ಬೇಸಿಗೆ ಸಂದರ್ಭದಲ್ಲಿ ಮಾತ್ರ ಬಿಯರ್ ಮಾರಾಟ ಚೇತರಿಕೆ ಕಾಣುತ್ತಿದ್ದ ಚಾಮರಾಜನಗರದಲ್ಲಿ ಈಗ ಬಿಯರ್ ಮಾರಾಟವೇ ಅಧಿಕವಾಗಿದ್ದು ಭಾರತೀಯ ಮದ್ಯಕ್ಕೆ ಹೋಲಿಸಿದರೇ ಬಿಯರ್ ಮಾರಾಟ ವೇಗ ಪಡೆದುಕೊಂಡಿದೆ.
ನಾಯಿಗಳು ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ, ಅಂತಹದರಲ್ಲಿ ಒಂದೇ ಕಡೇ ಹತ್ತಾರು ನಾಯಿಗಳ ಶಿಸ್ತಿನ ನಡೆ, ಚಿನ್ನಾಟವನ್ನು ನೂರಾರು ಮಂದಿ ಕಣ್ತುಂಬಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆಯಿತು.
ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ಡಾಂಬರೀಕರಣ ಮಾಡಿಸುವ ಉದ್ದೇಶದಿಂದ ಡಿ.18ರಿಂದ 20ರವರೆಗೆ ಮೂರು ದಿನಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಕೋಡಹಳ್ಳಿ ಗ್ರಾಮದಿಂದ ಬುತ್ತಿ ಕಟ್ಟಿಕೊಂಡು, ಬೆತ್ತ ಹಿಡಿದು ಮಹದೇಶ್ವರನ ನಾಮಸ್ಮರಣೆ ಮಾಡುತ್ತಾ ಸುಮಾರು 4 ದಿನಗಳ ಕಾಲ 160 ಕಿಮೀ ಪಾದಯಾತ್ರೆ ಆರಂಭಿಸಿರುವ ಯುವಕರ ತಂಡ ಹಿಂದಿನಿಂದ ಬೆಳೆದು ಬಂದ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಮಳೆ ಬರಲಿ ಎಂದು ಸಿದ್ದರಾಮಯ್ಯ ದೇವರಿಗೆ ಬೇಡಿಕೊಂಡಿದ್ದಾರೆ. ದೇವರಿಗೆ ಬೇಡಿದರೆ ಮಳೆ ಬರಲ್ಲ, ಇರುವ ನೀರನ್ನು ಮೊದಲು ಉಳಿಸಿ ಅಂಥಾ ನಾವು ಕೇಳುತ್ತಿದ್ದೇವೆ- ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್
ರೈತ ಸಂಘ ಹಾಗೂ ಅರಿಶಿಣ ಬೆಳೆಗಾರರ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆ ಎಪಿಎಂಸಿ ಆವರಣದಲ್ಲಿ ರೈತರು ಧರಣಿ ನಡೆಸುತ್ತಿದ್ದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಪುಷ್ಬ ಚಲನಚಿತ್ರದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ
ತರಕಾರಿ ವಾಹನದಲ್ಲಿ ರಕ್ತಚಂದನ ತುಂಡುಗಳನ್ನ ಸಾಗಿಸುತ್ತಿದ್ದ ಖದೀಮರು
ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳ ತಂಡದಿಂದ ದಾಳಿ
ಐದು ಮಂದಿ ಆರೋಪಿಗಳನ್ನ ಬಂಧಿಸಿದ ಅರಣ್ಯಾಧಿಕಾರಿಗಳು
ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ಲಕ್ಕೂರು ಬಳಿ ದಾಳಿ ನಡೆಸಿ ಬಂಧನ
ಬಂಧಿತರಿಂದ ಸುಮಾರು 50 ಕೆಜಿ ತೂಕದ ರಕ್ತಚಂದನ ವಶ
ಹೊಟ್ಟೆ ನೋವಿನಿಂದ ಬಳಲಿ ಅಸ್ವಸ್ಥರಾಗಿದ್ದ ವಿದ್ಯಾರ್ಥಿನಿಯರನ್ನು ಕೂಡಲೇ ಹೊರೆಯಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊರೆಯಾಲ ಆಸ್ಪತ್ರೆಯ ವೈದ್ಯರಾದ ಡಾ. ದೀಪಕ್ ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ.
Karnataka Vidhansabha Chunav Latest Updates: ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕ ಎಲಚೆಟ್ಟಿ ಗ್ರಾಮದಲ್ಲಿ 101 ಅರ್ಹ ಮತದಾರರಿದ್ದಾರೆ. ಆದರೆ, ಗ್ರಾಮಕ್ಕೆ ಸರಿಯಾದ ರಸ್ತೆ ಹಾಗೂ ಬಸ್ ಸೌಕರ್ಯ ಇಲ್ಲವೆಂದು ಗ್ರಾಮಸ್ಥರು ಅಸಮಾಧಾನಗೊಂಡು ಮತದಾನ ಬಹಿಷ್ಕಾರ ಮಾಡಿದ್ದಾರೆ.
Karnataka Vidhansabha Chunav Latest Updates: ಮತಗಟ್ಟೆಯತ್ತ ವನವಾಸಿಗಳನ್ನು ಸೆಳೆಯುವ ಉದ್ದೇಶದಿಂದ ಸ್ವಾಗತ ಕಮಾನು, ಬಣ್ಣಬಣ್ಣದ ಬಾವುಟಗಳು, ಜನಪದ ಚಿತ್ರಗಳನ್ನು ಮತಗಟ್ಟೆಯಲ್ಲಿ ರಚಿಸಿ ಹೊಸ ಲುಕ್ ಕೊಟ್ಟಿದ್ದು ಸೋಲಿಗರು ಸಂಭ್ರಮದಿಂದ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ರೈತನ ಜಮೀನಿನಲ್ಲಿ ಎರಡು ಹುಲಿ ಕಾಣಿಸಿಕೊಂಡು ಭಯಭೀತಗೊಳಿಸಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ನಡೆದಿದೆ. ಕೊಡಸೋಗೆ ಗ್ರಾಮದ ರವಿ ಎಂಬವರ ಹೊಲದಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.