ಗುಜರಾತ್ನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಆಡಲು ಕಣಕ್ಕಿಳಿಯದಿದ್ದರೂ ಕ್ರೀಡಾಕೂಟ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಸಿಂಧು, ಬ್ಯಾಡ್ಮಿಂಟನ್ ಆಟಗಾರರು ಮಾತ್ರವಲ್ಲದೇ ಅನೇಕ ಬೇರೆ ಬೇರೆ ಕ್ರೀಡೆಗಳ ಆಟಗಾರರ ಜೊತೆ ತಮ್ಮ ಮಾತನಾಡಿ ತಮ್ಮ ಅನುಭವ ಹಂಚಿಕೊಂಡರು
ಗುರುವಾರದ ಘಟನೆಯಲ್ಲಿ, ಹೊಸದಾಗಿ ಪ್ರಾರಂಭಿಸಲಾದ ಸೆಮಿ-ಹೈ-ಸ್ಪೀಡ್ ರೈಲು ನಾಲ್ಕು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಅದರ ಕೋನ್ ಕಳಚಿ ಬಿದ್ದಿದೆ. ಫೈಬರ್-ಬಲವರ್ಧಿತ ಪ್ಲಾಸ್ಟಿಕ್ನಿಂದ ಮಾಡಿದ ಬಂಪರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಪ್ರಾಣಿಗಳು ಸಾವನ್ನಪ್ಪಿವೆ.
ಗುಜರಾತ್ನ ರಾಜ್ಕೋಟ್ನಲ್ಲಿ ನಡೆದ ಗಾರ್ಬಾ ಕಾರ್ಯಕ್ರಮವೊಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ದಿಕ್ಕಿನಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಯನ್ನು ಎಸೆದರು, ಆದರೆ ವಸ್ತುವು ಅವರಿಗೆ ತಾಗಲಿಲ್ಲ ಮತ್ತು ಅವರ ತಲೆಯ ಮೇಲೆ ಹಾದುಹೋಯಿತು ಎನ್ನಲಾಗಿದೆ.
ಗುಜರಾತ್ ನಲ್ಲಿ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡುವ ಸಲುವಾಗಿ ಪ್ರಧಾನಿ ಮೋದಿ ಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿಡ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
Urban Naxal: ಪರಿಸರ ಖಾತೆಗಳ ಸಚಿವರುಗಳ ಎರಡು ದಿನಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಪಂಡಿತ್ ನೆಹರು ಅವರು ಆರಂಭಿಸಿದ ಕೆಲಸ ನಾನು ಪ್ರಧಾನಿಯಾದ ಬಳಿಕ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ದೇಶದ ಎಷ್ಟು ಹಣ ವ್ಯರ್ಥವಾಗಿದೆ ಎಂಬುದನ್ನು ನೀವೇ ಯೋಚಿಸಿ ಎಂದಿದ್ದಾರೆ.
Rains Havoc: ದೇಶದ ಹಲವು ರಾಜ್ಯಗಳಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ದೇಶದ ಹಲವು ನಗರಗಳಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಜನರು ಸಾಕಷ್ಟು ತೊಂದರೆ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ್, ಚತ್ತೀಸ್ಗಡ್, ಬಿಹಾರ, ಝಾರ್ಖಂಡ್, ಪಶ್ಚಿಮ ಬಂಗಾಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸತತ ಮಳೆ ಸುರಿದಿದೆ.
Gujarat: ಗುಜರಾತ್ನ ಅಹಮದಾಬಾದ್ನ ಮೆಮ್ನಗರ ಬಸ್ ನಿಲ್ದಾಣದಲ್ಲಿ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಹೇಳಿದ್ದಾರೆ.
ಗುಜರಾತ್ನ ಅರಾವಳಿಯಲ್ಲಿ ಭಾರೀ ರಸ್ತೆ ಅಪಘಾತ: ಗುಜರಾತ್ನ ಅರಾವಳಿ ಜಿಲ್ಲೆಯಲ್ಲಿ ಭಾರೀ ಅಪಘಾತ ಸಂಭವಿಸಿದ್ದು, ಇಲ್ಲಿ ವೇಗವಾಗಿ ಬರುತ್ತಿದ್ದ ಕಾರು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.
ಆಮ್ ಆದ್ಮಿ ಪಕ್ಷವನ್ನು ಹುಟ್ಟು ಹಾಕಿ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಜನಪರ ಕೆಲಸ ಮಾಡುತ್ತಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಇದೀಗ ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಅವರು ಜೂನ್ 18 ರಂದು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಡಲಿರುವ ಕಾರಣ, ಗುಜರಾತ್ ರಾಜಧಾನಿ ಗಾಂಧಿನಗರದ ರಸ್ತೆಯೊಂದಕ್ಕೆ ಬುಧವಾರ ಅವರ ಹೆಸರನ್ನು ಇಡಲಾಗಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಉಗ್ರಗಾಮಿ ಸಂಘಟನೆ ಅಲ್-ಖೈದಾ ಭಾರತದ ಗುಜರಾತ್, ಉತ್ತರ ಪ್ರದೇಶ, ಮುಂಬೈ ಮತ್ತು ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.