾಷ್ಟ್ರ ಮಟ್ಟದಲ್ಲಿ ಪಂಚಾಯತಿ ವ್ಯವಸ್ಥೆಗೆ ಕಾಯಕಲ್ಪ ನೀಡಿದವರು ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ. ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ನಜೀರ್ ಸಾಬ್.
ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಮತ್ತು ಕೃಷಿ ಪರವಾದ ಆಡಳಿತವನ್ನು ಗಮನಿಸಿ ಜನರು ಬಿಜೆಪಿ(BJP) ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.